ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಶನಿವಾರ ದರ್ಶನ್ ಪರ ವಕೀಲರು, ತುರ್ತಾಗಿ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು.
ಹೀಗಾಗಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ದರ್ಶನ್ಗೆ ಜಾಮೀನು ಸಿಗುತ್ತಾ ಅಥವಾ ಇಲ್ಲವೇ ಎಂಬ ಆತಂಕ ಶುರುವಾಗಿದೆ.
ಜಾಮೀನು ಅರ್ಜಿ ವಿಚಾರವಾಗಿ ಜೈಲಿನಲ್ಲಿ ನಟ ದರ್ಶನ್ ಸಿಬ್ಬಂದಿಯಿಂದ ಪದೇ ಪದೇ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಜಾಮೀನು ಸಿಗದಿದ್ದರೆ ಮುಂದೆ ಜೈಲು ಬದಲಾವಣೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.
ಜೈಲಿನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್, ಪ್ಲಾಸ್ಟಿಕ್ ಚೇರ್, ದಿಂಬು, ಬೆಡ್ಗೆ ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಜಾಮೀನು ಭವಿಷ್ಯ ಏನಾಗಲಿದೆ ಎಂದು ಅಭಿಮಾನಿಗಳಿಗೆ ಆತಂಕ ಶುರುವಾಗಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…