ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ಗೆ ಜೈಲಾಧಿಕಾರಿಗಳು ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಭಾರೀ ಅಹಂಕಾರ ಹಾಗೂ ದರ್ಪ ತೋರಿಸುತ್ತಿದ್ದಾರೆ ಎನ್ನಲಾಗಿದ್ದು, ದರ್ಶನ್ಗೆ ಜೈಲಾಧಿಕಾರಿಗಳು ಕ್ಲಾಸ್ ತೆಗೆದುಕೊಂಡು, ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ.
ನೀವು ಜೈಲಿನಲ್ಲಿ ಎಷ್ಟು ದಿನ ಇರುತ್ತೀರಿ ಅಷ್ಟು ದಿನ ಜೈಲಿನ ನಿಯಮಗಳನ್ನು ಪಾಲನೆ ಮಾಡಬೇಕು. ಖೈದಿಗಳಿಗೆ ಶಿಕ್ಷೆ ಜೊತೆಗೆ ನಡವಳಿಕೆ ಸರಿಯಾಗುತ್ತದೆ ಎಂದು ಕೋರ್ಟ್ ಜೈಲಿಗೆ ಕಳುಹಿಸುತ್ತದೆ. ಆದರೆ ನೀವು ಜೈಲಿನ ಶಿಸ್ತನ್ನು ಉಲ್ಲಂಘನೆ ಮಾಡುತ್ತಿದ್ದೀರಿ ಎಂದು ಹೇಳಿದ್ದಾರೆ.
ಸೌಲಭ್ಯಗಳಿಗಾಗಿ ಪದೇ ಪದೇ ಜೈಲು ಸಿಬ್ಬಂದಿಗೆ ಕಿರಿಕಿರಿ ಮಾಡುತ್ತಿದ್ದೀರಿ. ನಾವು ಕಾನೂನು ಪ್ರಕಾರ ಏನು ಮಾಡಲು ಸಾಧ್ಯ ಅಷ್ಟನ್ನು ಮಾತ್ರ ಕೊಡುತ್ತೇವೆ. ಅದನ್ನು ಬಿಟ್ಟು ಹೆಚ್ಚಿನದನ್ನು ಕೊಡಲು ಸಾಧ್ಯವಿಲ್ಲ. ನಿಮಗೆ ಹೆಚ್ಚಿನ ಸೌಲಭ್ಯ ಬೇಕು ಎಂದರೆ ಕೋರ್ಟ್ಗೆ ಅರ್ಜಿ ಹಾಕಿ ಎಂದು ನಟ ದರ್ಶನ್ಗೆ ಜೈಲರ್ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…