ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಇಂದು ಜೈಲಿಗೆ ಭೇಟಿ ನೀಡಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಪೊಲೀಸರು ನಿನ್ನೆ ತಾನೇ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಚಾರ್ಜ್ಶೀಟ್ ಸಲ್ಲಿಕೆಯ ಬಳಿಕ ಇಂದು ದರ್ಶನ್ ಭೇಟಿಗೆ ದಿನಕರ್ ತೂಗುದೀಪ್ ಜೊತೆ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದರು.
ಈ ವೇಳೆ ಹೈ ಸೆಕ್ಯುರಿಟಿ ಸೆಲ್ನಿಂದ ಹೊರಬಂದ ಆರೋಪಿ ದರ್ಶನ್, ಪತ್ನಿ ಮತ್ತು ಸಹೋದರನನ್ನು ನೋಡಿ ಭಾವುಕರಾಗಿದ್ದಾರೆ.
ಇನ್ನು ಬಳ್ಳಾರಿ ಸೆಂಟ್ರಲ್ ಜೈಲಿನ ಸಂದರ್ಶಕರ ಕೊಠಡಿಯಲ್ಲಿ ಸಹೋದರ ಮತ್ತು ಪತ್ನಿಯ ಜೊತೆ ದರ್ಶನ್ ಮಾತನಾಡಲು ಅರ್ಧ ಗಂಟೆ ಅವಕಾಶ ನೀಡಲಾಗಿತ್ತು. ಈ ವೇಳೆ ದರ್ಶನ್ ಜೊತೆ ದಿನಕರ್ ತೂಗುದೀಪ್ ಹಾಗೂ ವಿಜಯಲಕ್ಷ್ಮಿ ಅವರು, ಮುಂದಿನ ಕಾನೂನು ಸಮರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…
ನವದೆಹಲಿ: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…
ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…
ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…