rishb shetty
ತೆಲುಗಿನ ಜನಪ್ರಿಯ ಹಾಗೂ ಯಶಸ್ವಿ ಚಿತ್ರ ನಿರ್ಮಾಣ ಸಂಸ್ಥೆ ಸಿತಾರಾ ಎಂಟರ್ಟೈನ್ಮೆಂಟ್ಸ್, ಇದೀಗ ಮತ್ತೊಂದು ದೊಡ್ಡ ಚಿತ್ರಕ್ಕೆ ಕೈಹಾಕಿದೆ. ‘ಪ್ರೊಡಕ್ಷನ್ ನಂಬರ್ 36’ ಹೆಸರಿನ ಬಿಗ್ ಬಜೆಟ್ ಸಿನಿಮಾ ಘೋಷಣೆ ಮಾಡಿದ್ದು, ಈ ಮೂಲಕ ಕನ್ನಡ ಸಿನಿಮಾ ನಿರ್ಮಾಣಕ್ಕೆ ಪಾದಾರ್ಪಣೆ ಮಾಡುತ್ತಿದೆ.
ಐತಿಹಾಸಿಕ ಆಕ್ಷನ್ ಡ್ರಾಮಾ ಹಿನ್ನೆಲೆಯ ಈ ಸಿನಿಮಾದಲ್ಲಿ ನಟ-ನಿರ್ದೇಶಕ ರಿಷಬ್ ಶೆಟ್ಟಿ ನಾಯಕನಾಗಿ ನಟಿಸಲಿದ್ದಾರೆ. ಚಿತ್ರದ ಘೋಷಣಾ ಪೋಸ್ಟರ್ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ಸಿತಾರ ಎಂಟರ್ಟೈನ್ಮೆಂಟ್ ಹಾಗೂ ಫಾರ್ಚೂನ್ ಫೋರ್ ಸಿನಿಮಾಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. 18ನೇ ಶತಮಾನದ ಕಥೆ ಈ ಚಿತ್ರದಲ್ಲಿದ್ದು, ಈ ಐತಿಹಾಸಿಕ ಸಿನಿಮಾದ ನಿರ್ದೇಶನದ ಹೊಣೆ ಹೊತ್ತಿರುವವರು ನಿರ್ದೇಶಕ ಅಶ್ವಿನ್ ಗಂಗರಾಜು.
ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಒಂದೇ ಸಮಯದಲ್ಲಿ ಚಿತ್ರೀಕರಿಸಲು ಪ್ಲಾನ್ ಮಾಡಲಾಗಿದೆ. ಇನ್ನುಳಿದಂತೆ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಿಗೆ ಡಬ್ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಇನ್ನುಳಿದಂತೆ ಈ ಸಿನಿಮಾದ ತಾಂತ್ರಿಕ ವರ್ಗದಲ್ಲಿ ಬಹುತೇಕ ಕನ್ನಡಿಗರು ಕೆಲಸ ಮಾಡುವುದರ ಜೊತೆಗೆ, ಬುಹುಭಾಗ ಚಿತ್ರೀಕರಣ ಕರ್ನಾಟಕದಲ್ಲೇ ಮಾಡಲಾಗುವುದು.
ಇದು ರಿಷಭ್ ಶೆಟ್ಟಿ ಇತ್ತೀಚಿನ ವರ್ಷಗಳಲ್ಲಿ ಒಪ್ಪಿಕೊಂಡಿರುವ ಮೂರನೇ ಪ್ಯಾನ್ ಇಂಡಿಯಾ ಚಿತ್ರ. ಇದಕ್ಕೂ ಮೊದಲು ಅವರು ‘ಜೈ ಹನುಮಾನ್’ ಮತ್ತು ‘ದಿ ಪ್ರೈಡ್ ಆಫ್ ಭಾರತ್ – ಛತ್ರಪತಿ ಶಿವಾಜಿ ಮಹಾರಾಜ್’ ಎಂಬ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ನಾಯಕನಾಗಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದು, ಆ ಚಿತ್ರಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ. ಈ ಪೈಕಿ ಒಂದು ಪೌರಾಣಿಕ ಕಂ ಸಾಮಾಜಿಕ ಚಿತ್ರವಾದರೆ, ಇನ್ನೊಂದು ಐತಿಹಾಸಿಕ ಚಿತ್ರ. ಈ ಚಿತ್ರ ಐತಿಹಾಸಿಕ ಚಿತ್ರ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ, ಅವರು ‘ಕಾಂತಾರ – ಚಾಪ್ಟರ್ 1’ ಚಿತ್ರದಲ್ಲಿ ನಟಿಸಿ ನಿರ್ದೇಶಿಸಿದ್ದು, ಆ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಚಿತ್ರವು ಅಕ್ಟೋಬರ್.02ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…