Mysore
28
clear sky

Social Media

ಗುರುವಾರ, 26 ಫೆಬ್ರವರಿ 2026
Light
Dark

ನಟ ದರ್ಶನ್‌ಗೆ ಶಾಕ್‌ ಮೇಲೆ ಶಾಕ್:‌ ಜೈಲಿನಲ್ಲೇ ಏಳು ಗಂಟೆ ಐಟಿ ಡ್ರಿಲ್‌

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದೆ.

ರೇಣುಕಾಸ್ವಾಮಿ ಕೊಲೆ ಬಳಿಕ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್‌ ಲಕ್ಷ ಲಕ್ಷ ಹಣ ನೀಡುವ ಭರವಸೆ ನೀಡಿದ್ದರು. ಈ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜೈಲಿನಲ್ಲೇ ನಿನ್ನೆ ದರ್ಶನ್‌ರನ್ನು 7 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ.

ಮನೆಯಲ್ಲಿ ಅಷ್ಟೊಂದು ಹಣ ಎಲ್ಲಿಂದ ಬಂದು ಹಾಗೂ ಹೇಗೆ ಬಂತು.? ಆ ಹಣ ಯಾರಿಗೆ ಸೇರಿದ್ದು? ಆ ಹಣವನ್ನು ನಿಮಗೆ ಕೊಟ್ಟವರ್ಯಾರು? ಹೀಗೆ ನೂರಾರು ಪ್ರಶ್ನೆಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಬಳಕೆಯಾದ ಎಲ್ಲಾ ಹಣದ ವ್ಯವಹಾರದ ಬಗ್ಗೆ ವಿಚಾರಣೆ ನಡೆಸಿದ ಐಡಿ ಅಧಿಕಾರಿಗಳು ಹಣ ಮೂಲದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

 

Tags:
error: Content is protected !!