ಮನರಂಜನೆ

ಧನಂಜಯ್‍ಗೆ ರೀಷ್ಮಾ ನಾಯಕಿ; ‘ಅಣ್ಣ From Mexico’ಗೆ ಸೇರ್ಪಡೆ

ಕನ್ನಡದ ಹಲವು ನಟಿಯರಿಗೆ ಕನ್ನಡದಲ್ಲೇ ಕೆಲಸವಿಲ್ಲ ಎನ್ನುವಂತಹ ಸ್ಥಿತಿ ಇರುವಾಗ ಕೊಡಗಿನ ಹುಡುಗಿ ರೀಷ್ಮಾ ನಾಣಯ್ಯ ಮಾತ್ರ ಕನ್ನಡದಲ್ಲಿ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಉಪೇಂದ್ರ ಜೊತೆಗೆ ‘ಯುಐ’ ಮತ್ತು ಧ್ರುವ ಸರ್ಜಾ ಜೊತೆಗೆ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ನಟಿಸುತ್ತಿರುವ ರೀಷ್ಮಾ, ಇದೀಗ ಧನಂಜಯ್‍ ಅಭಿನಯದ ‘ಅಣ್ಣ From Mexico’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

‘ಅಣ್ಣ From Mexico’ ಚಿತ್ರವು ಕಳೆದ ವರ್ಷ ಧನಂಜಯ್‍ ಹುಟ್ಟುಹಬ್ಬದಂದು ಘೋಷಣೆಯಾಗಿತ್ತು. ಆ ನಂತರ ವರ್ಷದ ಕೊನೆಯಲ್ಲಿ ಚಿತ್ರದ ಮುಹೂರ್ತ ಸದ್ದಿಲ್ಲದೆ ನಡೆದಿತ್ತು. ಈಗಾಗಲೇ ಚಿತ್ರೀಕರಣ ಸಹ ಮುಗಿಯುವ ಹಂತಕ್ಕೆ ಬಂದಿದ್ದು, ಈ ಸಂದರ್ಭದಲ್ಲಿ ನಾಯಕಿಯ ಘೋಷಣೆಯಾಗಿದೆ. ಇತ್ತೀಚೆಗೆ ದಸರಾ ಹಬ್ಬದ ಸಂದರ್ಭದಲ್ಲಿ ಚಿತ್ರತಂಡವು ನಾಯಕಿಯ ಪೋಸ್ಟರ್‍ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಬರಮಾಡಿಕೊಂಡಿದೆ.

‘ಅಣ್ಣ From Mexico’ ಚಿತ್ರವನ್ನು ಶಂಕರ್‍ ಗುರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದರು. 2021ರಲ್ಲಿ ತೆರೆಗೆ ಬಂದ ‘ಬಡವ ರಾಸ್ಕಲ್’ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ‘ಅಣ್ಣ From Mexico’ ಚಿತ್ರವು ಫ್ಯಾಮಿಲಿ ಎಂಟರ್‌ ಟ್ರೇನರ್‍ ಆಗಿದ್ದು, ದಿ ರಾಯಲ್ ಸ್ಟುಡಿಯೋಸ್ ಅಡಿಯಲ್ಲಿ ಸತ್ಯ ರಾಯಲ್‌ ನಿರ್ಮಿಸುತ್ತಿದ್ದು. ಐರಾ ಫಿಲ್ಮ್ಸ್ ಕೂಡ ಜೊತೆಯಾಗಿ ಕೈ ಜೋಡಿಸಿದೆ.

ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜಿಸುತ್ತಿದ್ದು, ಎಸ್‍.ಕೆ. ರಾವ್‍ ಅವರ ಛಾಯಾಗ್ರಹಣವಿದೆ. ‘ಅಣ್ಣ From Mexico’ ಚಿತ್ರಕ್ಕೆ ಪ್ರಶಾಂತ್‍ ರಾಜಪ್ಪ ಸಂಭಾಷಣೆ ರಚಿಸಿದ್ದಾರೆ.

ಅಂದಹಾಗೆ, ರೀಷ್ಮಾ ಅಭಿನಯದ ‘ಯುಐ’ ಮತ್ತು ‘ಕೆಡಿ – ದಿ ಡೆವಿಲ್‍’ ಚಿತ್ರಗಳ ಚಿತ್ರೀಕರಣ ಮುಗಿದಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಮಧ್ಯೆ, ‘ಯುಐ’ ಚಿತ್ರವು ನವೆಂಬರ್‍ನಲ್ಲಿ ಬಿಡುಗಡೆಯಾದರೆ, ‘ಕೆಡಿ – ದಿ ಡೆವಿಲ್‍’ ಚಿತ್ರವು ಡಿಸೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗಲಿದೆ.

 

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

8 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago