ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ.
ಇಂದು ಹೈಕೋರ್ಟ್ನಲ್ಲಿ ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ತಮ್ಮ ವಾದ ಮಂಡಿಸಿದರು. ನಟ ದರ್ಶನ್ಗೆ ತೀವ್ರ ಬೆನ್ನು ನೋವಿನ ಸಮಸ್ಯೆಯಿದ್ದು, ಅದರ ಜೊತೆಗೆ ಪದೇ ಪದೇ ಕಾಲು ಮರುಗಟ್ಟುವಿಕೆ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಅವರಿಗೆ ತುರ್ತುಚಿಕಿತ್ಸೆಯ ಅವಶ್ಯಕತೆ ಇರುವುದರಿಂದ ಮಧ್ಯಂತರ ಜಾಮೀನು ನೀಡಬೇಕಾಗಿ ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ಎಸ್ಪಿಪಿ ಕೂಡ ದರ್ಶನ್ ಜಾಮೀನು ಅರ್ಜಿಗೆ ಕೆಲ ತಕರಾರು ಎತ್ತಿದರು.
ಬಳಿಕ ವಾದ ಮುಂದುವರಿಸಿದ ನಾಗೇಶ್ ಅವರು, ಆರೋಗ್ಯ ಪ್ರತಿಯೊಬ್ಬರ ಹಕ್ಕು, ಅವರ ಕಷ್ಟದ ಸಮಯದಲ್ಲಿ ಯಾವುದೇ ಮೆರಿಟ್ಗಳನ್ನು ನೋಡದೆ ಜಾಮೀನು ನೀಡಬೇಕಾಗುತ್ತದೆ ಎಂದರು. ಆದರೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಎಸ್ಪಿಪಿ ಪ್ರಸನ್ನ ಕುಮಾರ್, ಈಗ ವೈದ್ಯರು ನೀಡಿರುವ ವರದಿಯಲ್ಲಿ ಅಷ್ಟೇನೂ ಸಮಸ್ಯೆಯಿಲ್ಲ ಎಂದರು.
ಹಾಗೇಯೆ ʼವೈದ್ಯರ ವರದಿಯಲ್ಲಿ ಯಾವ ರೀತಿಯ ಶಸ್ತ್ರಚಿಕಿತ್ಸೆ ಮಾಡಬೇಕಿದೆ? ಎಷ್ಟು ದಿನದ ಅವಶ್ಯಕತೆ ಇದೆ? ಎಲ್ಲಿ ಆಪರೇಷನ್ ಮಾಡಬೇಕು ಎಂಬ ವಿಷಯ ಪ್ರಸ್ತಾಪವಿಲ್ಲʼ ಎಂದರು.
ಇದಕ್ಕೆ ಉತ್ತರಿಸಿದ ಸಿ.ವಿ ನಾಗೇಶ್, ಈ ಹಿಂದೆ ದರ್ಶನ್ ಮೈಸೂರು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈಗಲೂ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಾರೆ ಎಂದು ವಾದಿಸಿದರು. ಇಬ್ಬರೂ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿ ಆದೇಶವನ್ನು ನಾಳೆಗೆ ಮುಂದೂಡಿದ್ದಾರೆ.
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…