ಮನರಂಜನೆ

ಮತ್ತೊಂದು ಪ್ಯಾನ್‍ ಇಂಡಿಯಾ ಚಿತ್ರದಲ್ಲಿ ರಿಷಭ್‍ ಶೆಟ್ಟಿ

ತೆಲುಗಿನ ಜನಪ್ರಿಯ ಹಾಗೂ ಯಶಸ್ವಿ ಚಿತ್ರ ನಿರ್ಮಾಣ ಸಂಸ್ಥೆ ಸಿತಾರಾ ಎಂಟರ್‌ಟೈನ್‌ಮೆಂಟ್ಸ್, ಇದೀಗ ಮತ್ತೊಂದು ದೊಡ್ಡ ಚಿತ್ರಕ್ಕೆ ಕೈಹಾಕಿದೆ. ‘ಪ್ರೊಡಕ್ಷನ್‌ ನಂಬರ್‌ 36’ ಹೆಸರಿನ ಬಿಗ್‌ ಬಜೆಟ್‌ ಸಿನಿಮಾ ಘೋಷಣೆ ಮಾಡಿದ್ದು, ಈ ಮೂಲಕ ಕನ್ನಡ ಸಿನಿಮಾ ನಿರ್ಮಾಣಕ್ಕೆ ಪಾದಾರ್ಪಣೆ ಮಾಡುತ್ತಿದೆ.

ಐತಿಹಾಸಿಕ ಆಕ್ಷನ್‌ ಡ್ರಾಮಾ ಹಿನ್ನೆಲೆಯ ಈ ಸಿನಿಮಾದಲ್ಲಿ ನಟ-ನಿರ್ದೇಶಕ ರಿಷಬ್‌ ಶೆಟ್ಟಿ ನಾಯಕನಾಗಿ ನಟಿಸಲಿದ್ದಾರೆ. ಚಿತ್ರದ ಘೋಷಣಾ ಪೋಸ್ಟರ್‍ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ಸಿತಾರ ಎಂಟರ್‌ಟೈನ್‌ಮೆಂಟ್ ಹಾಗೂ ಫಾರ್ಚೂನ್ ಫೋರ್ ಸಿನಿಮಾಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. 18ನೇ ಶತಮಾನದ ಕಥೆ ಈ ಚಿತ್ರದಲ್ಲಿದ್ದು, ಈ ಐತಿಹಾಸಿಕ ಸಿನಿಮಾದ ನಿರ್ದೇಶನದ ಹೊಣೆ ಹೊತ್ತಿರುವವರು ನಿರ್ದೇಶಕ ಅಶ್ವಿನ್ ಗಂಗರಾಜು.

ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಒಂದೇ ಸಮಯದಲ್ಲಿ ಚಿತ್ರೀಕರಿಸಲು ಪ್ಲಾನ್‌ ಮಾಡಲಾಗಿದೆ. ಇನ್ನುಳಿದಂತೆ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಿಗೆ ಡಬ್‌ ಆಗಿ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಇನ್ನುಳಿದಂತೆ ಈ ಸಿನಿಮಾದ ತಾಂತ್ರಿಕ ವರ್ಗದಲ್ಲಿ ಬಹುತೇಕ ಕನ್ನಡಿಗರು ಕೆಲಸ ಮಾಡುವುದರ ಜೊತೆಗೆ, ಬುಹುಭಾಗ ಚಿತ್ರೀಕರಣ ಕರ್ನಾಟಕದಲ್ಲೇ ಮಾಡಲಾಗುವುದು.

ಇದು ರಿಷಭ್‍ ಶೆಟ್ಟಿ ಇತ್ತೀಚಿನ ವರ್ಷಗಳಲ್ಲಿ ಒಪ್ಪಿಕೊಂಡಿರುವ ಮೂರನೇ ಪ್ಯಾನ್‍ ಇಂಡಿಯಾ ಚಿತ್ರ. ಇದಕ್ಕೂ ಮೊದಲು ಅವರು ‘ಜೈ ಹನುಮಾನ್‍’ ಮತ್ತು ‘ದಿ ಪ್ರೈಡ್‍ ಆಫ್‍ ಭಾರತ್‍ – ಛತ್ರಪತಿ ಶಿವಾಜಿ ಮಹಾರಾಜ್‍’ ಎಂಬ ಪ್ಯಾನ್‍ ಇಂಡಿಯಾ ಚಿತ್ರಗಳಲ್ಲಿ ನಾಯಕನಾಗಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದು, ಆ ಚಿತ್ರಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ. ಈ ಪೈಕಿ ಒಂದು ಪೌರಾಣಿಕ ಕಂ ಸಾಮಾಜಿಕ ಚಿತ್ರವಾದರೆ, ಇನ್ನೊಂದು ಐತಿಹಾಸಿಕ ಚಿತ್ರ. ಈ ಚಿತ್ರ ಐತಿಹಾಸಿಕ ಚಿತ್ರ ಎಂದು ಹೇಳಲಾಗುತ್ತಿದೆ.

ಈ ಮಧ್ಯೆ, ಅವರು ‘ಕಾಂತಾರ – ಚಾಪ್ಟರ್ 1’ ಚಿತ್ರದಲ್ಲಿ ನಟಿಸಿ ನಿರ್ದೇಶಿಸಿದ್ದು, ಆ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಭರದಿಂದ ಸಾಗಿದ್ದು, ಚಿತ್ರವು ಅಕ್ಟೋಬರ್.02ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

2 mins ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

3 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

4 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

7 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

7 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

12 hours ago