ಮನರಂಜನೆ

ರಿಷಬ್‌ ಶೆಟ್ಟಿ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್‍ ಉಡುಗೊರೆ

ನಟ-ನಿರ್ದೇಶಕ ರಿಷಬ್ ಶೆಟ್ಟಿ‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್‌ ಉಡುಗೊರೆ ನೀಡಿದೆ. ‘ಕಾಂತಾರ ಚಾಪ್ಟರ್‌ 1’ ಚಿತ್ರವು ಅಕ್ಟೋಬರ್‌.2ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಅದಕ್ಕೂ ಮೊದಲು ರಿಷಬ್‌ ಶೆಟ್ಟಿ ಜನ್ಮದಿನದ ಪ್ರಯುಕ್ತ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ.

‘ದಂತಕಥೆಯ ಮುನ್ನುಡಿ … ಆ ನುಡಿಗೊಂದು ಪರಿಚಯ … ಮನದಾಳದ ಕಥೆಗೆ ಮತ್ತೊಮ್ಮೆ ಸ್ವಾಗತ’ ಎಂಬ ಕ್ಯಾಪ್ಷನ್‌ ಮೂಲಕ ‘ಕಾಂತಾರ ಚಾಪ್ಟರ್‌ 1’ ಚಿತ್ರದ ಹೊಸ ಲುಕ್‌ ಬಿಡುಗಡೆ ಮಾಡಿದೆ ಹೊಂಬಾಳೆ ಫಿಲಂಸ್‌. ಈ ಹೊಸ ಪೋಸ್ಟರ್‌ನಲ್ಲಿ ರಿಷಬ್‌ ಶೆಟ್ಟಿ ಹಿಂದೆಂದೂ ಕಾಣದ ಲುಕ್‌ನಲ್ಲಿ ಕಂಡಿದ್ದಾರೆ.

ಎಸ್‍.ಎಸ್‍. ರಾಜಮೌಳಿ ನಿರ್ದೇಶನನದ ‘RRR’ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದವರು ಟೊಡರ್ ಲ್ಯಾಜರೋವ್. ಇದೀಗ ‘ಕಾಂತಾರ’ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಿದ್ದಾರೆ. ಆ ನಿಮಿತ್ತ ಬಲ್ಗೇರಿಯಾದಿಂದ ಕುಂದಾಪುರಕ್ಕೆ ಆಗಮಿಸಿದ್ದ ಅವರು ಈ ಚಿತ್ರಕ್ಕೆ ಎರಡು ಫೈಟ್‍ಗಳನ್ನು ನಿರ್ದೇಶಿಸಿದ್ದಾರಂತೆ.

‘ಕಾಂತಾರ: ಅಧ್ಯಾಯ 1’ ಚಿತ್ರವು ಆಧ್ಯಾತ್ಮ ಮತ್ತು ಸಾಹಸಗಾಥೆಯ ಸಮ್ಮಿಶ್ರಣದ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಕುಂದಾಪುರದಲ್ಲಿ ಬರೋಬ್ಬರಿ 25 ಎಕರೆ ಪ್ರದೇಶದಲ್ಲಿ ಬೃಹತ್‌ ಸೆಟ್‌ ಹಾಕಿ ಚಿತ್ರೀಕರಣ ಮಾಡಲಾಗಿದೆಯಂತೆ. ಕಾಲ್ಪನಿಕ ಊರೊಂದನ್ನು ನಿರ್ಮಿಸಿ, ಅಲ್ಲಿ ನೂರಾರು ದಿನಗಳ ಚಿತ್ರೀಕರಣ ಮಾಡಲಾಗಿದೆ. ಭಾರತೀಯ ಹಾಗೂ ಅಂತರರಾಷ್ಟ್ರೀಯ ತಂತ್ರಜ್ಞರೂ ಈ ಸಿನಿಮಾಕ್ಕೆ ಕೈ ಜೋಡಿಸಿದ್ದಾರೆ. 45 ರಿಂದ 50 ದಿನಗಳ ಕಾಲ ಸುಮಾರು 500 ತರಬೇತಿದಾರರು, 3000ಕ್ಕೂ ಹೆಚ್ಚು ಜೂನಿಯರ್‌ ಕಲಾವಿದರು ಈ ಸಿನಿಮಾದ ಶೂಟಿಂಗ್‌ನಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್‍ ಕಿರಗಂದೂರು ನಿರ್ಮಿಸುತ್ತಿದ್ದು, ಚಿತ್ರದ ಚಿತ್ರೀಕರಣ ಕಳೆದ ವರ್ಷದಿಂದ ಸತತವಾಗಿ ಕುಂದಾಪುರದ ಸುತ್ತಮುತ್ತ ಭರದಿಂದಸಾಗುತ್ತಿದೆ. ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು ಕನ್ನಡದಲ್ಲಿ ನಿರ್ಮಾಣವಾಗಿ, ನಂತರ ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಬೇರೆ ಭಾಷೆಗಳಿಗೆ ಡಬ್‍ ಆಗಿ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

2 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

2 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

2 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

2 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

2 hours ago