‘ಡೆಡ್ಲಿ ಸೋಮ’, ‘ಮಾದೇಶ’ ಖ್ಯಾತಿಯ ರವಿ ಶ್ರೀವತ್ಸ ನಿರ್ಮಿಸಿ-ನಿರ್ದೇಶಿಸಿರುವ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ನಟ-ನಿರ್ದೇಶಕ ಉಪೇಂದ್ರ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ಬಾಗಲಕೋಟೆಯ ಪಿಲ್ಲಾರಿ ಫಾಲ್ಸ್ ನಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ರವಿ ಶ್ರೀವತ್ಸ ಅವರು ಕಥೆಗಾರ ಎಂ.ಎಸ್. ರಮೇಶ್ ಜೊತೆಗೂಡಿ ಈ ಚಿತ್ರಕ್ಕೆ ಚಿತರಕಥೆ, ಸಂಭಾಷಣೆ ರಚಿಸಿ ನಿರ್ದೇಶಿಸಿದ್ದಾರೆ. ಭೀಮೆಯ ಮಡಿಲಲ್ಲಿ ಎಂಬ ಟ್ಯಾಗ್ ಲೈನ್ ಈ ಚಿತ್ರಕ್ಕಿದ್ದು, ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ.
ಇದನ್ನು ಓದಿ: ಡಿಕೆಶಿ ಅವರ ನಟ್ಟುಬೋಲ್ಟು ಟೈಟ್ ಹೇಳಿಕೆ : ಮೌನ ಮುರಿದ ನಟ ಕಿಚ್ಚ ಸುದೀಪ್ ಹೇಳಿದ್ದೇನು?
ಈ ಚಿತ್ರದಲ್ಲಿ ಹಿಂಸೆ ಜಾಸ್ತಿ ಇದೆ ಎಂಬ ಕಾರಣ ನೀಡಿ, ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ಬ್ಯಾನ್ ಮಾಡಿತ್ತಂತೆ. ಈ ಹಿಂದೆಯೂ ರವಿ ಶ್ರೀವತ್ಸ ನಿರ್ದೇಶನದ ಕೆಲವು ಚಿತ್ರಗಳನ್ನು ಸೆನ್ಸಾರ್ ಮಂಡಳಿ ಬ್ಯಾನ್ ಮಾಡಿತ್ತು. ಕೊನೆಗೆ ರಿವೈಸಿಂಗ್ ಕಮಿಟಿಯಲ್ಲಿ ಚಿತ್ರದ ಪ್ರದರ್ಶನಕ್ಕೆ ಅನುಮತಿ ಸಿಕ್ಕಿತ್ತು. ಅದು ಈ ಚಿತ್ರದಲ್ಲೂ ಮುಂದುವರೆದಿದೆ.
ಈ ಕುರಿತು ಮಾತನಾಡುವ ರವಿ ಶ್ರೀವತ್ಸ, ‘ಚಿತ್ರದಲ್ಲಿ ಹಿಂಸೆ ಜಾಸ್ತಿ ಇದೆ ಎಂಬ ಕಾರಣ ನೀಡಿ ಪ್ರಾದೇಶಿಕ ಸೆನ್ಸಾರ್ ಮಂಡಳಿ ನಮ್ಮ ಚಿತ್ರವನ್ನು ಬ್ಯಾನ್ ಮಾಡಿದ್ದಲ್ಲದೆ, ರಿವೈಸಿಂಗ್ ಕಮಿಟಿಗೆ ಹೋಗಿ ಸೆನ್ಸಾರ್ ಮಾಡಿಸಿಕೊಳ್ಳಿ ಎಂದರು. ನಂತರ ರಿವೈಸಿಂಗ್ ಕಮಿಟಿಗೆ ಹೋಗಿ ಚಿತ್ರವನ್ನು ಸೆನ್ಸಾರ್ ಮಾಡಿಸಿಕೊಂಡಿದ್ದಾಗಿ’ ವಿವರಿಸಿದರು.
‘ಗ್ಯಾಂಗ್ಸ್ ಆಫ್ ಯು.ಕೆ’ ಚಿತ್ರದಲ್ಲಿ ‘ಒರಟ’ ಪ್ರಶಾಂತ್, ಜ್ಯೋತಿ ಶೆಟ್ಟಿ, ಕೋಟೆ ಪ್ರಭಾಕರ್, ಪದ್ಮಾ ವಾಸಂತಿ, ಮುನಿ ಅಲ್ಲದೆ ಕೆವಿ.ರಾಜು ಅವರ ಪುತ್ರ ಅಮೋಘ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…