ಮನರಂಜನೆ

ಕಾಂತಾರ 1’ ಚಿತ್ರಕ್ಕಾಗಿ ಕಲರಿಪಯಟ್ಟು ಕಲಿಯುತ್ತಿರುವ ರಿಷಭ್‍ ಶೆಟ್ಟಿ

ಇತ್ತೀಚೆಗೆ ನಡೆದ ‘ ಲಾಫಿಂಗ್‍ ಬುದ್ಧ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಆ ಚಿತ್ರದ ನಿರ್ಮಾಪಕ ರಿಷಭ್‍ ಶೆಟ್ಟಿ ಸಹ ಹಾಜರಿದ್ದರು. ಈ ಸಂದರ್ಭದಲ್ಲಿ ‘ಕಾಂತಾರ – ಅಧ್ಯಾಯ 1’ ಎಲ್ಲಿಯವರೆಗೂ ಬಂತು ಎಂಬ ಪ್ರಶ್ನೆಯೂ ಕೇಳಿಬಂತು. ಅದಕ್ಕೆ ಉತ್ತರಿಸಿದ್ದ ರಿಷಭ್ ಶೆಟ್ಟಿ, ಹೇಳುವುದಕ್ಕೂ ಕೇಳುವುದಕ್ಕೂ ಇದು ಸಮಯವಲ್ಲ ಎಂದು ಹೇಳಿದ್ದರು.

ಹೀಗಿರುವಾಗಲೇ, ರಿಷಭ್‍ ಶೆಟ್ಟಿ ಕಡೆಯಿಂದ ಒಂದು ಅಪ್‍ಡೇಟ್‍ ಬಂದಿದೆ. ತಮ್ಮ ಎಕ್ಸ್ ಖಾತೆ ಮೂಲಕ ರಿಷಭ್‍, ಕಲರಿಪಯಟ್ಟು ಕಲಿಯುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದಕ್ಕೂ ಮೊದಲು ಚಿತ್ರಕ್ಕಾಗಿ ಕುದುರೆ ಸವಾರಿಯನ್ನು ಕಲಿಯುತ್ತಿರುವುದಾಗಿ ಹೇಳಿಕೊಂಡಿದ್ದರು. ಇದೀಗ ಅವರು ಪ್ರಾಚೀನ ಸಮರಕಲೆಯಾದ ಕಲರಿಪಯಟ್ಟು ಕಲಿಯುತ್ತಿದ್ದು, ‘ಕಾಂತಾರ – ಅಧ್ಯಾಯ 1’ರಲ್ಲಿ ಕಲೆ ಪ್ರದರ್ಶಿಸಲಿದ್ದಾರೆ.

ಮೂಲಗಳ ಪ್ರಕಾರ, ಕಳೆದ ಒಂದು ವರ್ಷದಿಂದ ರಿಷಭ್, ಈ ಕಲೆಯನ್‍ನು ಕಲಿಯುತ್ತಿದ್ದಾರಂತೆ. ಕೇರಳದಿಂದ ಒಂದು ತಂಡ ಬಂದು ರಿಷಭ್‍ಗೆ ಕಲರಿಪಯಟ್ಟು ಕಲಿಸುತ್ತಿದ್ದಾರಂತೆ. ಈ ಚಿತ್ರದಲ್ಲಿ ಸಾಹಸ ದೃಶ್ಯಗಳಲ್ಲಿ ಕಲರಿಪಯಟ್ಟು ಬಳಸಿಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.

ರಿಷಭ್‍ ಶೆಟ್ಟಿ ಕಳೆದ ಕೆಲವು ತಿಂಗಳುಗಳಿಂದ ‘ಕಾಂತಾರ – ಅಧ್ಯಾಯ 1’ ಚಿತ್ರಕ್ಕಾಗಿ ಕುಂದಾಪುರ ಬಳಿ ಬೀಡು ಬಿಟ್ಟಿದ್ದಾರೆ. ಈ ಕುರಿತು ಕೆಲವು ತಿಂಗಳುಗಳ ಹಿಂದೆ ಮಾತನಾಡಿದ್ದ ಅವರು, ‘ಚಿತ್ರಕ್ಕಾಗಿ ಕುಂದಾಪುರ ಬಳಿ ದೊಡ್ಡ ಸ್ಟುಡಿಯೋ ಮಾಡಿ, ಅಲ್ಲಿ ಸೆಟ್‍ಗಳನ್ನು ಹಾಕಿ ಚಿತ್ರೀಕರಣ ಮಾಡುತ್ತಿದ್ದೇವೆ. ಹೊರಾಂಗಣ, ಒಳಾಂಗಣ ಎಲ್ಲವೂ ಅಲ್ಲೇ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಈ ಚಿತ್ರಕ್ಕಾಗಿ 10 ಕೆಜಿ ತೂಕ ಹೆಚ್ಚಿಸಿ, ಆ ನಂತರ 8 ಕೆಜಿ ತೂಕ ಇಳಿಸಿದ್ದೇನೆ. ಈ ಚಿತ್ರಕ್ಕಾಗಿ ಕಲರಿಪಯಟ್ಟು ಕಲಿಯುತ್ತಿದ್ದೇನೆ. 100ಕ್ಕೂ ಹೆಚ್ಚು ದಿನಗಳ ಚಿತ್ರೀಕರಣವಾಗಲಿದೆ. ಕನ್ನಡದಲ್ಲಿ ಚಿತ್ರೀಕರಣ ಮಾಡಿ, ಆ ನಂತರ ಬೇರೆಬೇರೆ ಭಾಷೆಗಳಿಗೆ ಡಬ್‍ ಮಾಡುತ್ತೇನೆ. ಈ ವರ್ಷ ಚಿತ್ರೀಕರಣ ಮುಗಿಯುತ್ತದೆ. ಬಿಡುಗಡೆ ಮುಂದಿನ ವರ್ಷ ಆಗುತ್ತದೆ’ ಎಂದು ಹೇಳಿದ್ದರು.
‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್‍ ಕಿರಗಂದೂರು ನಿರ್ಮಿಸುತ್ತಿದ್ದು, ಚಿತ್ರಕ್ಕೆ ಅರವಿಂದ್‍ ಕಶ್ಯಪ್‍ ಛಾಯಾಗ್ರಹಣ ಮತ್ತು ಅಜನೀಶ್ ‍ಲೋಕನಾಥ್‍ ಸಂಗೀತವಿದೆ. ಇನ್ನು, ರಿಷಭ್‍ ಪತ್ನಿ ಪ್ರಗತಿ ಶೆಟ್ಟಿ ಈ ಚಿತ್ರಕ್ಕೆ ವಸ್ತ್ರ ವಿನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

4 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

5 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago