ಮನರಂಜನೆ

ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ರಶ್ಮಿಕಾ ಮಂದಣ್ಣ-ವಿಜಯ್‌ ದೇವರಕೊಂಡ ; ಮದುವೆ ಯಾವಾಗ?

ಬೆಂಗಳೂರು : ಟಾಲಿವುಡ್‌ ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ನಿನ್ನೆ ಮೊನ್ನೆಯದಲ್ಲ. ಹಲವು ವರ್ಷಗಳಿಂದ ಇವರಿಬ್ಬರು ಪ್ರೀತಿಯಲ್ಲಿದ್ದಾರೆ, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದೆಲ್ಲಾ ಹೇಳಲಾಗುತ್ತಿತ್ತು. ಇದೀಗ ಇವರಿಬ್ಬರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮುಂದಿನ ವರ್ಷ ಹಸಮಣೆ ಏರಲಿದ್ದಾರೆ ಎಂದು ವರದಿಯಾಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಅವರು ಶುಕ್ರವಾರ (ಅ.3) ಹೈದರಾಬಾದ್‌ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ, ಟಾಲಿವುಡ್‌ನಲ್ಲಿ ದೀರ್ಘಕಾಲದಿಂದ ಅವರ ಡೇಟಿಂಗ್‌ ಬಗ್ಗೆ ಇದ್ದ ಊಹಾಪೋಹಗಳಿಗೆ ಒಂದು ಮಹತ್ವದ ತಿರುವು ನೀಡಿದೆ. ರಶ್ಮಿಕಾ ಆಗಲಿ, ಅಥವಾ ವಿಜಯ್‌ ದೇವರಕೊಂಡ ಆಗಲಿ, ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಇವರಿಬ್ಬರ ನಿಶ್ಚಿತಾರ್ಥವು ಆಪ್ತ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:-ಮ.ಬೆಟ್ಟ | ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಲು ಖಂಡ್ರೆ ಸೂಚನೆ

2026ರ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ಈ ನಿಶ್ಚಿತಾರ್ಥದ ಕುರಿತು ಯಾವುದೇ ಅಧಿಕೃತ ಹೇಳಿಕೆಯನ್ನ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಈ ಸುದ್ದಿಯು ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಈ ಹಿಂದೆ ರಶ್ಮಿಕಾ ಮಂದಣ್ಣ ನಟ ರಕ್ಷಿತ್‌ ಶೆಟ್ಟಿ ಜೊತೆಗೆ ತಮ್ಮ ನಿಶ್ಚಿತಾರ್ಥವನ್ನ ಮುರಿದುಕೊಂಡಿದ್ದರು. ಇದೇ ಸಮಯದಲ್ಲಿ ʻಗೀತಾ ಗೋವಿಂದಂʼ ಚಿತ್ರದ ಸೆಟ್‌ನಲ್ಲಿ ವಿಜಯ್‌ ದೇವರಕೊಂಡ ಅವರನ್ನ ರಶ್ಮಿಕಾ ಭೇಟಿಯಾದರು. ರಶ್ಮಿಕಾ ಹಾಗೂ ವಿಜಯ್‌ ದೇವರಕೊಂಡ ನಡುವಿನ ಸಂಬಂಧದ ಬಗ್ಗೆ ಚರ್ಚೆಯು ʻಡಿಯರ್‌ ಕಾಮ್ರೇಡ್‌ʼ ಚಿತ್ರದೊಂದಿಗೆ ಮತ್ತಷ್ಟು ತೀವ್ರಗೊಂಡಿತು. ಚಿತ್ರದಲ್ಲಿನ ಇವರಿಬ್ಬರ ಕೆಮಿಸ್ಟ್ರೀ ಪ್ರೇಕ್ಷಕರನ್ನ ಆಕರ್ಷಿಸಿತು. ಅಲ್ಲದೇ, ಇವರಿಬ್ಬರ ನಡುವಿನ ಲವ್‌ ಗಾಸಿಪ್‌ ಚರ್ಚೆಗೆ ಬಂದಿತು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

17 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

17 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

17 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago