ಮನರಂಜನೆ

ಅಮಿತಾಬ್ ಬಚ್ಚನ್‍ ಎದುರು ಹಾಟ್‍ ಸೀಟ್‍ನಲ್ಲಿ ರಿಷಭ್‍ ಶೆಟ್ಟಿ

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಮೊದಲ ವಾರ 509.25 ಕೋಟಿ ರೂ. ಗಳಿಕೆ ಮಾಡಿತ್ತು ಎಂದು ಚಿತ್ರ ನಿರ್ಮಿಸಿರುವ ಹೊಂಬಾಳೆ ಫಿಲಂಸ್‍ ಸಂಸ್ಥೆಯೇ ಅಧಿಕೃತವಾಗಿ ಘೋಷಿಸಿತ್ತು. ಅದಾಗಿ ನಾಲ್ಕು ದಿನಗಳಲ್ಲಿ ಚಿತ್ರವು ಜಾಗತಿಕವಾಗಿ ಇನ್ನೂ 100 ಕೋಟಿ ರೂ. ಅಧಿಕ ಗಳಿಸಿತ್ತು, ಒಟ್ಟಾರೆ ಚಿತ್ರವು 600 ಕೋಟಿ ರೂ. ಗಳಿಕೆ ಮಾಡಿದೆ.

ಇನ್ನು, ರಿಷಭ್‍ ಶೆಟ್ಟಿ ಮತ್ತು ಚಿತ್ರತಂಡದವರು ದೆಹಲಿ, ಮುಂಬೈ, ಪೂಣೆ ಮುಂತಾದ ನಗರಗಳಿಗೆ ಭೇಟಿ ನೀಡಿ, ಚಿತ್ರವನ್ನು ಸತತವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗೆ, ಮುಂಬೈನಲ್ಲಿ ಬಾಲಿವುಡ್‍ ಸೆಲೆಬ್ರಿಟಿಗಳಿಗೆಂದೇ ವಿಶೇಷ ಪ್ರದರ್ಶನವೊಂದನ್ನು ಆಯೋಜಿಸಲಾಗಿತ್ತು ಮತ್ತು ಇದರಲ್ಲಿ ಸುನೀಲ್‍ ಶೆಟ್ಟಿ, ಗುಲ್ಶನ್‍ ಗ್ರೋವರ್, ಕುಬ್ರಾ ಸೇಠ್‍ ಸೇರಿದಂತೆ ಹಲವರು ಹಾಜರಿದ್ದರು.

ಇದನ್ನು ಓದಿ : ನಿಂತೇ ಹೋಯ್ತಾ ಯುವ, ‘ದುನಿಯಾ’ ಸೂರಿ ಹೊಸ ಸಿನಿಮಾ?

ಇನ್ನು, ರಿಷಭ್‍ ಶೆಟ್ಟಿ, ಪ್ರಗತಿ ಶೆಟ್ಟಿ ಮತ್ತು ರುಕ್ಮಿಣಿ ವಸಂತ್‍ ಮುಂತಾದವರು ಹಲವು ರಾಷ್ಟ್ರೀಯ ವಾಹಿನಿಗಳಿಗೆ ಭೇಟಿ ನೀಡಿ, ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಅದರ ಜೊತೆಗೆ ಅಮಿತಾಭ್‍ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗ ಕರೋಡ್ಪತಿ’ ಸೀಸನ್ 17ರ ಅತಿಥಿಯಾಗಿ ರಿಷಭ್ ಕಾಣಿಸಿಕೊಂಡಿದ್ದಾರೆ. ಅಮಿತಾಭ್‍ ಬಚ್ಚನ್‍ ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಇದೇ ಸಂದರ್ಭದಲ್ಲಿ ರಿಷಭ್‍ ಸಹ ‘ಕೌನ್‍ ಬನೇಗಾ ಕರೋಡ್‍ಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸುವದುರ ಜೊತೆಗೆ, ಅಮಿತಾಭ್‍ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ರಿಷಭ್ ಭಾಗವಹಿಸಿರುವ ಫೋಟೋಗಳು ಸೋಷಿಯಲ್‍ ಮೀಡಿಯಾದಲ್ಲಿ ವೈರಲ್‍ ಆಗಿದೆ.

‘ಕಾಂತಾರ ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್‍, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

4 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

5 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

5 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

6 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

6 hours ago