ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಶನಿವಾರ ದರ್ಶನ್ ಪರ ವಕೀಲರು, ತುರ್ತಾಗಿ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು.
ಹೀಗಾಗಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ದರ್ಶನ್ಗೆ ಜಾಮೀನು ಸಿಗುತ್ತಾ ಅಥವಾ ಇಲ್ಲವೇ ಎಂಬ ಆತಂಕ ಶುರುವಾಗಿದೆ.
ಜಾಮೀನು ಅರ್ಜಿ ವಿಚಾರವಾಗಿ ಜೈಲಿನಲ್ಲಿ ನಟ ದರ್ಶನ್ ಸಿಬ್ಬಂದಿಯಿಂದ ಪದೇ ಪದೇ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಜಾಮೀನು ಸಿಗದಿದ್ದರೆ ಮುಂದೆ ಜೈಲು ಬದಲಾವಣೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.
ಜೈಲಿನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್, ಪ್ಲಾಸ್ಟಿಕ್ ಚೇರ್, ದಿಂಬು, ಬೆಡ್ಗೆ ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಜಾಮೀನು ಭವಿಷ್ಯ ಏನಾಗಲಿದೆ ಎಂದು ಅಭಿಮಾನಿಗಳಿಗೆ ಆತಂಕ ಶುರುವಾಗಿದೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…