‘ಡೆಡ್ಲಿ ಸೋಮ’, ‘ಮಾದೇಶ’ ಖ್ಯಾತಿಯ ರವಿ ಶ್ರೀವತ್ಸ ನಿರ್ಮಿಸಿ-ನಿರ್ದೇಶಿಸಿರುವ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ನಟ-ನಿರ್ದೇಶಕ ಉಪೇಂದ್ರ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ಬಾಗಲಕೋಟೆಯ ಪಿಲ್ಲಾರಿ ಫಾಲ್ಸ್ ನಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ರವಿ ಶ್ರೀವತ್ಸ ಅವರು ಕಥೆಗಾರ ಎಂ.ಎಸ್. ರಮೇಶ್ ಜೊತೆಗೂಡಿ ಈ ಚಿತ್ರಕ್ಕೆ ಚಿತರಕಥೆ, ಸಂಭಾಷಣೆ ರಚಿಸಿ ನಿರ್ದೇಶಿಸಿದ್ದಾರೆ. ಭೀಮೆಯ ಮಡಿಲಲ್ಲಿ ಎಂಬ ಟ್ಯಾಗ್ ಲೈನ್ ಈ ಚಿತ್ರಕ್ಕಿದ್ದು, ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ.
ಇದನ್ನು ಓದಿ: ಡಿಕೆಶಿ ಅವರ ನಟ್ಟುಬೋಲ್ಟು ಟೈಟ್ ಹೇಳಿಕೆ : ಮೌನ ಮುರಿದ ನಟ ಕಿಚ್ಚ ಸುದೀಪ್ ಹೇಳಿದ್ದೇನು?
ಈ ಚಿತ್ರದಲ್ಲಿ ಹಿಂಸೆ ಜಾಸ್ತಿ ಇದೆ ಎಂಬ ಕಾರಣ ನೀಡಿ, ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ಬ್ಯಾನ್ ಮಾಡಿತ್ತಂತೆ. ಈ ಹಿಂದೆಯೂ ರವಿ ಶ್ರೀವತ್ಸ ನಿರ್ದೇಶನದ ಕೆಲವು ಚಿತ್ರಗಳನ್ನು ಸೆನ್ಸಾರ್ ಮಂಡಳಿ ಬ್ಯಾನ್ ಮಾಡಿತ್ತು. ಕೊನೆಗೆ ರಿವೈಸಿಂಗ್ ಕಮಿಟಿಯಲ್ಲಿ ಚಿತ್ರದ ಪ್ರದರ್ಶನಕ್ಕೆ ಅನುಮತಿ ಸಿಕ್ಕಿತ್ತು. ಅದು ಈ ಚಿತ್ರದಲ್ಲೂ ಮುಂದುವರೆದಿದೆ.
ಈ ಕುರಿತು ಮಾತನಾಡುವ ರವಿ ಶ್ರೀವತ್ಸ, ‘ಚಿತ್ರದಲ್ಲಿ ಹಿಂಸೆ ಜಾಸ್ತಿ ಇದೆ ಎಂಬ ಕಾರಣ ನೀಡಿ ಪ್ರಾದೇಶಿಕ ಸೆನ್ಸಾರ್ ಮಂಡಳಿ ನಮ್ಮ ಚಿತ್ರವನ್ನು ಬ್ಯಾನ್ ಮಾಡಿದ್ದಲ್ಲದೆ, ರಿವೈಸಿಂಗ್ ಕಮಿಟಿಗೆ ಹೋಗಿ ಸೆನ್ಸಾರ್ ಮಾಡಿಸಿಕೊಳ್ಳಿ ಎಂದರು. ನಂತರ ರಿವೈಸಿಂಗ್ ಕಮಿಟಿಗೆ ಹೋಗಿ ಚಿತ್ರವನ್ನು ಸೆನ್ಸಾರ್ ಮಾಡಿಸಿಕೊಂಡಿದ್ದಾಗಿ’ ವಿವರಿಸಿದರು.
‘ಗ್ಯಾಂಗ್ಸ್ ಆಫ್ ಯು.ಕೆ’ ಚಿತ್ರದಲ್ಲಿ ‘ಒರಟ’ ಪ್ರಶಾಂತ್, ಜ್ಯೋತಿ ಶೆಟ್ಟಿ, ಕೋಟೆ ಪ್ರಭಾಕರ್, ಪದ್ಮಾ ವಾಸಂತಿ, ಮುನಿ ಅಲ್ಲದೆ ಕೆವಿ.ರಾಜು ಅವರ ಪುತ್ರ ಅಮೋಘ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…