ಮನರಂಜನೆ

ವಿಶೇಷ ರೀತಿಯಲ್ಲಿ ಪ್ರಧಾನಿ ಮೋದಿಗೆ ಶುಭ ಕೋರಿದ ಡಿವೈನ್‌ ಸ್ಟಾರ್‌

ನರೇಂದ್ರ ಮೋದಿ ಅವರು ಭಾನುವಾರ (ಜೂನ್‌.9) ಸತತ ಮೂರನೇ ಬಾರಿಗೆ ಭಾರತ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ಕೋಟ್ಯಾಂತರ ಅಭಿಮಾನಿಗಳು ಶುಭ ಕೋರಿದ್ದಾರೆ. ಅದರಲ್ಲಿ ಕನ್ನಡದ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಅವರು ತಮ್ಮದೇ ಶೈಲಿಯಲ್ಲಿ ವಿಶಿಷ್ಟವಾಗಿ ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಶುಭಾಷಯ ತಿಳಿಸಿದ್ದಾರೆ.

ಇನ್ನು ಇವರ ಟ್ವೀಟ್‌ಗೆ ಸಾವಿರಾರು ಮಂದು ರೀ-ಟ್ವೀಟ್‌ ಮಾಡಿದ್ದು, ಶೆಟ್ರು ಟ್ವೀಟ್‌ ಸದ್ಯ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ರಿಷಭ್‌ ಶೆಟ್ಟಿ ಟ್ವೀಟ್‌: “ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಅಭಿವೃದ್ಧಿ, ಶಿಕ್ಷಣ ಮತ್ತು ರಾಷ್ಟ್ರೀಯ ಸುರಕ್ಷತೆಯ ಬಗೆಗಿನ ನಿಮ್ಮ ಸಮರ್ಪಣೆಯನ್ನು ನಾವು ಗೌರವಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.

ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆಯಲ್ಲಿ ಕರ್ನಾಟಕದ ಐದು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಈ ಕಾರ್ಯಕ್ರಮಕ್ಕೆ ದೇಶ-ವಿದೇಶ ಸೇರಿದಂತೆ ಒಟ್ಟು 8 ಸಾವಿರಕ್ಕೂ ಅಧಿಕ ಮಂದಿಗೆ ಆಹ್ವಾನ ನೀಡಲಾಗಿತ್ತು. ಇದರಲ್ಲಿ ಅನೇಕ ಸೆಲೆಬ್ರೆಟಿಗಳು ಭಾಗವಹಿಸಿದ್ದರು.

https://x.com/shetty_rishab/status/1799705478190272540

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

18 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

18 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

18 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

18 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

18 hours ago