ಮನರಂಜನೆ

ಮತ್ತೆ ಸೆನ್ಸಾರ್ ಮಂಡಳಿ ಬಗ್ಗೆ ರವಿ ಶ್ರೀವತ್ಸ ಮುನಿಸು

‘ಡೆಡ್ಲಿ ಸೋಮ’, ‘ಮಾದೇಶ’ ಖ್ಯಾತಿಯ ರವಿ ಶ್ರೀವತ್ಸ ನಿರ್ಮಿಸಿ-ನಿರ್ದೇಶಿಸಿರುವ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ನಟ-ನಿರ್ದೇಶಕ ಉಪೇಂದ್ರ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಬಾಗಲಕೋಟೆಯ ಪಿಲ್ಲಾರಿ ಫಾಲ್ಸ್ ನಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ರವಿ ಶ್ರೀವತ್ಸ ಅವರು ಕಥೆಗಾರ ಎಂ.ಎಸ್‌. ರಮೇಶ್ ಜೊತೆಗೂಡಿ ಈ ಚಿತ್ರಕ್ಕೆ ಚಿತರಕಥೆ, ಸಂಭಾಷಣೆ ರಚಿಸಿ ನಿರ್ದೇಶಿಸಿದ್ದಾರೆ. ಭೀಮೆಯ ಮಡಿಲಲ್ಲಿ ಎಂಬ ಟ್ಯಾಗ್ ಲೈನ್ ಈ ಚಿತ್ರಕ್ಕಿದ್ದು, ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ.

ಇದನ್ನು ಓದಿ: ಡಿಕೆಶಿ ಅವರ ನಟ್ಟುಬೋಲ್ಟು ಟೈಟ್‌ ಹೇಳಿಕೆ : ಮೌನ ಮುರಿದ ನಟ ಕಿಚ್ಚ ಸುದೀಪ್‌ ಹೇಳಿದ್ದೇನು?

ಈ ಚಿತ್ರದಲ್ಲಿ ಹಿಂಸೆ ಜಾಸ್ತಿ ಇದೆ ಎಂಬ ಕಾರಣ ನೀಡಿ, ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ಬ್ಯಾನ್‍ ಮಾಡಿತ್ತಂತೆ. ಈ ಹಿಂದೆಯೂ ರವಿ ಶ್ರೀವತ್ಸ ನಿರ್ದೇಶನದ ಕೆಲವು ಚಿತ್ರಗಳನ್ನು ಸೆನ್ಸಾರ್ ಮಂಡಳಿ ಬ್ಯಾನ್‍ ಮಾಡಿತ್ತು. ಕೊನೆಗೆ ರಿವೈಸಿಂಗ್‍ ಕಮಿಟಿಯಲ್ಲಿ ಚಿತ್ರದ ಪ್ರದರ್ಶನಕ್ಕೆ ಅನುಮತಿ ಸಿಕ್ಕಿತ್ತು. ಅದು ಈ ಚಿತ್ರದಲ್ಲೂ ಮುಂದುವರೆದಿದೆ.

ಈ ಕುರಿತು ಮಾತನಾಡುವ ರವಿ ಶ್ರೀವತ್ಸ, ‘ಚಿತ್ರದಲ್ಲಿ ಹಿಂಸೆ ಜಾಸ್ತಿ ಇದೆ ಎಂಬ ಕಾರಣ ನೀಡಿ ಪ್ರಾದೇಶಿಕ ಸೆನ್ಸಾರ್ ಮಂಡಳಿ ನಮ್ಮ ಚಿತ್ರವನ್ನು ಬ್ಯಾನ್ ಮಾಡಿದ್ದಲ್ಲದೆ, ರಿವೈಸಿಂಗ್‍ ಕಮಿಟಿಗೆ ಹೋಗಿ ಸೆನ್ಸಾರ್ ಮಾಡಿಸಿಕೊಳ್ಳಿ ಎಂದರು. ನಂತರ ರಿವೈಸಿಂಗ್ ಕಮಿಟಿಗೆ ಹೋಗಿ ಚಿತ್ರವನ್ನು ಸೆನ್ಸಾರ್ ಮಾಡಿಸಿಕೊಂಡಿದ್ದಾಗಿ’ ವಿವರಿಸಿದರು.

‘ಗ್ಯಾಂಗ್ಸ್ ಆಫ್‍ ಯು.ಕೆ’ ಚಿತ್ರದಲ್ಲಿ ‘ಒರಟ’ ಪ್ರಶಾಂತ್, ಜ್ಯೋತಿ ಶೆಟ್ಟಿ, ಕೋಟೆ ಪ್ರಭಾಕರ್, ಪದ್ಮಾ ವಾಸಂತಿ, ಮುನಿ ಅಲ್ಲದೆ ಕೆವಿ‌.ರಾಜು ಅವರ ಪುತ್ರ ಅಮೋಘ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

7 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

8 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

8 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

8 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

8 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

9 hours ago