ಮನರಂಜನೆ

ಕಾಂತಾರ 1’ ಚಿತ್ರಕ್ಕಾಗಿ ಕಲರಿಪಯಟ್ಟು ಕಲಿಯುತ್ತಿರುವ ರಿಷಭ್‍ ಶೆಟ್ಟಿ

ಇತ್ತೀಚೆಗೆ ನಡೆದ ‘ ಲಾಫಿಂಗ್‍ ಬುದ್ಧ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಆ ಚಿತ್ರದ ನಿರ್ಮಾಪಕ ರಿಷಭ್‍ ಶೆಟ್ಟಿ ಸಹ ಹಾಜರಿದ್ದರು. ಈ ಸಂದರ್ಭದಲ್ಲಿ ‘ಕಾಂತಾರ – ಅಧ್ಯಾಯ 1’ ಎಲ್ಲಿಯವರೆಗೂ ಬಂತು ಎಂಬ ಪ್ರಶ್ನೆಯೂ ಕೇಳಿಬಂತು. ಅದಕ್ಕೆ ಉತ್ತರಿಸಿದ್ದ ರಿಷಭ್ ಶೆಟ್ಟಿ, ಹೇಳುವುದಕ್ಕೂ ಕೇಳುವುದಕ್ಕೂ ಇದು ಸಮಯವಲ್ಲ ಎಂದು ಹೇಳಿದ್ದರು.

ಹೀಗಿರುವಾಗಲೇ, ರಿಷಭ್‍ ಶೆಟ್ಟಿ ಕಡೆಯಿಂದ ಒಂದು ಅಪ್‍ಡೇಟ್‍ ಬಂದಿದೆ. ತಮ್ಮ ಎಕ್ಸ್ ಖಾತೆ ಮೂಲಕ ರಿಷಭ್‍, ಕಲರಿಪಯಟ್ಟು ಕಲಿಯುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದಕ್ಕೂ ಮೊದಲು ಚಿತ್ರಕ್ಕಾಗಿ ಕುದುರೆ ಸವಾರಿಯನ್ನು ಕಲಿಯುತ್ತಿರುವುದಾಗಿ ಹೇಳಿಕೊಂಡಿದ್ದರು. ಇದೀಗ ಅವರು ಪ್ರಾಚೀನ ಸಮರಕಲೆಯಾದ ಕಲರಿಪಯಟ್ಟು ಕಲಿಯುತ್ತಿದ್ದು, ‘ಕಾಂತಾರ – ಅಧ್ಯಾಯ 1’ರಲ್ಲಿ ಕಲೆ ಪ್ರದರ್ಶಿಸಲಿದ್ದಾರೆ.

ಮೂಲಗಳ ಪ್ರಕಾರ, ಕಳೆದ ಒಂದು ವರ್ಷದಿಂದ ರಿಷಭ್, ಈ ಕಲೆಯನ್‍ನು ಕಲಿಯುತ್ತಿದ್ದಾರಂತೆ. ಕೇರಳದಿಂದ ಒಂದು ತಂಡ ಬಂದು ರಿಷಭ್‍ಗೆ ಕಲರಿಪಯಟ್ಟು ಕಲಿಸುತ್ತಿದ್ದಾರಂತೆ. ಈ ಚಿತ್ರದಲ್ಲಿ ಸಾಹಸ ದೃಶ್ಯಗಳಲ್ಲಿ ಕಲರಿಪಯಟ್ಟು ಬಳಸಿಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.

ರಿಷಭ್‍ ಶೆಟ್ಟಿ ಕಳೆದ ಕೆಲವು ತಿಂಗಳುಗಳಿಂದ ‘ಕಾಂತಾರ – ಅಧ್ಯಾಯ 1’ ಚಿತ್ರಕ್ಕಾಗಿ ಕುಂದಾಪುರ ಬಳಿ ಬೀಡು ಬಿಟ್ಟಿದ್ದಾರೆ. ಈ ಕುರಿತು ಕೆಲವು ತಿಂಗಳುಗಳ ಹಿಂದೆ ಮಾತನಾಡಿದ್ದ ಅವರು, ‘ಚಿತ್ರಕ್ಕಾಗಿ ಕುಂದಾಪುರ ಬಳಿ ದೊಡ್ಡ ಸ್ಟುಡಿಯೋ ಮಾಡಿ, ಅಲ್ಲಿ ಸೆಟ್‍ಗಳನ್ನು ಹಾಕಿ ಚಿತ್ರೀಕರಣ ಮಾಡುತ್ತಿದ್ದೇವೆ. ಹೊರಾಂಗಣ, ಒಳಾಂಗಣ ಎಲ್ಲವೂ ಅಲ್ಲೇ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಈ ಚಿತ್ರಕ್ಕಾಗಿ 10 ಕೆಜಿ ತೂಕ ಹೆಚ್ಚಿಸಿ, ಆ ನಂತರ 8 ಕೆಜಿ ತೂಕ ಇಳಿಸಿದ್ದೇನೆ. ಈ ಚಿತ್ರಕ್ಕಾಗಿ ಕಲರಿಪಯಟ್ಟು ಕಲಿಯುತ್ತಿದ್ದೇನೆ. 100ಕ್ಕೂ ಹೆಚ್ಚು ದಿನಗಳ ಚಿತ್ರೀಕರಣವಾಗಲಿದೆ. ಕನ್ನಡದಲ್ಲಿ ಚಿತ್ರೀಕರಣ ಮಾಡಿ, ಆ ನಂತರ ಬೇರೆಬೇರೆ ಭಾಷೆಗಳಿಗೆ ಡಬ್‍ ಮಾಡುತ್ತೇನೆ. ಈ ವರ್ಷ ಚಿತ್ರೀಕರಣ ಮುಗಿಯುತ್ತದೆ. ಬಿಡುಗಡೆ ಮುಂದಿನ ವರ್ಷ ಆಗುತ್ತದೆ’ ಎಂದು ಹೇಳಿದ್ದರು.
‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್‍ ಕಿರಗಂದೂರು ನಿರ್ಮಿಸುತ್ತಿದ್ದು, ಚಿತ್ರಕ್ಕೆ ಅರವಿಂದ್‍ ಕಶ್ಯಪ್‍ ಛಾಯಾಗ್ರಹಣ ಮತ್ತು ಅಜನೀಶ್ ‍ಲೋಕನಾಥ್‍ ಸಂಗೀತವಿದೆ. ಇನ್ನು, ರಿಷಭ್‍ ಪತ್ನಿ ಪ್ರಗತಿ ಶೆಟ್ಟಿ ಈ ಚಿತ್ರಕ್ಕೆ ವಸ್ತ್ರ ವಿನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

3 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

3 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

3 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

4 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

4 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

6 hours ago