ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್, ಜೈಲು ಸಿಬ್ಬಂದಿ ಬಳಿ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿನಿಂದಲೂ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಕಿರಿಕ್ ಮಾಡುತ್ತಲೇ ಇದ್ದಾರೆ.
ಜೈಲು ಸಿಬ್ಬಂದಿಗೆ ಒಂದೊಂದೇ ಬೇಡಿಕೆ ಇಡುತ್ತಿರುವ ದರ್ಶನ್ ಈಗ ಚೇರ್ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ದರ್ಶನ್ ಬೇಡಿಕೆಗೆ ಜೈಲಾಧಿಕಾರಿಗಳು ತಣ್ಣೀರು ಎರಚಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಬಿಂದಾಸ್ ಆಗಿ ಎಂಜಾಯ್ ಮಾಡುತ್ತಿದ್ದ ನಟ ದರ್ಶನ್, ಈಗ ಬಳ್ಳಾರಿ ಜೈಲಿನಲ್ಲಿ ಕಳೆದ ಎರಡು ದಿನದಿಂದ ತೆಪ್ಪಗಾಗಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್ಗೆ ಜೈಲಾಧಿಕಾರಿಗಳು ನಿಜ ಜೈಲು ಹೇಗಿರುತ್ತದೆ ಎಂಬುದನ್ನು ತೋರಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಚೇರ್ ವಿಚಾರದಲ್ಲೂ ಕ್ಲಿಯರ್ ಆಗಿರುವ ಬಳ್ಳಾರಿ ಜೈಲಾಧಿಕಾರಿಗಳು ಯಾವುದನ್ನೂ ಮೈ ಮೇಲೆ ಎಳೆದುಕೊಳ್ಳದೇ ಕೋರ್ಟ್ ಅವಕಾಶ ಕೊಟ್ಟರೆ ಮಾತ್ರ ಕೊಡುತ್ತೇವೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…