ಮನರಂಜನೆ

ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ರಶ್ಮಿಕಾ ಮಂದಣ್ಣ-ವಿಜಯ್‌ ದೇವರಕೊಂಡ ; ಮದುವೆ ಯಾವಾಗ?

ಬೆಂಗಳೂರು : ಟಾಲಿವುಡ್‌ ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ನಿನ್ನೆ ಮೊನ್ನೆಯದಲ್ಲ. ಹಲವು ವರ್ಷಗಳಿಂದ ಇವರಿಬ್ಬರು ಪ್ರೀತಿಯಲ್ಲಿದ್ದಾರೆ, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದೆಲ್ಲಾ ಹೇಳಲಾಗುತ್ತಿತ್ತು. ಇದೀಗ ಇವರಿಬ್ಬರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮುಂದಿನ ವರ್ಷ ಹಸಮಣೆ ಏರಲಿದ್ದಾರೆ ಎಂದು ವರದಿಯಾಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಅವರು ಶುಕ್ರವಾರ (ಅ.3) ಹೈದರಾಬಾದ್‌ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ, ಟಾಲಿವುಡ್‌ನಲ್ಲಿ ದೀರ್ಘಕಾಲದಿಂದ ಅವರ ಡೇಟಿಂಗ್‌ ಬಗ್ಗೆ ಇದ್ದ ಊಹಾಪೋಹಗಳಿಗೆ ಒಂದು ಮಹತ್ವದ ತಿರುವು ನೀಡಿದೆ. ರಶ್ಮಿಕಾ ಆಗಲಿ, ಅಥವಾ ವಿಜಯ್‌ ದೇವರಕೊಂಡ ಆಗಲಿ, ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಇವರಿಬ್ಬರ ನಿಶ್ಚಿತಾರ್ಥವು ಆಪ್ತ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:-ಮ.ಬೆಟ್ಟ | ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಲು ಖಂಡ್ರೆ ಸೂಚನೆ

2026ರ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ಈ ನಿಶ್ಚಿತಾರ್ಥದ ಕುರಿತು ಯಾವುದೇ ಅಧಿಕೃತ ಹೇಳಿಕೆಯನ್ನ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಈ ಸುದ್ದಿಯು ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಈ ಹಿಂದೆ ರಶ್ಮಿಕಾ ಮಂದಣ್ಣ ನಟ ರಕ್ಷಿತ್‌ ಶೆಟ್ಟಿ ಜೊತೆಗೆ ತಮ್ಮ ನಿಶ್ಚಿತಾರ್ಥವನ್ನ ಮುರಿದುಕೊಂಡಿದ್ದರು. ಇದೇ ಸಮಯದಲ್ಲಿ ʻಗೀತಾ ಗೋವಿಂದಂʼ ಚಿತ್ರದ ಸೆಟ್‌ನಲ್ಲಿ ವಿಜಯ್‌ ದೇವರಕೊಂಡ ಅವರನ್ನ ರಶ್ಮಿಕಾ ಭೇಟಿಯಾದರು. ರಶ್ಮಿಕಾ ಹಾಗೂ ವಿಜಯ್‌ ದೇವರಕೊಂಡ ನಡುವಿನ ಸಂಬಂಧದ ಬಗ್ಗೆ ಚರ್ಚೆಯು ʻಡಿಯರ್‌ ಕಾಮ್ರೇಡ್‌ʼ ಚಿತ್ರದೊಂದಿಗೆ ಮತ್ತಷ್ಟು ತೀವ್ರಗೊಂಡಿತು. ಚಿತ್ರದಲ್ಲಿನ ಇವರಿಬ್ಬರ ಕೆಮಿಸ್ಟ್ರೀ ಪ್ರೇಕ್ಷಕರನ್ನ ಆಕರ್ಷಿಸಿತು. ಅಲ್ಲದೇ, ಇವರಿಬ್ಬರ ನಡುವಿನ ಲವ್‌ ಗಾಸಿಪ್‌ ಚರ್ಚೆಗೆ ಬಂದಿತು.

ಆಂದೋಲನ ಡೆಸ್ಕ್

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

2 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

2 hours ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

2 hours ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

2 hours ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

2 hours ago