Mysore
28
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯು ಇಂದು 57ನೇ ಸೆಷನ್‌ ಕೋರ್ಟ್‌ನಲ್ಲಿ ನಡೆಯಿತು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ದರ್ಶನ್‌ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್‌.4ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.

ಈ ಮೂಲಕ ದರ್ಶನ್‌ಗೆ ಮತ್ತೆ ಬೇಸರವಾಗಿದ್ದು, ಅಕ್ಟೋಬರ್.‌4ಕ್ಕಾದರೂ ಜಾಮೀನು ಮಂಜೂರು ಆಗುತ್ತಾ ಎಂದು ವಕೀಲರ ಬಳಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

 

Tags:
error: Content is protected !!