ಮನರಂಜನೆ

ಧನಂಜಯ್‍ಗೆ ರೀಷ್ಮಾ ನಾಯಕಿ; ‘ಅಣ್ಣ From Mexico’ಗೆ ಸೇರ್ಪಡೆ

ಕನ್ನಡದ ಹಲವು ನಟಿಯರಿಗೆ ಕನ್ನಡದಲ್ಲೇ ಕೆಲಸವಿಲ್ಲ ಎನ್ನುವಂತಹ ಸ್ಥಿತಿ ಇರುವಾಗ ಕೊಡಗಿನ ಹುಡುಗಿ ರೀಷ್ಮಾ ನಾಣಯ್ಯ ಮಾತ್ರ ಕನ್ನಡದಲ್ಲಿ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಉಪೇಂದ್ರ ಜೊತೆಗೆ ‘ಯುಐ’ ಮತ್ತು ಧ್ರುವ ಸರ್ಜಾ ಜೊತೆಗೆ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ನಟಿಸುತ್ತಿರುವ ರೀಷ್ಮಾ, ಇದೀಗ ಧನಂಜಯ್‍ ಅಭಿನಯದ ‘ಅಣ್ಣ From Mexico’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

‘ಅಣ್ಣ From Mexico’ ಚಿತ್ರವು ಕಳೆದ ವರ್ಷ ಧನಂಜಯ್‍ ಹುಟ್ಟುಹಬ್ಬದಂದು ಘೋಷಣೆಯಾಗಿತ್ತು. ಆ ನಂತರ ವರ್ಷದ ಕೊನೆಯಲ್ಲಿ ಚಿತ್ರದ ಮುಹೂರ್ತ ಸದ್ದಿಲ್ಲದೆ ನಡೆದಿತ್ತು. ಈಗಾಗಲೇ ಚಿತ್ರೀಕರಣ ಸಹ ಮುಗಿಯುವ ಹಂತಕ್ಕೆ ಬಂದಿದ್ದು, ಈ ಸಂದರ್ಭದಲ್ಲಿ ನಾಯಕಿಯ ಘೋಷಣೆಯಾಗಿದೆ. ಇತ್ತೀಚೆಗೆ ದಸರಾ ಹಬ್ಬದ ಸಂದರ್ಭದಲ್ಲಿ ಚಿತ್ರತಂಡವು ನಾಯಕಿಯ ಪೋಸ್ಟರ್‍ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಬರಮಾಡಿಕೊಂಡಿದೆ.

‘ಅಣ್ಣ From Mexico’ ಚಿತ್ರವನ್ನು ಶಂಕರ್‍ ಗುರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದರು. 2021ರಲ್ಲಿ ತೆರೆಗೆ ಬಂದ ‘ಬಡವ ರಾಸ್ಕಲ್’ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ‘ಅಣ್ಣ From Mexico’ ಚಿತ್ರವು ಫ್ಯಾಮಿಲಿ ಎಂಟರ್‌ ಟ್ರೇನರ್‍ ಆಗಿದ್ದು, ದಿ ರಾಯಲ್ ಸ್ಟುಡಿಯೋಸ್ ಅಡಿಯಲ್ಲಿ ಸತ್ಯ ರಾಯಲ್‌ ನಿರ್ಮಿಸುತ್ತಿದ್ದು. ಐರಾ ಫಿಲ್ಮ್ಸ್ ಕೂಡ ಜೊತೆಯಾಗಿ ಕೈ ಜೋಡಿಸಿದೆ.

ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜಿಸುತ್ತಿದ್ದು, ಎಸ್‍.ಕೆ. ರಾವ್‍ ಅವರ ಛಾಯಾಗ್ರಹಣವಿದೆ. ‘ಅಣ್ಣ From Mexico’ ಚಿತ್ರಕ್ಕೆ ಪ್ರಶಾಂತ್‍ ರಾಜಪ್ಪ ಸಂಭಾಷಣೆ ರಚಿಸಿದ್ದಾರೆ.

ಅಂದಹಾಗೆ, ರೀಷ್ಮಾ ಅಭಿನಯದ ‘ಯುಐ’ ಮತ್ತು ‘ಕೆಡಿ – ದಿ ಡೆವಿಲ್‍’ ಚಿತ್ರಗಳ ಚಿತ್ರೀಕರಣ ಮುಗಿದಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಮಧ್ಯೆ, ‘ಯುಐ’ ಚಿತ್ರವು ನವೆಂಬರ್‍ನಲ್ಲಿ ಬಿಡುಗಡೆಯಾದರೆ, ‘ಕೆಡಿ – ದಿ ಡೆವಿಲ್‍’ ಚಿತ್ರವು ಡಿಸೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗಲಿದೆ.

 

ಆಂದೋಲನ ಡೆಸ್ಕ್

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

2 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

2 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

2 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

3 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

3 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

3 hours ago