ಬೆಂಗಳೂರು: ಸ್ಯಾಂಡಲ್ವುಡ್ ನಟ ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್-1 ಸಿನಿಮಾದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದು, ಸಿನಿಮಾವು 2025ರ ಅಕ್ಟೋಬರ್ 2ರಂದು ವಿಶ್ವದಾದ್ಯಂತ ಪ್ರದರ್ಶನವಾಗಲಿದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ದಕ್ಷಿಣ ಭಾರತ ಖ್ಯಾತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಸ್ಮ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಇದೊಂದು ಬನವಾಸಿ ಕದಂಬರ ಕಾಲದ ಕಥೆ ಇರುವ ಸಿನಿಮಾವಾಗಿದೆ. ಇದು ವಿಶ್ವದಾದ್ಯಂತ ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದಿದ್ದಾರೆ.
ರಿಷಬ್ಶೆಟ್ಟಿ ಈಗಾಗಲೇ ಕಾಂತಾರ ಚಾಪ್ಟರ್-1 ಸಿನಿಮಾದ ಪೋಸ್ಟರ್ಅನ್ನು ಬಿಡುಗಡೆ ಮಾಡಿದ್ದು, ಈ ಚಿತ್ರದ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ.
60 ದಿನಗಳ ಕಾಲ ನಿರಂತರ ಚಿತ್ರೀಕರಣ
ಹೊಂಬಾಳೆ ಸಂಸ್ಥೆಯೂ ಕಾಂತಾರ ಚಾಪ್ಟರ್-1 ಚಿತ್ರೀಕರಣಕ್ಕಾಗಿ ಕುಂದಾಪುರದಲ್ಲಿ ಸೆಟ್ ಹಾಕಿದೆ. ಇಲ್ಲಿ 60 ದಿನಗಳ ಕಾಲ ನಿರಂತರವಾಗಿ ಸಾಹಸ ಸನ್ನಿವೇಶಗಳ ಚಿತ್ರೀಕರಣವನ್ನು ಮಾಡಲಾಗುತ್ತಿದೆ. ಈ ಸಾಹಸಮಯ ಸನ್ನಿವೇಶಗಳನ್ನು ತೆಲುಗಿನ ಆರ್ಆರ್ಆರ್ ಸಿನಿಮಾ ಖ್ಯಾತಿಯ ಆಕ್ಷನ್ ನಿರ್ದೇಶಕ ಟೊಡರ್ ಲ್ಯಾಜರೋವ್ ಅವರು ಕರಾವಳಿ ನೆಲದ ದಂತಕತೆಗೆ ಸಾಹಸ ನಿರ್ದೇಶನ ಮಾಡಲಿದ್ದಾರೆ. ಅಲ್ಲದೇ ಚಿತ್ರದ ಸಾಹಸಮಯ ದೃಶ್ಯಾವಳಿಗಳು ಮುಗಿದ ನಂತರ ಹಾಡಿನ ಚಿತ್ರೀಕರಣ ನಡೆಯಲಿದೆ ಎಂದು ತಿಳಿಸಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…