ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಮೊದಲ ವಾರ 509.25 ಕೋಟಿ ರೂ. ಗಳಿಕೆ ಮಾಡಿತ್ತು ಎಂದು ಚಿತ್ರ ನಿರ್ಮಿಸಿರುವ ಹೊಂಬಾಳೆ ಫಿಲಂಸ್ ಸಂಸ್ಥೆಯೇ ಅಧಿಕೃತವಾಗಿ ಘೋಷಿಸಿತ್ತು. ಅದಾಗಿ ನಾಲ್ಕು ದಿನಗಳಲ್ಲಿ ಚಿತ್ರವು ಜಾಗತಿಕವಾಗಿ ಇನ್ನೂ 100 ಕೋಟಿ ರೂ. ಅಧಿಕ ಗಳಿಸಿತ್ತು, ಒಟ್ಟಾರೆ ಚಿತ್ರವು 600 ಕೋಟಿ ರೂ. ಗಳಿಕೆ ಮಾಡಿದೆ.
ಇನ್ನು, ರಿಷಭ್ ಶೆಟ್ಟಿ ಮತ್ತು ಚಿತ್ರತಂಡದವರು ದೆಹಲಿ, ಮುಂಬೈ, ಪೂಣೆ ಮುಂತಾದ ನಗರಗಳಿಗೆ ಭೇಟಿ ನೀಡಿ, ಚಿತ್ರವನ್ನು ಸತತವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗೆ, ಮುಂಬೈನಲ್ಲಿ ಬಾಲಿವುಡ್ ಸೆಲೆಬ್ರಿಟಿಗಳಿಗೆಂದೇ ವಿಶೇಷ ಪ್ರದರ್ಶನವೊಂದನ್ನು ಆಯೋಜಿಸಲಾಗಿತ್ತು ಮತ್ತು ಇದರಲ್ಲಿ ಸುನೀಲ್ ಶೆಟ್ಟಿ, ಗುಲ್ಶನ್ ಗ್ರೋವರ್, ಕುಬ್ರಾ ಸೇಠ್ ಸೇರಿದಂತೆ ಹಲವರು ಹಾಜರಿದ್ದರು.
ಇದನ್ನು ಓದಿ : ನಿಂತೇ ಹೋಯ್ತಾ ಯುವ, ‘ದುನಿಯಾ’ ಸೂರಿ ಹೊಸ ಸಿನಿಮಾ?
ಇನ್ನು, ರಿಷಭ್ ಶೆಟ್ಟಿ, ಪ್ರಗತಿ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಮುಂತಾದವರು ಹಲವು ರಾಷ್ಟ್ರೀಯ ವಾಹಿನಿಗಳಿಗೆ ಭೇಟಿ ನೀಡಿ, ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಅದರ ಜೊತೆಗೆ ಅಮಿತಾಭ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗ ಕರೋಡ್ಪತಿ’ ಸೀಸನ್ 17ರ ಅತಿಥಿಯಾಗಿ ರಿಷಭ್ ಕಾಣಿಸಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಇದೇ ಸಂದರ್ಭದಲ್ಲಿ ರಿಷಭ್ ಸಹ ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸುವದುರ ಜೊತೆಗೆ, ಅಮಿತಾಭ್ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ರಿಷಭ್ ಭಾಗವಹಿಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
‘ಕಾಂತಾರ ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಗುಲ್ಶನ್ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಿದೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…