ಮನರಂಜನೆ

ಅಸಲಿ ಆಟ ಶುರು: ‘ಬಿಗ್‍ ಬಾಸ್‍ 12’ ಕಾರ್ಯಕ್ರಮಕ್ಕೆ ಚಾಲನೆ

ಕಳೆದೊಂದು ವರ್ಷದಿಂದ ‘ಬಿಗ್‍ ಬಾಸ್‍’ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕಳೆದ ವರ್ಷ ಕಾರ್ಯಕ್ರಮದ ಮುಕ್ತಾಯದ ಹೊತ್ತಿಗೆ ಮುಂದಿನ ವರ್ಷದಿಂದ ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡುವುದಿಲ್ಲ ಎಂದು ಸುದ್ದಿಯಾಗಿತ್ತು. ಕೆಲವು ತಿಂಗಳ ಹಿಂದೆ ಸುದೀಪ್‍ ಖುದ್ದು ಪತ್ರಿಕಾಗೋಷ್ಠಿಯಲ್ಲಿ ‘ಬಿಗ್‍ ಬಾಸ್‍’ ಕಾರ್ಯಕ್ರಮದ 12ನೇ ಅವತರಣಿಕೆಯನ್ನು ನಡೆಸಿಕೊಡುವುದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸೆಪ್ಟೆಂಬರ್‍ನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ಸಿಗುವುದಾಗಿಯೂ ಹೇಳಿದ್ದರು.

ಅಂದರಂತೆ ‘ಬಿಗ್‍ ಬಾಸ್‍ – ಸೀಸನ್‍ 12’ ಕಾರ್ಯಕ್ರಮಕ್ಕೆ ಭಾನುವಾರ ಕೊನೆಗೂ ಚಾಲನೆ ಸಿಕ್ಕಿದೆ. ಸ್ಪರ್ಧಿಗಳು ಈಗಾಗಲೇ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸಹ ಮನೆಗೆ ಹೋಗುವ ಸ್ಪರ್ಧಿಗಳ ಬಗ್ಗೆ ಹಲವು ಊಹಾಪೋಗಳಿದ್ದವು. ಅದಕ್ಕೆ ಪೂರಕವಾಗಿ ಕೆಲವು ಹೆಸರುಗಳು ನಿಜವಾಗಿವೆ.

ಇದನ್ನು ಓದಿ : ಬಿಗ್‌ಬಾಸ್‌ ಕನ್ನಡ 12ರ ಗ್ರ್ಯಾಂಡ್‌ ಓಪನಿಂಗ್‌ : ಸ್ಟೈಲಿಶ್‌ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಕಿಚ್ಚ

ಈ ಪೈಕಿ ಮನೆಗೆ ಹೋದವರಲ್ಲಿ ನಟ ‘ಕಾಕ್ರೋಚ್‍’ ಸುಧಿ, ‘ಕೊತ್ತಲವಾಡಿ’ ಚಿತ್ರದ ನಾಯಕಿ ಕಾವ್ಯಾ ಶೈವ, ಕಡಬಂ ಸತೀಶ್, ಗಿಲ್ಲಿ ನಟ, ಜಾನ್ವಿ, ಧನುಷ್‍, ಚಂದ್ರಪ್ರಭ, ಮಂಜುಭಾಷಿಣಿ, ರಾಷಿಕಾ, ಅಭಿಷೇಕ್‍, ಮಲ್ಲಮ್ಮ, ಅಶ್ವಿನಿ ಎಸ್‍.ಎನ್‍, ಧ್ರುವಂತ್‍, ರಕ್ಷಿತಾ ಶೆಟ್ಟಿ, ಬಾಡಿ ಬಿಲ್ಡರ್‍ ಕರಿಬಸಪ್ಪ, ಸ್ಪಂದನಾ, ಅಶ್ವಿನಿ ಗೌಡ, ಅಮಿತ್ ಮತ್ತು ಮಾಳು ಇದ್ದಾರೆ. ಈ 19 ಸ್ಪರ್ಧಿಗಳ ಪೈಕಿ ಹಲವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡವರಿದ್ದಾರೆ.

ಬರೀ ನಟ-ನಟಿಯರಷ್ಟೇ ಅಲ್ಲ, ಸೋಷಿಯಲ್‍ ಮೀಡಿಯಾದಲ್ಲಿ ದೊಡ್ಡ ಹೆಸರು ಮಾಡಿರುವ ಮತ್ತು ನಟನೆ ಹೊರತಾಗಿ ಬೇರೆಬೇರೆ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಹಲವರು ಈ ಬಾರಿ ಸ್ಪರ್ಧಿಗಳಾಗಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇವರೆಲ್ಲರನ್ನೂ ಸುದೀಪ್‍ ಮನೆಯೊಳಗೆ ಬರ ಮಾಡಿಕೊಂಡಿದ್ದು, ಇಂದಿನಿಂದ ಕಾರ್ಯಕ್ರಮ ರಾತ್ರಿ 09ಕ್ಕೆ ಪ್ರಸಾರವಾಗಲಿದೆ.

ವಿಶೇಷವೆಂದರೆ, ಮೊದಲ ದಿನವೇ ಒಬ್ಬರು ಮನೆಯಿಂದ ಹೊರಗೆ ಹೋಗಬೇಕಿದ್ದು, 19 ಸ್ಪರ್ಧಿಗಳ ಪೈಕಿ ಟಾಟಾ ಬಾಯ್‍ಬಾಯ್‍ ಹೇಳೋರು ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

ಆಂದೋಲನ ಡೆಸ್ಕ್

Recent Posts

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

16 mins ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

21 mins ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

44 mins ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

54 mins ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

1 hour ago

ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಬಜೆಟ್‌ ಮಂಡಿಸಿ ಹೊಸ ದಾಖಲೆ ಬರೆದ ಸಿದ್ದರಾಮಯ್ಯ

ಬೆಂಗಳೂರು: ದಾಖಲೆಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಿಎಂ ಸಿದ್ದರಾಮಯ್ಯ…

2 hours ago