ಬದುಕನ್ನು ಹಲವು ನಿರ್ದೇಶಕರು ಹಲವು ವಿಷಯಗಳಿಗೆ ಹೋಲಿಸಿದ್ದಾರೆ. ಇದೀಗ ಪ್ರಸಾದ್ ಕುಮಾರ್ ನಾಯ್ಕ್ ಎನ್ನುವವರು ಬದುಕನ್ನು ಟ್ರಾಫಿಕ್ ಸಿಗ್ನಲ್ಗೆ ಹೋಲಿಸಿದ್ದಾರೆ. ಸಿಗ್ನಲ್ನಲ್ಲಿ ಇರುವ ಕೆಂಪು ಹಳದಿ ಮತ್ತು ಹಸಿರು ಬಣ್ಣಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವಹಿಸುತ್ತದೆ ಎಂದು ಅವರು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.
‘ಕೆಂಪು ಹಳದಿ ಹಸಿರು’ ಚಿತ್ರದ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭವು ಇತ್ತೀಚೆಗೆ ನಡೆಯಿತು. ಸನ್ರೈಸ್ ಎಂಟರ್ಟೈನ್ಮೆಂಟ್ ಅಂಡ್ ಫಿಲಂಸ್ ಬ್ಯಾನರ್ ಮೂಲಕ ಪ್ರಸಾದ್ ಕುಮಾರ್ ನಾಯ್ಕ್ ನಿರ್ಮಿಸುತ್ತಿರುವ ಈ ಚಿತರವನ್ನು ಮಣಿ ಕಾರ್ತಿಕೇಯನ್ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಒಂದು ತುಳು ಚಿತ್ರವನ್ನು ನಿರ್ದೇಶನ ಮಾಡಿ ಅನುಭವವಿರುವ ಮಣಿ, ಇದೇ ಮೊದಲ ಬಾರಿಗೆ ಕನ್ನಡ ಚಿತ್ರನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ’ಸ್ಟಾಪ್, ಥಿಂಕ್ ಅಂಡ್ ಪ್ರೊಸೀಡ್ ಇನ್ ಲೈಫ್’ ಎಂಬ ಅರ್ಥಪೂರ್ಣ ಅಡಿಬರಹ ಇರಲಿದೆ.
ಟ್ರೇಲರ್ ಬಿಡುಗಡೆಯ ನಂತರ ಮಾತನಾಡಿದ ನಿರ್ದೇಶಕ ಮಣಿ, ‘ಹೆಸರೇ ಹೇಳುವಂತೆ, ಮೂರು ಬಣ್ಣಗಳು ಮೂರು ಪಾತ್ರಗಳ ಭಾವನೆಗಳನ್ನು ಹೇಳಲಾಗುತ್ತಿದೆ. ಇಲ್ಲೊಂದು ತ್ರಿಕೋನ ಪ್ರೇಮಕಥೆ ಇದ್ದು, ಇದರೊಂದು ಜೊತೆಗೆ ಇದೊಂದು ಸೆಸ್ಪೆನ್ಸ್ ಥ್ರಿಲ್ಲರ್ ಕಾಮಿಡಿ ಚಿತ್ರವಾಗಿರುತ್ತದೆ. ಮಂಗಳೂರು, ಉಡುಪಿ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಡಿಸೆಂಬರ್ ಮೊದಲನೇ ವಾರದಲ್ಲಿ ತೆರೆಗೆ ತರಲು ಯೋಚನೆ ಇದೆ’ ಎಂದರು.
ಈ ಚಿತ್ರದಲ್ಲಿ ಶ್ರೀಹನ್ ದೀಪಕ್ ನಾಯಕನಾಗಿ ಅಭಿನಯಿಸಿದರೆ, ದಿವ್ಯಾ ಸುರೇಶ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತುಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಅರವಿಂದ್ ಬೋಳಾರ್, ’ಒಂದು ಮೊಟ್ಟೆಯ ಕಥೆ’ಯಲ್ಲಿ ಮುಖ್ಯ ಪಾತ್ರ ವಹಿಸಿದ್ದ ಶೈಲಾಶ್ರೀ ಮುಲ್ಕಿ, ಚಿಂದೋಡಿ ವಿಜಯ್ಕುಮಾರ್, ಶ್ರೀಜನ್, ಮೀನಾಕ್ಷಿ ಹರ್ತಿ, ಮಾನಸ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಮಂಜುನಾಥ್ ನಾಯಕ್ ಛಾಯಾಗ್ರಹಣ ಮತ್ತು ಮುಂಬೈ ಮೂಲದ ವಿಕಾಶ್ ವಿಶ್ವಕರ್ಮ ಸಂಗೀತ ಸಂಯೋಜಿಸಿದ್ದಾರೆ.
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…