ಮನರಂಜನೆ

‘ಧ್ರುವತಾರೆ’ಯಲ್ಲಿ ನಿಜಜೀವನದ ಗಂಡ-ಹೆಂಡತಿ …

ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿ, ಆ ನಂತರ ನಿಜಜೀವನದಲ್ಲಿ ಪ್ರೀತಿಸಿ, ಮದುವೆಯಾದ ಅದೆಷ್ಟೋ ಜೋಡಿಗಳು ಇದ್ದಾರೆ. ಆದರೆ, ನಿಜಜೀವನದಲ್ಲಿ ಮದುವೆಯಾಗಿ, ಆ ನಂತರ ಚಿತ್ರಗಳಲ್ಲೂ ದಂಪತಿಯಾಗಿ ಕಾಣಿಸಿಕೊಂಡವರ ಸಂಖ್ಯೆ ಕಡಿಮೆಯೇ. ಈಗ ಆ ಸಾಲಿಗೆ ಪ್ರತೀಕ್‍ ಮತ್ತು ಮೌಲ್ಯ ಸಹ ಸೇರಿದ್ದಾರೆ.

ಪ್ರತೀಕ್‍ ಮತ್ತು ಮೌಲ್ಯ ಇದೀಗ ‘ಧ್ರುವತಾರೆ’ ಎಂಬ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ‘ಧ್ರುವತಾರೆ’ ಎಂದರೆ ಡಾ. ರಾಜಕುಮಾರ್‍ ಅಭಿನಯದ ಚಿತ್ರ ನೆನಪಾಗಬಹುದು. ಆ ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ಹೆಸರು ಅದೇ ಎನ್ನುವುದು ಬಿಟ್ಟರೆ, ಮಿಕ್ಕಂತೆ ಎಲ್ಲವೂ ಬೇರೆಯದೇ. ಈ ಹೊಸ ‘ಧ್ರುವತಾರೆ’ ತಯಾರಾಗಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ಇತ್ತೀಚೆಗೆ ಸೂರಜ್‍ ಜೋಯಿಸ್‍ ಸಂಗೀತ ಸಂಯೋಜಿಸಿರುವ ಹಾಡುಗಳ ಬಿಡುಗಡೆಯಾಗಿದೆ.

ಬ್ರೇಕಪ್‍ ಆದ ಯುವಕ-ಯುವತಿಯರ ಸುತ್ತ ‘ಧ್ರುವತಾರೆ’ ಸುತ್ತುತ್ತದಂತೆ. ಈ ಕುರಿತು ಮಾತನಾಡುವ ನಟ-ನಿರ್ದೇಶಕ ಪ್ರತೀಕ್‍, ‘ಬ್ರೇಕಪ್‍ ಆದ ಹುಡುಗನೊಬ್ಬ ಚಟದಲ್ಲಿ ಬಿದ್ದು ತನ್ನ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿರುತ್ತಾನೆ. ಈ ಸಂದರ್ಭದಲ್ಲಿ ಯುವತಿಯೊಬ್ಬಳ ಪರಿಚಯವಾಗುತ್ತದೆ. ಅವಳಿಗೂ ಇನ್ನೊಬ್ಬ ಹುಡುಗನ ಜೊತೆಗೆ ಬ್ರೇಕಪ್‍ ಆಗಿರುತ್ತದೆ. ಇಬ್ಬರೂ ಪ್ರೀತಿಸಿ ಮದುವೆಯಾಗುತ್ತದೆ. ಆ ನಂತರ ಅವರ ಜೀವನದಲ್ಲಿ ಏನೆಲ್ಲಾ ಆಗುತ್ತದೆ ಎಂಬುದು ಚಿತ್ರದ ಕಥೆ. ಈಗಿನ ಟ್ರೆಂಡ್‍ಗೆ ಚಿತ್ರ ಮಾಡಿದ್ದೇವೆ. ಈ ಚಿತ್ರದಲ್ಲಿ ಪೋಲಿ ಹುಡುಗನಾಗಿ ಕಾಣಿಸಿಕೊಂಡಿದ್ದೇನೆ. ಪರಿವರ್ತನ್‍ ಎನ್ನುವ ಪಾತ್ರ ನನ್ನದು. ನನ್ನ ಹೆಂಡತಿ ಮೌಲ್ಯ ಇದರಲ್ಲಿ ಅಪೂರ್ವ ಎಂಬ ಪಾತ್ರ ಮಾಡಿದ್ದಾರೆ. ಕಾರ್ತಿಕ್‍ ಮಹೇಶ್ ‍ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ’ ಎಂದರು.

‘ಧ್ರುವತಾರೆ’ ಚಿತ್ರವು ತಮ್ಮ ಜೀವನದ ಒಂದು ಭಾಗವಾಗಿದೆ ಎನ್ನುವ ಮೌಲ್ಯ, ‘ನಾನು ಚಿತ್ರರಂಗಕ್ಕೆ ಬರುತ್ತೀನಿ, ನಟರೊಬ್ಬನ್ನು ಮದುವೆಯಾಗುತ್ತೀನಿ ಎಂದು ಯಾವತ್ತೂ ನಿರೀಕ್ಷಿಸಿರಲಿಲ್ಲ. ಈ ಚಿತ್ರದಲ್ಲಿ ಅಪೂರ್ವ ಎಂಬ ಪಾತ್ರ ನನ್ನದು. ಅವಳೊಬ್ಬ ಮುಗ್ಧೆ. ಅವಳಿಗೆ ಕುತೂಹಲ ಜಾಸ್ತಿ. ಬಾಡಿ ಶೇಮಿಂಗ್ ಎಷ್ಟು ಪರಿಣಾಮ ಬೀರುತ್ತದೆ ಎಂಬ ಪಾತ್ರದ ಮೂಲಕ ತೋರಿಸಿಕೊಡಲಾಗಿದೆ’ ಎಂದರು.

ಜಿ.ಪಿ. ಫಿಲಂಸ್ ಸ್ಟುಡಿಯೋಸ್ ಬ್ಯಾನರ್ ನಡಿ, ಗಣೇಶ್ ಕುಮಾರ್ ನಿರ್ಮಿಸಿರುವ ‘ಧ್ರುವತಾರೆ’ ಚಿತ್ರಕ್ಕೆ ಪ್ರತೀಕ್‍ ಕಥೆ, ಚಿತ್ರಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಾಯಕನಾಗಿಯೂ ನಟಿಸಿ, ಸಂಕಲನ, ವಿಎಫ್‍ಎಕ್ಸ್ ಮತ್ತು ಡಿಐ ಜವಾಬ್ದಾರಿಯನ್ನೂ ನಿರ್ವಹಿಸಿದ್ದಾರೆ. ಚಿತ್ರದಲ್ಲಿ ರಮೇಶ್ ಭಟ್, ಮೂಗು ಸುರೇಶ್, ಸುಮನ್ ನಗರ್ಕರ್, ಅಶ್ವಿನ್ ರಾವ್ ಪಲ್ಲಕ್ಕಿ, ಪಿ.ಡಿ ಸತೀಶ್ ಸೇರಿದಂತೆ ಹಲವರು ಇದ್ದಾರೆ.

‘ಧ್ರುವತಾರೆ’ ಚಿತ್ರವು ಸೆಪ್ಟೆಂಬರ್‍ 20ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.

ಭೂಮಿಕಾ

Recent Posts

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

56 mins ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

1 hour ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

1 hour ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

2 hours ago

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ…

2 hours ago

ವಿನಯ್‌ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆ ಸ್ವೀಕರಿಸಿದ ಹೈಕೋರ್ಟ್‌

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…

2 hours ago