ಮನರಂಜನೆ

‘ಹನುಮ್ಯಾನ್‍ 2’ನಲ್ಲಿ ರಿಷಭ್‍ ಶೆಟ್ಟಿ? ತೆಲುಗು ಚಿತ್ರದಲ್ಲಿ ನಟಿಸುವ ಸಾಧ್ಯತೆ

‘ಹನುಮ್ಯಾನ್‍’ ಚಿತ್ರದ ನಂತರ ನಿರ್ದೇಶಕ ಪ್ರಶಾಂತ್‍ ವರ್ಮಾ, ಮುಂದುವರೆದ ಭಾಗ ನಿರ್ದೇಶಿಸುತ್ತಿರುವ ವಿಷಯ ಗೊತ್ತೇ ಇದೆ. ಈ ವರ್ಷದ ಆರಂಭದಲ್ಲಿ, ಅಂದರೆ ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ‘ಹನುಮ್ಯಾನ್‍’ ಚಿತ್ರವನ್ನು ಮಾಡುವುದಾಗಿ ಪ್ರಶಾಂತ್‍ ವರ್ಮ ಘೋಷಿಸಿದ್ದರು.

ಆ ನಂತರ ಆ ಚಿತ್ರದ ಬಗ್ಗೆ ಸುದ್ದಿಯೇ ಇರಲಿಲ್ಲ. ಏಕೆಂದರೆ, ನಂದಮೂರಿ ಬಾಲಕೃಷ್ಣ ಅವರ ಮಗ ಮೋಕ್ಷಜ್ಞ ಅವರನ್ನು ತೆರೆಗೆ ಪರಿಚಯಿಸುವುದಕ್ಕೆ ಪ್ರಶಾಂತ್‍ ವರ್ಮಾ ಮುಂದಾಗಿದ್ದರು. ಕೆಲವು ತಿಂಗಳುಗಳ ಹಿಂದೆ ಮೋಕ್ಷಜ್ಞ ಅಭಿನಯದ ಮೊದಲ ಚಿತ್ರದ ಘೋಷಣೆ ಆಗುವುದರ ಜೊತೆಗೆ, ಚಿತ್ರದ ಮೊದಲ ಪೋಸ್ಟರ್‍ ಸಹ ಬಿಡುಗಡೆಯಾಗಿತ್ತು.

ಇದೀಗ ‘ಹನುಮ್ಯಾನ್‍ 2’ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಈ ಬಾರಿ ಕನ್ನಡದ ನಟ ಮತ್ತು ‘ಕಾಂತಾರ’ ಚಿತ್ರಕ್ಕೆ ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡ ರಿಷಭ್‍ ಶೆಟ್ಟಿ, ಈ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಕೇಳಿಬರುತ್ತದೆ.

‘ಕಾಂತಾರ’ ಚಿತ್ರದ ಯಶಸ್ಸಿನ ನಂತರ, ಬೇರೆ ಭಾಷೆಗಳಲ್ಲಿ ಅವಕಾಶ ಸಿಕ್ಕರೆ ನಟಿಸುತ್ತೀರಾ? ಎಂಬ ಪ್ರಶ್ನೆಯೊಂದು ಸಂದರ್ಶನದಲ್ಲಿ ಎದುರಾದಾಗ, ತಮಗೆ ಕನ್ನಡದಲ್ಲೇ ಮುಂದುವರೆಯುವುದಕ್ಕೆ ಹೆಚ್ಚು ಇಷ್ಟ ಎಂದು ರಿಷಭ್ ಹೇಳಿಕೊಂಡಿದ್ದರು. ಆ ನಂತರವೂ ಆಗಾಗ ಬೇರೆ ಭಾಷೆಯ ಚಿತ್ರಗಳಲ್ಲಿ ರಿಷಭ್‍ ಶೆಟ್ಟಿ ಹೆಸರು ಕೆಲವೊಮ್ಮೆ ಕೇಳಿಬರುತ್ತಿರುತ್ತದೆ.

ಇದೀಗ ‘ಹನುಮ್ಯಾನ್‍ 2’ ಚಿತ್ರದಲ್ಲೂ ರಿಷಭ್‍ ನಟಿಸುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿದ್ದು, ರಿಷಭ್ ಆಗಲೀ, ಪ್ರಶಾಂತ್‍ ವರ್ಮಾ ಆಗಲೀ ಇದನ್ನು ಸ್ಪಷ್ಟಪಡಿಸಿಲ್ಲ. ಸದ್ಯ ಇದೊಂದು ಗಾಳಿಸುದ್ದಿ ಎಂದು ಹೇಳಲಾಗಿದ್ದು, ರಿಷಭ್‍ ಶೆಟ್ಟಿ ಅಥವಾ ಪ್ರಶಾಂತ್‍ ವರ್ಮಾ ಈ ಕುರಿತು ಸ್ಪಷ್ಟನೆ ನೀಡಬೇಕಿದೆ.

ಸದ್ಯ, ‘ಕಾಂತಾರ – ಅಧ್ಯಾಯ 1’ ಚಿತ್ರದಲ್ಲಿ ರಿಷಭ್‍ ನಾಯಕನಾಗಿ ನಟಿಸುವುದರ ಜೊತೆಗೆ, ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಹೊಂಬಾಳೆ ಫಿಲಂಸ್‍ನ ವಿಜಯ್‍ ಕಿರಗಂದೂರು ನಿರ್ಮಿಸುತ್ತಿದ್ದು, ಚಿತ್ರಕ್ಕೆ ಅರವಿಂದ್‍ ಕಶ್ಯಪ್‍ ಛಾಯಾಗ್ರಹಣ ಮತ್ತು ಅಜನೀಶ್ ‍ಲೋಕನಾಥ್‍ ಸಂಗೀತವಿದೆ. ಈ ಚಿತ್ರದ ಚಿತ್ರೀಕರಣ ಸದ್ಯ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ಆಗಸ್ಟ್ನಲ್ಲಿ ಚಿತ್ರ ಬಿಡುಗಡೆ ಆಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

7 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

7 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

8 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

9 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

9 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

9 hours ago