ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ರೇಣುಕಾಸ್ವಾಮಿ-ಪವಿತ್ರಾ ಗೌಡ ಚಾಟ್‌ ರಹಸ್ಯ ಬಯಲು!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ನಟಿ ಪವಿತ್ರಾ ಗೌಡ ಸೇರಿದಂತೆ 19 ಮಂದಿಯ ಬಂಧನವಾಗಿದೆ. ಪವಿತ್ರಾ ಗೌಡರಿಗೆ ಅಶ್ಲೀಲ ಮೆಸೆಜ್‌ ಕಳುಹಿಸಿದ ಕಾರಣಕ್ಕಾಗಿ ರೇಣುಕಾಸ್ವಾಮಿ ಹತ್ಯೆ ಮಾಡಲಾಗಿತ್ತು ಎಂದು ಹೇಳಲಾಗಿದ್ದು, ಈ ಇಬ್ಬರ ನಡುವಿನ ಚಾಟ್‌ ಹಿಸ್ಟರಿ ಬಯಲಾಗಿದೆ.

ನಟಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ್ದ ಎನ್ನಲಾದ ಅಶ್ಲೀಲ ಮೆಸೆಜ್‌ ರಹಸ್ಯ ಬಯಲಾಗಿದ್ದು, ಕಳೆದ ಐದು ತಿಂಗಳಿನಿಂದ ರೇಣುಕಾಸ್ವಾಮಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೆಜ್‌ ಮಾಡುತ್ತಿದ್ದ ಎನ್ನುವ ಸತ್ಯ ಬಯಲಿಗೆ ಬಂದಿದೆ.

ಕಳೆದ ಫೆಬ್ರವರಿಯಿಂದ ಇಲ್ಲಿಯವರೆಗೆ 200ಕ್ಕೂ ಅಧಿಕ ಅಶ್ಲೀಲ್‌ ಮೆಸೆಜ್‌ಗಳನ್ನು ರೇಣುಕಾಸ್ವಾಮಿ ಮಾಡಿದ್ದ ಎಂಬುದು ತನಿಖೆ ವೇಳೆ ಬಯಲಿಗೆ ಬಂದಿದೆ. ಆದರೆ ಇದ್ಯಾವುದಕ್ಕೂ ಪವಿತ್ರಾ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ರೇಣುಕಾಸ್ವಾಮಿ ತನ್ನ ಖಾಸಗಿ ಅಂದ ಫೋಟೋವನ್ನು ಹಂಚಿಕೊಂಡಿದ್ದ.

ಇದರಿಂದ ಕೋಪಗೊಂಡ ಪವಿತ್ರಾ ಗೌಡ ಘಟನೆಯ ವಿಚಾರವನ್ನು ತನ್ನ ಸಹಾಯಕ ಮೋಹನ್‌ಗೆ ತಿಳಿಸಿದ್ದಾರೆ. ಪವನ್‌, ಪವಿತ್ರಾ ಗೌಡ ರೀತಿಯಲ್ಲಿ ಮೆಸೆಜ್‌ ಮಾಡಿ ರೇಣುಕಾಸ್ವಾಮಿ ಜತೆ ಮಾತನಾಡಿದ್ದಾನೆ. ಇದರಿಂದ ಖುಷಿಗೊಂಡ ರೇಣುಕಾಸ್ವಾಮಿ ಪವನ್‌ ಹೇಳಿದಂತೆ ತನ್ನ ಫೋಟೋವನ್ನು ಹಂಚಿಕೊಂಡಿದ್ದಾನೆ. ಫೋಟೋದೊಂದಿಗೆ ಜಾಡು ಹಿಡಿದ ಡಿ ಗ್ಯಾಂಗ್‌, ಅಲ್ಲಿಂದ ರೇಣುಕಾಸ್ವಾಮಿ ಹತ್ಯೆಯಲ್ಲಿ ಈ ವಿಚಾರಕ್ಕೆ ತಿಲಾಂಜಲಿ ಬಿಟ್ಟಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago