ಮನರಂಜನೆ

ಮತ್ತೊಂದು ಪ್ಯಾನ್‍ ಇಂಡಿಯಾ ಚಿತ್ರದಲ್ಲಿ ರಿಷಭ್‍ ಶೆಟ್ಟಿ

ತೆಲುಗಿನ ಜನಪ್ರಿಯ ಹಾಗೂ ಯಶಸ್ವಿ ಚಿತ್ರ ನಿರ್ಮಾಣ ಸಂಸ್ಥೆ ಸಿತಾರಾ ಎಂಟರ್‌ಟೈನ್‌ಮೆಂಟ್ಸ್, ಇದೀಗ ಮತ್ತೊಂದು ದೊಡ್ಡ ಚಿತ್ರಕ್ಕೆ ಕೈಹಾಕಿದೆ. ‘ಪ್ರೊಡಕ್ಷನ್‌ ನಂಬರ್‌ 36’ ಹೆಸರಿನ ಬಿಗ್‌ ಬಜೆಟ್‌ ಸಿನಿಮಾ ಘೋಷಣೆ ಮಾಡಿದ್ದು, ಈ ಮೂಲಕ ಕನ್ನಡ ಸಿನಿಮಾ ನಿರ್ಮಾಣಕ್ಕೆ ಪಾದಾರ್ಪಣೆ ಮಾಡುತ್ತಿದೆ.

ಐತಿಹಾಸಿಕ ಆಕ್ಷನ್‌ ಡ್ರಾಮಾ ಹಿನ್ನೆಲೆಯ ಈ ಸಿನಿಮಾದಲ್ಲಿ ನಟ-ನಿರ್ದೇಶಕ ರಿಷಬ್‌ ಶೆಟ್ಟಿ ನಾಯಕನಾಗಿ ನಟಿಸಲಿದ್ದಾರೆ. ಚಿತ್ರದ ಘೋಷಣಾ ಪೋಸ್ಟರ್‍ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ಸಿತಾರ ಎಂಟರ್‌ಟೈನ್‌ಮೆಂಟ್ ಹಾಗೂ ಫಾರ್ಚೂನ್ ಫೋರ್ ಸಿನಿಮಾಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. 18ನೇ ಶತಮಾನದ ಕಥೆ ಈ ಚಿತ್ರದಲ್ಲಿದ್ದು, ಈ ಐತಿಹಾಸಿಕ ಸಿನಿಮಾದ ನಿರ್ದೇಶನದ ಹೊಣೆ ಹೊತ್ತಿರುವವರು ನಿರ್ದೇಶಕ ಅಶ್ವಿನ್ ಗಂಗರಾಜು.

ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಒಂದೇ ಸಮಯದಲ್ಲಿ ಚಿತ್ರೀಕರಿಸಲು ಪ್ಲಾನ್‌ ಮಾಡಲಾಗಿದೆ. ಇನ್ನುಳಿದಂತೆ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಿಗೆ ಡಬ್‌ ಆಗಿ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಇನ್ನುಳಿದಂತೆ ಈ ಸಿನಿಮಾದ ತಾಂತ್ರಿಕ ವರ್ಗದಲ್ಲಿ ಬಹುತೇಕ ಕನ್ನಡಿಗರು ಕೆಲಸ ಮಾಡುವುದರ ಜೊತೆಗೆ, ಬುಹುಭಾಗ ಚಿತ್ರೀಕರಣ ಕರ್ನಾಟಕದಲ್ಲೇ ಮಾಡಲಾಗುವುದು.

ಇದು ರಿಷಭ್‍ ಶೆಟ್ಟಿ ಇತ್ತೀಚಿನ ವರ್ಷಗಳಲ್ಲಿ ಒಪ್ಪಿಕೊಂಡಿರುವ ಮೂರನೇ ಪ್ಯಾನ್‍ ಇಂಡಿಯಾ ಚಿತ್ರ. ಇದಕ್ಕೂ ಮೊದಲು ಅವರು ‘ಜೈ ಹನುಮಾನ್‍’ ಮತ್ತು ‘ದಿ ಪ್ರೈಡ್‍ ಆಫ್‍ ಭಾರತ್‍ – ಛತ್ರಪತಿ ಶಿವಾಜಿ ಮಹಾರಾಜ್‍’ ಎಂಬ ಪ್ಯಾನ್‍ ಇಂಡಿಯಾ ಚಿತ್ರಗಳಲ್ಲಿ ನಾಯಕನಾಗಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದು, ಆ ಚಿತ್ರಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ. ಈ ಪೈಕಿ ಒಂದು ಪೌರಾಣಿಕ ಕಂ ಸಾಮಾಜಿಕ ಚಿತ್ರವಾದರೆ, ಇನ್ನೊಂದು ಐತಿಹಾಸಿಕ ಚಿತ್ರ. ಈ ಚಿತ್ರ ಐತಿಹಾಸಿಕ ಚಿತ್ರ ಎಂದು ಹೇಳಲಾಗುತ್ತಿದೆ.

ಈ ಮಧ್ಯೆ, ಅವರು ‘ಕಾಂತಾರ – ಚಾಪ್ಟರ್ 1’ ಚಿತ್ರದಲ್ಲಿ ನಟಿಸಿ ನಿರ್ದೇಶಿಸಿದ್ದು, ಆ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಭರದಿಂದ ಸಾಗಿದ್ದು, ಚಿತ್ರವು ಅಕ್ಟೋಬರ್.02ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago