ಮನರಂಜನೆ

ಅಮಿತಾಬ್ ಬಚ್ಚನ್‍ ಎದುರು ಹಾಟ್‍ ಸೀಟ್‍ನಲ್ಲಿ ರಿಷಭ್‍ ಶೆಟ್ಟಿ

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಮೊದಲ ವಾರ 509.25 ಕೋಟಿ ರೂ. ಗಳಿಕೆ ಮಾಡಿತ್ತು ಎಂದು ಚಿತ್ರ ನಿರ್ಮಿಸಿರುವ ಹೊಂಬಾಳೆ ಫಿಲಂಸ್‍ ಸಂಸ್ಥೆಯೇ ಅಧಿಕೃತವಾಗಿ ಘೋಷಿಸಿತ್ತು. ಅದಾಗಿ ನಾಲ್ಕು ದಿನಗಳಲ್ಲಿ ಚಿತ್ರವು ಜಾಗತಿಕವಾಗಿ ಇನ್ನೂ 100 ಕೋಟಿ ರೂ. ಅಧಿಕ ಗಳಿಸಿತ್ತು, ಒಟ್ಟಾರೆ ಚಿತ್ರವು 600 ಕೋಟಿ ರೂ. ಗಳಿಕೆ ಮಾಡಿದೆ.

ಇನ್ನು, ರಿಷಭ್‍ ಶೆಟ್ಟಿ ಮತ್ತು ಚಿತ್ರತಂಡದವರು ದೆಹಲಿ, ಮುಂಬೈ, ಪೂಣೆ ಮುಂತಾದ ನಗರಗಳಿಗೆ ಭೇಟಿ ನೀಡಿ, ಚಿತ್ರವನ್ನು ಸತತವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗೆ, ಮುಂಬೈನಲ್ಲಿ ಬಾಲಿವುಡ್‍ ಸೆಲೆಬ್ರಿಟಿಗಳಿಗೆಂದೇ ವಿಶೇಷ ಪ್ರದರ್ಶನವೊಂದನ್ನು ಆಯೋಜಿಸಲಾಗಿತ್ತು ಮತ್ತು ಇದರಲ್ಲಿ ಸುನೀಲ್‍ ಶೆಟ್ಟಿ, ಗುಲ್ಶನ್‍ ಗ್ರೋವರ್, ಕುಬ್ರಾ ಸೇಠ್‍ ಸೇರಿದಂತೆ ಹಲವರು ಹಾಜರಿದ್ದರು.

ಇದನ್ನು ಓದಿ : ನಿಂತೇ ಹೋಯ್ತಾ ಯುವ, ‘ದುನಿಯಾ’ ಸೂರಿ ಹೊಸ ಸಿನಿಮಾ?

ಇನ್ನು, ರಿಷಭ್‍ ಶೆಟ್ಟಿ, ಪ್ರಗತಿ ಶೆಟ್ಟಿ ಮತ್ತು ರುಕ್ಮಿಣಿ ವಸಂತ್‍ ಮುಂತಾದವರು ಹಲವು ರಾಷ್ಟ್ರೀಯ ವಾಹಿನಿಗಳಿಗೆ ಭೇಟಿ ನೀಡಿ, ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಅದರ ಜೊತೆಗೆ ಅಮಿತಾಭ್‍ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗ ಕರೋಡ್ಪತಿ’ ಸೀಸನ್ 17ರ ಅತಿಥಿಯಾಗಿ ರಿಷಭ್ ಕಾಣಿಸಿಕೊಂಡಿದ್ದಾರೆ. ಅಮಿತಾಭ್‍ ಬಚ್ಚನ್‍ ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಇದೇ ಸಂದರ್ಭದಲ್ಲಿ ರಿಷಭ್‍ ಸಹ ‘ಕೌನ್‍ ಬನೇಗಾ ಕರೋಡ್‍ಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸುವದುರ ಜೊತೆಗೆ, ಅಮಿತಾಭ್‍ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ರಿಷಭ್ ಭಾಗವಹಿಸಿರುವ ಫೋಟೋಗಳು ಸೋಷಿಯಲ್‍ ಮೀಡಿಯಾದಲ್ಲಿ ವೈರಲ್‍ ಆಗಿದೆ.

‘ಕಾಂತಾರ ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್‍, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

6 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

6 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

8 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

8 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

8 hours ago