ಮನರಂಜನೆ

ದರ್ಶನ್‌ಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಜೈಲಾಧಿಕಾರಿಗಳು

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭಾರೀ ಅಹಂಕಾರ ಹಾಗೂ ದರ್ಪ ತೋರಿಸುತ್ತಿದ್ದಾರೆ ಎನ್ನಲಾಗಿದ್ದು, ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ತೆಗೆದುಕೊಂಡು, ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ.

ನೀವು ಜೈಲಿನಲ್ಲಿ ಎಷ್ಟು ದಿನ ಇರುತ್ತೀರಿ ಅಷ್ಟು ದಿನ ಜೈಲಿನ ನಿಯಮಗಳನ್ನು ಪಾಲನೆ ಮಾಡಬೇಕು. ಖೈದಿಗಳಿಗೆ ಶಿಕ್ಷೆ ಜೊತೆಗೆ ನಡವಳಿಕೆ ಸರಿಯಾಗುತ್ತದೆ ಎಂದು ಕೋರ್ಟ್‌ ಜೈಲಿಗೆ ಕಳುಹಿಸುತ್ತದೆ. ಆದರೆ ನೀವು ಜೈಲಿನ ಶಿಸ್ತನ್ನು ಉಲ್ಲಂಘನೆ ಮಾಡುತ್ತಿದ್ದೀರಿ ಎಂದು ಹೇಳಿದ್ದಾರೆ.

ಸೌಲಭ್ಯಗಳಿಗಾಗಿ ಪದೇ ಪದೇ ಜೈಲು ಸಿಬ್ಬಂದಿಗೆ ಕಿರಿಕಿರಿ ಮಾಡುತ್ತಿದ್ದೀರಿ. ನಾವು ಕಾನೂನು ಪ್ರಕಾರ ಏನು ಮಾಡಲು ಸಾಧ್ಯ ಅಷ್ಟನ್ನು ಮಾತ್ರ ಕೊಡುತ್ತೇವೆ. ಅದನ್ನು ಬಿಟ್ಟು ಹೆಚ್ಚಿನದನ್ನು ಕೊಡಲು ಸಾಧ್ಯವಿಲ್ಲ. ನಿಮಗೆ ಹೆಚ್ಚಿನ ಸೌಲಭ್ಯ ಬೇಕು ಎಂದರೆ ಕೋರ್ಟ್‌ಗೆ ಅರ್ಜಿ ಹಾಕಿ ಎಂದು ನಟ ದರ್ಶನ್‌ಗೆ ಜೈಲರ್ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

3 mins ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

7 mins ago

ದೇವರ ನಾಡು ಕೇರಳದಲ್ಲಿ ಜೆನ್ ಝೀಗಳ ಸಾಮರಸ್ಯ ಮ್ಯಾಜಿಕ್

ಅಕ್ಷತಾ ಆಗಸ್ಟ್ ೨೧, ಕೇರಳದ ಕೋಝಿಕ್ಕೋಡ್‌ನ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಓಣಂ ಹಬ್ಬದ ಆಚರಣೆಗೆ ಅಣಿಯಾಗುತ್ತಿದ್ದರು. ಅಂದಿನ ರಾತ್ರಿ ಓಣಂ…

11 mins ago

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

10 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

11 hours ago