ಮನರಂಜನೆ

ನಿಜ ಜೀವನ ಆಯ್ತು; ಸಿನಿಮಾದಲ್ಲೂ ರೈತನಾದ ಕಿಶೋರ್

ಬಹುಭಾಷಾ ನಟ ಕಿಶೋರ್, ನಿಜಜೀವನದಲ್ಲಿ ವ್ಯವಸಾಯ ಮಾಡುತ್ತಾರೆ ಎಂಬುದು ಗೊತ್ತಿರುವ ವಿಷಯವೇ. ಕೆಲವು ವರ್ಷಗಳಿಂದಲೇ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಅವರು, ರೈತರ ಪರ ಆಗಾಗ ಧ್ವನಿ ಎತ್ತುತ್ತಲೇ ಇರುತ್ತಾರೆ. ಈಗ ಅವರು ಸಿನಿಮಾದಲ್ಲೂ ರೈತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಕಬಂಧ’ ಒಂದು ಹಾರರ್‍ ಚಿತ್ರವಾಗಿದ್ದು, ವ್ಯವಸಾಯದ ಸುತ್ತ ಇರುವ ಹಲವು ಸಮಸ್ಯೆಗಳ ಬಗ್ಗೆ ಈ ಚಿತ್ರದಲ್ಲಿ ಬೆಳಕು ಚೆಲ್ಲಲಾಗಿದೆಯಂತೆ. ‘ಇದು ವ್ಯವಸಾಯದ ಸುತ್ತ ಇರುವ ಒಂದು ಸಮಸ್ಯೆಯ ಕುರಿತದ ಚಿತ್ರ. ಆ ಸಮಸ್ಯೆ ನಮ್ಮನ್ನು ಕಾಡುತ್ತಿದೆ. ಆದರೆ, ನಾವು ಅದರ ಬಗ್ಗೆ ಹೆಚ್ಚು ಗಮನಹರಿಸುತ್ತಿಲ್ಲ. ಅರಿವು ಮೂಡಿಸುತ್ತಿಲ್ಲ. ನಮಗ್ಯಾಕೆ ಎಂದು ಎಲ್ಲರೂ ಸುಮ್ಮನಿದ್ದುಬಿಟ್ಟಿದ್ದೇವೆ. ಇನ್ನೂ ಗಮನಹರಿಸದಿದ್ದರೆ ಬಹಳ ಕಷ್ಟವಾಗುತ್ತದೆ ಎಂದು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇವೆ’ ಎನ್ನುತ್ತಾರೆ ನಿರ್ದೇಶಕ ಸತ್ಯನಾಥ್‍.

ಈ ಚಿತ್ರದ ಬಗ್ಗೆ ಮಾತನಾಡುವ ಕಿಶೋರ್‍, ‘ಸಿನಿಮಾ ಒಂದು ಪ್ರಭಾವಶಾಲಿ ಮಾಧ್ಯಮ. ಇದನ್ನು ಉಳಿಸಿಕೊಳ್ಳದಿದ್ದರೆ, ನಾವು ನಮ್ಮ ಅಭಿವ್ಯಕ್ತಿಯ ಮಾಧ್ಯಮವನ್ನು ಕಳೆದುಕೊಳ್ಳುತ್ತೇವೆ. ದೆವ್ವವನ್ನು ಬಳಸಿಕೊಂಡು ಒಂದು ಸಮಸ್ಯೆಯನ್ನು ಹೇಳುವ ಪ್ರಯತ್ನ ಇದು. ಸ್ಟಾರ್‍ಗಳಿಲ್ಲದ ಸಿನಿಮಾದಲ್ಲಿ ದೆವ್ವ ಅಥವಾ ದೇವರನ್ನು ಹಿಡಿದುಕೊಳ್ಳಬೇಕು. ಅವರೇ ನಮಗೆ ದೊಡ್ಡ ಸ್ಟಾರ್‍ಗಳು. ದೆವ್ವ ಅಥವಾ ದೇವರ ಬಗ್ಗೆ ನಂಬಿಕೆ ಇದೆಯೋ, ಇಲ್ಲವೋ ಬೇರೆ ಮಾತು. ಅದನ್ನು ಸಲಕರೆಯಾಗಿ ಬಳಸಿಕೊಂಡು ಒಂದು ಕಥೆ ಹೇಳುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. ಅದರ ಮೂಲಕ ಅನುಭವಗಳನ್ನು ಮತ್ತು ಸಂವಹನ ಹಂಚಿಕೊಳ್ಳುವುದಕ್ಕೆ ಸಾಧ್ಯವಾದರೆ ಯಾಕೆ ಮಾಡಬಾರದು’ ಎಂದರು.

‘ನಾವು ಯಾವಾಗಲೂ ಸೇಫ್‍ ಆಗಿದ್ದೇವೆ ಅಂದುಕೊಂಡಿರುತ್ತೇವೆ. ಒಂದು ರಸ್ತೆಗೆ ಬೆಂಕಿ ಅಂಟಿಕೊಂಡರೆ ನಮ್ಮ ಮನೆಗೆ ಏನೂ ಆಗುವುದಿಲ್ಲ ಎಂಬ ಭಾವನೆಯಲ್ಲಿರುತ್ತೇವೆ. ಅದು ನಮ್ಮ ಮನೆಯವರೆಗೂ ಬರಬಹುದು ಎಂದು ಯೋಚಿಸುವುದಿಲ್ಲ. ಅಲ್ಲಿಯವರೆಗೂ ಅಜಾಗರೂಕರಾಗಿಯೇ ಇರುತ್ತೇವೆ. ಆ ನಿಟ್ಟಿನಲ್ಲಿ ಜಾಗರೂಕತೆಯನ್ನು ಮೂಡಿಸುವ ಪ್ರಯತ್ನ ಈ ಸಿನಿಮಾ. ಈ ಕಥೆ ಒಪ್ಪುವುದಕ್ಕೆ ಕಾರಣ, ನಾನು ನಂಬಿರುವ ವಿಷಯವನ್ನು ಈ ಚಿತ್ರದಲ್ಲಿ ಹೇಳಬಹುದು ಎಂಬ ಕಾರಣಕ್ಕಾಗಿ. ಜೊತೆಗೆ ಇದು ಮಾತನಾಡಬೇಕಾದ ವಿಷಯ. ಮೂಲಭೂತ ವಿಷಯ ಆಹಾರ. ಆ ಆಹಾರದ ಬಗ್ಗೆ ನಾವು ಹೆಚ್ಚು ಗಮನಹರಿಸುತ್ತಿಲ್ಲ. ಈ ಅರ್ಥವ್ಯವಸ್ಥೆ ನಮ್ಮನ್ನು ಓಡೋದಕ್ಕೆ ಪ್ರೇರೇಪಿಸುತ್ತಿದೆ. ನಿಂತು ನಮ್ಮ ತಟ್ಟೆಯಲ್ಲಿ ಏನಿದೆ. ಏನು ತಿನ್ನುತ್ತಿದ್ದೇವೆ, ಮಕ್ಕಳಿಗೆ ಏನು ತಿನ್ನುಸುತ್ತಿದ್ದೇವೆ ಎಂಬ ಬಗ್ಗೆ ನಾವು ಗಮನಹರಿಸುತ್ತಿಲ್ಲ. ಅದನ್ನು ಯೋಚನೆ ಮಾಡಿಸುವ ಚಿತ್ರ ಇದು’ ಎಂದರು ಕಿಶೋರ್.

ಈ ಚಿತ್ರವನ್ನು ನಿರ್ಮಿಸುವ ಜೊತೆಗೆ ಒಂದು ಪ್ರಮುಖ ಪಾತ್ರದಲ್ಲಿ ಪ್ರಸಾದ್‍ ವಸಿಷ್ಠ ಕಾಣಿಸಿಕೊಂಡಿದ್ದಾರೆ. ಜೊತೆಗೆ ಪ್ರಿಯಾಂಕಾ ಮಳಲಿ, ಅವಿನಾಶ್‍, ಯೋಗರಾಜ್‍ ಭಟ್‍, ಪ್ರಶಾಂತ್‍ ಸಿದ್ದಿ, ಛಾಯಾಶ್ರೀ, ಶ್ರುತಿ ನಾಯಕ್‍ ಮುಂತಾದವರು ನಟಿಸಿದ್ದಾರೆ. ರಘೋತ್ತಮ ಎನ್‍.ಎಸ್ ಮತ್ತು ಶ್ರೇಯಸ್‍ ಬಿ. ರಾವ್‍ ಅವರ ಸಂಗೀತ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

49 mins ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago