Categories: ಮನರಂಜನೆ

ಕಾಂತಾರ ಚಾಪ್ಟರ್-1 ಬಗ್ಗೆ ಬಿಗ್‌ ಅಪಡೇಟ್‌ ನೀಡಿದ ರಿಷಬ್‌ ಶೆಟ್ಟಿ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ರಿಷಬ್‌ ಶೆಟ್ಟಿ  ಕಾಂತಾರ ಚಾಪ್ಟರ್‌-1 ಸಿನಿಮಾದ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ್ದು, ಸಿನಿಮಾವು  2025ರ ಅಕ್ಟೋಬರ್‌ 2ರಂದು ವಿಶ್ವದಾದ್ಯಂತ ಪ್ರದರ್ಶನವಾಗಲಿದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ದಕ್ಷಿಣ ಭಾರತ ಖ್ಯಾತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಸ್ಮ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಇದೊಂದು ಬನವಾಸಿ ಕದಂಬರ ಕಾಲದ ಕಥೆ ಇರುವ ಸಿನಿಮಾವಾಗಿದೆ. ಇದು ವಿಶ್ವದಾದ್ಯಂತ ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದಿದ್ದಾರೆ.

ರಿಷಬ್‌ಶೆಟ್ಟಿ ಈಗಾಗಲೇ ಕಾಂತಾರ ಚಾಪ್ಟರ್-1‌ ಸಿನಿಮಾದ ಪೋಸ್ಟರ್‌ಅನ್ನು ಬಿಡುಗಡೆ ಮಾಡಿದ್ದು, ಈ ಚಿತ್ರದ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ.

60 ದಿನಗಳ ಕಾಲ ನಿರಂತರ ಚಿತ್ರೀಕರಣ
ಹೊಂಬಾಳೆ ಸಂಸ್ಥೆಯೂ ಕಾಂತಾರ ಚಾಪ್ಟರ್‌-1 ಚಿತ್ರೀಕರಣಕ್ಕಾಗಿ ಕುಂದಾಪುರದಲ್ಲಿ ಸೆಟ್‌ ಹಾಕಿದೆ. ಇಲ್ಲಿ 60 ದಿನಗಳ ಕಾಲ ನಿರಂತರವಾಗಿ ಸಾಹಸ ಸನ್ನಿವೇಶಗಳ ಚಿತ್ರೀಕರಣವನ್ನು ಮಾಡಲಾಗುತ್ತಿದೆ. ಈ ಸಾಹಸಮಯ ಸನ್ನಿವೇಶಗಳನ್ನು ತೆಲುಗಿನ ಆರ್‌ಆರ್‌ಆರ್‌ ಸಿನಿಮಾ ಖ್ಯಾತಿಯ ಆಕ್ಷನ್‌ ನಿರ್ದೇಶಕ ಟೊಡರ್‌ ಲ್ಯಾಜರೋವ್‌ ಅವರು ಕರಾವಳಿ ನೆಲದ ದಂತಕತೆಗೆ ಸಾಹಸ ನಿರ್ದೇಶನ ಮಾಡಲಿದ್ದಾರೆ. ಅಲ್ಲದೇ ಚಿತ್ರದ ಸಾಹಸಮಯ ದೃಶ್ಯಾವಳಿಗಳು ಮುಗಿದ ನಂತರ ಹಾಡಿನ ಚಿತ್ರೀಕರಣ ನಡೆಯಲಿದೆ ಎಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

11 mins ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

36 mins ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

2 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

2 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

5 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

5 hours ago