ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಮೊದಲ ವಾರ 509.25 ಕೋಟಿ ರೂ. ಗಳಿಕೆ ಮಾಡಿತ್ತು ಎಂದು ಚಿತ್ರ ನಿರ್ಮಿಸಿರುವ ಹೊಂಬಾಳೆ ಫಿಲಂಸ್ ಸಂಸ್ಥೆಯೇ ಅಧಿಕೃತವಾಗಿ ಘೋಷಿಸಿತ್ತು. ಅದಾಗಿ ನಾಲ್ಕು ದಿನಗಳಲ್ಲಿ ಚಿತ್ರವು ಜಾಗತಿಕವಾಗಿ ಇನ್ನೂ 100 ಕೋಟಿ ರೂ. ಅಧಿಕ ಗಳಿಸಿತ್ತು, ಒಟ್ಟಾರೆ ಚಿತ್ರವು 600 ಕೋಟಿ ರೂ. ಗಳಿಕೆ ಮಾಡಿದೆ.
ಇನ್ನು, ರಿಷಭ್ ಶೆಟ್ಟಿ ಮತ್ತು ಚಿತ್ರತಂಡದವರು ದೆಹಲಿ, ಮುಂಬೈ, ಪೂಣೆ ಮುಂತಾದ ನಗರಗಳಿಗೆ ಭೇಟಿ ನೀಡಿ, ಚಿತ್ರವನ್ನು ಸತತವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗೆ, ಮುಂಬೈನಲ್ಲಿ ಬಾಲಿವುಡ್ ಸೆಲೆಬ್ರಿಟಿಗಳಿಗೆಂದೇ ವಿಶೇಷ ಪ್ರದರ್ಶನವೊಂದನ್ನು ಆಯೋಜಿಸಲಾಗಿತ್ತು ಮತ್ತು ಇದರಲ್ಲಿ ಸುನೀಲ್ ಶೆಟ್ಟಿ, ಗುಲ್ಶನ್ ಗ್ರೋವರ್, ಕುಬ್ರಾ ಸೇಠ್ ಸೇರಿದಂತೆ ಹಲವರು ಹಾಜರಿದ್ದರು.
ಇದನ್ನು ಓದಿ : ನಿಂತೇ ಹೋಯ್ತಾ ಯುವ, ‘ದುನಿಯಾ’ ಸೂರಿ ಹೊಸ ಸಿನಿಮಾ?
ಇನ್ನು, ರಿಷಭ್ ಶೆಟ್ಟಿ, ಪ್ರಗತಿ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಮುಂತಾದವರು ಹಲವು ರಾಷ್ಟ್ರೀಯ ವಾಹಿನಿಗಳಿಗೆ ಭೇಟಿ ನೀಡಿ, ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಅದರ ಜೊತೆಗೆ ಅಮಿತಾಭ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗ ಕರೋಡ್ಪತಿ’ ಸೀಸನ್ 17ರ ಅತಿಥಿಯಾಗಿ ರಿಷಭ್ ಕಾಣಿಸಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಇದೇ ಸಂದರ್ಭದಲ್ಲಿ ರಿಷಭ್ ಸಹ ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸುವದುರ ಜೊತೆಗೆ, ಅಮಿತಾಭ್ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ರಿಷಭ್ ಭಾಗವಹಿಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
‘ಕಾಂತಾರ ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಗುಲ್ಶನ್ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…