ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 19 ಮಂದಿಯ ಬಂಧನವಾಗಿದೆ. ಪವಿತ್ರಾ ಗೌಡರಿಗೆ ಅಶ್ಲೀಲ ಮೆಸೆಜ್ ಕಳುಹಿಸಿದ ಕಾರಣಕ್ಕಾಗಿ ರೇಣುಕಾಸ್ವಾಮಿ ಹತ್ಯೆ ಮಾಡಲಾಗಿತ್ತು ಎಂದು ಹೇಳಲಾಗಿದ್ದು, ಈ ಇಬ್ಬರ ನಡುವಿನ ಚಾಟ್ ಹಿಸ್ಟರಿ ಬಯಲಾಗಿದೆ.
ನಟಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ್ದ ಎನ್ನಲಾದ ಅಶ್ಲೀಲ ಮೆಸೆಜ್ ರಹಸ್ಯ ಬಯಲಾಗಿದ್ದು, ಕಳೆದ ಐದು ತಿಂಗಳಿನಿಂದ ರೇಣುಕಾಸ್ವಾಮಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೆಜ್ ಮಾಡುತ್ತಿದ್ದ ಎನ್ನುವ ಸತ್ಯ ಬಯಲಿಗೆ ಬಂದಿದೆ.
ಕಳೆದ ಫೆಬ್ರವರಿಯಿಂದ ಇಲ್ಲಿಯವರೆಗೆ 200ಕ್ಕೂ ಅಧಿಕ ಅಶ್ಲೀಲ್ ಮೆಸೆಜ್ಗಳನ್ನು ರೇಣುಕಾಸ್ವಾಮಿ ಮಾಡಿದ್ದ ಎಂಬುದು ತನಿಖೆ ವೇಳೆ ಬಯಲಿಗೆ ಬಂದಿದೆ. ಆದರೆ ಇದ್ಯಾವುದಕ್ಕೂ ಪವಿತ್ರಾ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ರೇಣುಕಾಸ್ವಾಮಿ ತನ್ನ ಖಾಸಗಿ ಅಂದ ಫೋಟೋವನ್ನು ಹಂಚಿಕೊಂಡಿದ್ದ.
ಇದರಿಂದ ಕೋಪಗೊಂಡ ಪವಿತ್ರಾ ಗೌಡ ಘಟನೆಯ ವಿಚಾರವನ್ನು ತನ್ನ ಸಹಾಯಕ ಮೋಹನ್ಗೆ ತಿಳಿಸಿದ್ದಾರೆ. ಪವನ್, ಪವಿತ್ರಾ ಗೌಡ ರೀತಿಯಲ್ಲಿ ಮೆಸೆಜ್ ಮಾಡಿ ರೇಣುಕಾಸ್ವಾಮಿ ಜತೆ ಮಾತನಾಡಿದ್ದಾನೆ. ಇದರಿಂದ ಖುಷಿಗೊಂಡ ರೇಣುಕಾಸ್ವಾಮಿ ಪವನ್ ಹೇಳಿದಂತೆ ತನ್ನ ಫೋಟೋವನ್ನು ಹಂಚಿಕೊಂಡಿದ್ದಾನೆ. ಫೋಟೋದೊಂದಿಗೆ ಜಾಡು ಹಿಡಿದ ಡಿ ಗ್ಯಾಂಗ್, ಅಲ್ಲಿಂದ ರೇಣುಕಾಸ್ವಾಮಿ ಹತ್ಯೆಯಲ್ಲಿ ಈ ವಿಚಾರಕ್ಕೆ ತಿಲಾಂಜಲಿ ಬಿಟ್ಟಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…