ಮನರಂಜನೆ

ಅಸಲಿ ಆಟ ಶುರು: ‘ಬಿಗ್‍ ಬಾಸ್‍ 12’ ಕಾರ್ಯಕ್ರಮಕ್ಕೆ ಚಾಲನೆ

ಕಳೆದೊಂದು ವರ್ಷದಿಂದ ‘ಬಿಗ್‍ ಬಾಸ್‍’ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕಳೆದ ವರ್ಷ ಕಾರ್ಯಕ್ರಮದ ಮುಕ್ತಾಯದ ಹೊತ್ತಿಗೆ ಮುಂದಿನ ವರ್ಷದಿಂದ ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡುವುದಿಲ್ಲ ಎಂದು ಸುದ್ದಿಯಾಗಿತ್ತು. ಕೆಲವು ತಿಂಗಳ ಹಿಂದೆ ಸುದೀಪ್‍ ಖುದ್ದು ಪತ್ರಿಕಾಗೋಷ್ಠಿಯಲ್ಲಿ ‘ಬಿಗ್‍ ಬಾಸ್‍’ ಕಾರ್ಯಕ್ರಮದ 12ನೇ ಅವತರಣಿಕೆಯನ್ನು ನಡೆಸಿಕೊಡುವುದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸೆಪ್ಟೆಂಬರ್‍ನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ಸಿಗುವುದಾಗಿಯೂ ಹೇಳಿದ್ದರು.

ಅಂದರಂತೆ ‘ಬಿಗ್‍ ಬಾಸ್‍ – ಸೀಸನ್‍ 12’ ಕಾರ್ಯಕ್ರಮಕ್ಕೆ ಭಾನುವಾರ ಕೊನೆಗೂ ಚಾಲನೆ ಸಿಕ್ಕಿದೆ. ಸ್ಪರ್ಧಿಗಳು ಈಗಾಗಲೇ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸಹ ಮನೆಗೆ ಹೋಗುವ ಸ್ಪರ್ಧಿಗಳ ಬಗ್ಗೆ ಹಲವು ಊಹಾಪೋಗಳಿದ್ದವು. ಅದಕ್ಕೆ ಪೂರಕವಾಗಿ ಕೆಲವು ಹೆಸರುಗಳು ನಿಜವಾಗಿವೆ.

ಇದನ್ನು ಓದಿ : ಬಿಗ್‌ಬಾಸ್‌ ಕನ್ನಡ 12ರ ಗ್ರ್ಯಾಂಡ್‌ ಓಪನಿಂಗ್‌ : ಸ್ಟೈಲಿಶ್‌ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಕಿಚ್ಚ

ಈ ಪೈಕಿ ಮನೆಗೆ ಹೋದವರಲ್ಲಿ ನಟ ‘ಕಾಕ್ರೋಚ್‍’ ಸುಧಿ, ‘ಕೊತ್ತಲವಾಡಿ’ ಚಿತ್ರದ ನಾಯಕಿ ಕಾವ್ಯಾ ಶೈವ, ಕಡಬಂ ಸತೀಶ್, ಗಿಲ್ಲಿ ನಟ, ಜಾನ್ವಿ, ಧನುಷ್‍, ಚಂದ್ರಪ್ರಭ, ಮಂಜುಭಾಷಿಣಿ, ರಾಷಿಕಾ, ಅಭಿಷೇಕ್‍, ಮಲ್ಲಮ್ಮ, ಅಶ್ವಿನಿ ಎಸ್‍.ಎನ್‍, ಧ್ರುವಂತ್‍, ರಕ್ಷಿತಾ ಶೆಟ್ಟಿ, ಬಾಡಿ ಬಿಲ್ಡರ್‍ ಕರಿಬಸಪ್ಪ, ಸ್ಪಂದನಾ, ಅಶ್ವಿನಿ ಗೌಡ, ಅಮಿತ್ ಮತ್ತು ಮಾಳು ಇದ್ದಾರೆ. ಈ 19 ಸ್ಪರ್ಧಿಗಳ ಪೈಕಿ ಹಲವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡವರಿದ್ದಾರೆ.

ಬರೀ ನಟ-ನಟಿಯರಷ್ಟೇ ಅಲ್ಲ, ಸೋಷಿಯಲ್‍ ಮೀಡಿಯಾದಲ್ಲಿ ದೊಡ್ಡ ಹೆಸರು ಮಾಡಿರುವ ಮತ್ತು ನಟನೆ ಹೊರತಾಗಿ ಬೇರೆಬೇರೆ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಹಲವರು ಈ ಬಾರಿ ಸ್ಪರ್ಧಿಗಳಾಗಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇವರೆಲ್ಲರನ್ನೂ ಸುದೀಪ್‍ ಮನೆಯೊಳಗೆ ಬರ ಮಾಡಿಕೊಂಡಿದ್ದು, ಇಂದಿನಿಂದ ಕಾರ್ಯಕ್ರಮ ರಾತ್ರಿ 09ಕ್ಕೆ ಪ್ರಸಾರವಾಗಲಿದೆ.

ವಿಶೇಷವೆಂದರೆ, ಮೊದಲ ದಿನವೇ ಒಬ್ಬರು ಮನೆಯಿಂದ ಹೊರಗೆ ಹೋಗಬೇಕಿದ್ದು, 19 ಸ್ಪರ್ಧಿಗಳ ಪೈಕಿ ಟಾಟಾ ಬಾಯ್‍ಬಾಯ್‍ ಹೇಳೋರು ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

ಆಂದೋಲನ ಡೆಸ್ಕ್

Recent Posts

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

25 mins ago

ಫೆ.23ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಲೋಕಾರ್ಪಣೆ : ಪ್ರಧಾನಿ ಮೋದಿ ಭಾಗಿ

ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…

37 mins ago

ಸ್ವಜಾತಿ ಪಕ್ಷಪಾತ ಬೇಡ ; ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

58 mins ago

ಬಳ್ಳಾರಿ ಬ್ಯಾನರ್‌ ಘರ್ಷಣೆ | ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಎಫ್‌ಐಆರ್‌

ಬಳ್ಳಾರಿ : ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…

3 hours ago

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

7 hours ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

7 hours ago