ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಇಂದು ಜೈಲಿಗೆ ಭೇಟಿ ನೀಡಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಪೊಲೀಸರು ನಿನ್ನೆ ತಾನೇ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಚಾರ್ಜ್ಶೀಟ್ ಸಲ್ಲಿಕೆಯ ಬಳಿಕ ಇಂದು ದರ್ಶನ್ ಭೇಟಿಗೆ ದಿನಕರ್ ತೂಗುದೀಪ್ ಜೊತೆ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದರು.
ಈ ವೇಳೆ ಹೈ ಸೆಕ್ಯುರಿಟಿ ಸೆಲ್ನಿಂದ ಹೊರಬಂದ ಆರೋಪಿ ದರ್ಶನ್, ಪತ್ನಿ ಮತ್ತು ಸಹೋದರನನ್ನು ನೋಡಿ ಭಾವುಕರಾಗಿದ್ದಾರೆ.
ಇನ್ನು ಬಳ್ಳಾರಿ ಸೆಂಟ್ರಲ್ ಜೈಲಿನ ಸಂದರ್ಶಕರ ಕೊಠಡಿಯಲ್ಲಿ ಸಹೋದರ ಮತ್ತು ಪತ್ನಿಯ ಜೊತೆ ದರ್ಶನ್ ಮಾತನಾಡಲು ಅರ್ಧ ಗಂಟೆ ಅವಕಾಶ ನೀಡಲಾಗಿತ್ತು. ಈ ವೇಳೆ ದರ್ಶನ್ ಜೊತೆ ದಿನಕರ್ ತೂಗುದೀಪ್ ಹಾಗೂ ವಿಜಯಲಕ್ಷ್ಮಿ ಅವರು, ಮುಂದಿನ ಕಾನೂನು ಸಮರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…