ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ಗೆ ಅನಾರೋಗ್ಯದ ಕಾರಣದಿಂದಾಗಿ ಸರ್ಜಿಕಲ್ ಚೇರ್ ನೀಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಅವರು ಅನಾರೋಗ್ಯದ ಕಾರಣದಿಂದಾಗಿ ನನಗೆ ಸರ್ಜಿಕಲ್ ಚೇರ್ ಬೇಕು ಎಂದು ಜೈಲು ಡಿಐಜಿಗೆ ಮನವಿ ಮಾಡಿದ್ದರು.
ದರ್ಶನ್ ಮನವಿ ಪುರಸ್ಕರಿಸಿದ ಡಿಐಜಿ ಕೂಲಂಕುಷವಾಗಿ ಆರೋಗ್ಯ ತಪಾಸಣೆ ಹಾಗೂ ರಿಪೋರ್ಟ್ ಪರಿಶೀಲನೆ ಬಳಿಕ ಚೇರ್ ಕೊಡಲು ಅಸ್ತು ಎಂದಿದ್ದಾರೆ.
ದರ್ಶನ್ ಆರೋಗ್ಯದ ಬಗ್ಗೆ ವೈದ್ಯರು ಕೊಟ್ಟ ವರದಿ ಬಳಿಕ ಕಾರಾಗೃಹ ಇಲಾಖೆ ಡಿಐಜಿ ದರ್ಶನ್ಗೆ ಸರ್ಜಿಕಲ್ ಚೇರನ್ನು ನೀಡಿದ್ದಾರೆ.
ಅರ್ಥೋಪಿಡಿಕ್ ವೈದ್ಯರಿಂದ ತಪಾಸಣೆ ಹಾಗೂ ಪರಪ್ಪನ ಅಗ್ರಹಾರದಿಂದ ವರದಿ ತರಿಸಿಕೊಂಡು ಪರಿಶೀಲನೆ ಮಾಡಿರುವ ಡಿಐಜಿ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದರ್ಶನ್ಗೆ ಸರ್ಜಿಕಲ್ ಚೇರ್ ತರಿಸಿ ಕೊಟ್ಟಿದ್ದಾರೆ.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…