ಮನರಂಜನೆ

ಗ್ರಾಫಿಕ್ಸ್ ಕೆಲಸಗಳಿಂದ ‘45’ ಚಿತ್ರದ ಬಿಡುಗಡೆ ಮುಂದೂಡಿಕೆ

ಬೆಂಗಳೂರು : ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್. ಬಿ ಶೆಟ್ಟಿ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಗ್ರಾಫಿಕ್ಸ್ ಕೆಲಸಗಳು ನಿಧಾನವಾದ್ದರಿಂದ ಚಿತ್ರ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಯ್ತು.

ಆದರೆ, ಚಿತ್ರವು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಈ ವಿಷಯನ್ನು ಚಿತ್ರಕ್ಕೆ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ VFX ತಂತ್ರಜ್ಞ ಯಶ್ ಗೌಡ ಅಧಿಕೃತವಾಗಿ ಹೇಳಿದ್ದಾರೆ. ಕೆನಡಾದ ಪ್ರತಿಷ್ಠಿತ MARZ ಸಂಸ್ಥೆ ಈ ಚಿತ್ರಕ್ಕೆ VFX ಕಾರ್ಯ ನಿರ್ವಹಿಸುತ್ತಿದ್ದು, ಈ ಸಂಸ್ಥೆ VFX ಮಾಡುತ್ತಿರುವ ಮೊದಲ ಕನ್ನಡ ಚಿತ್ರವಿದು. ಈ ಚಿತ್ರಕ್ಕೆ ಹಾಲಿವುಡ್‍ನ ಖ್ಯಾತ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ಗ್ರಾಫಿಕ್ಸ್ ಮಹತ್ವದ ಪಾತ್ರ ವಹಿಸಲಿದ್ದು, ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಈ ಚಿತ್ರ ಅಂದುಕೊಂಡಂತೆ ಆಗಸ್ಟ್.15ರಂದು ಬಿಡುಗಡೆಯಾಗಲಿಲ್ಲ. ಆಗಸ್ಟ್ ಬದಲು ಸೆಪ್ಟೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ಸೆಪ್ಟೆಂಬರ್ ತಿಂಗಳಲ್ಲೂ ಚಿತ್ರ ಬಿಡುಗಡೆ ಆಗುವುದು ಸಂಶಯವಾಗಿದೆ. ಕಾರಣ, ಚಿತ್ರದ ಗ್ರಾಫಿಕ್ಸ್ ಕೆಲಸ ಇನ್ನೂ ನಡೆಯುತ್ತಿದ್ದು, ಇದರಿಂದ ಚಿತ್ರದ ಬಿಡುಗಡೆ ವಿಳಂಬವಾಗಲಿದೆ. ಸೆಪ್ಟೆಂಬರ್ 16ರೊಳಗೆ VFX ಕಾರ್ಯ ಮುಕ್ತಾಯವಾಗಲಿದ್ದು. ಆನಂತರ ಇನ್ನೊಂದು ತಿಂಗಳು ಕೆಲವು ಕೆಲಸಗಳಿರುತ್ತವಂತೆ.

ಅಕ್ಟೋಬರ್.16ರ ಹೊತ್ತಿಗೆ ಕೆಲಸಗಳು ಮುಗಿಯಲಿವೆ ಎಂದು ಯಶ್‍ ಗೌಡ ಹೇಳಿದ್ದಾರೆ. ಬಹುಶಃ ನವೆಂಬ್‍ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಅಧಿಕೃತ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸುವ ಸಾಧ್ಯತೆ ಇದೆ. ಸೂರಜ್‍ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ರಮೇಶ್‍ ರೆಡ್ಡಿ ನಿರ್ಮಾಣದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್‍ ಬಿ. ಶೆಟ್ಟಿ ಜೊತೆಗೆ ಕೌಸ್ತುಭ ಮಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

2 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

2 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

2 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

2 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

2 hours ago