ಮನರಂಜನೆ

ಮಾರ್ನಮಿಯಲ್ಲಿ ರಿತ್ವಿಕ್ – ಚೈತ್ರಾ ಆಚಾರ್ ಪ್ರೇಮಕಥೆ

‘ಕಾಂತಾರ’ ಚಿತ್ರದ ನಂತರ ಕನ್ನಡದಲ್ಲಿ ಕರಾವಳಿ ಸೀಮೆಯ ಆಚಾರ-ವಿಚಾರದ ಕುರಿತಾದ ಸಾಕಷ್ಟು ಚಿತ್ರಗಳು ಸೆಟ್ಟೇರುತ್ತಿವೆ. ಕಳೆದ ವಾರವಷ್ಟೇ ‘ಕಲ್ಜಿಗ’ ಎಂಬ ಚಿತ್ರವೊಂದು ಬಿಡುಗಡೆ ಆಗಿತ್ತು. ಈಗ ‘ಮಾರ್ನಮಿ’ ಎಂಬ ಚಿತ್ರ ಸದ್ಯದಲ್ಲೇ ಪ್ರಾರಂಭವಾಗಲಿದೆ.

‘ಪಿಂಗಾರ’ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಪಡೆದಿರುವ ಪ್ರೀತಂ ಆರ್. ಶೆಟ್ಟಿ ಗರಡಿಯಲ್ಲಿ ನಿರ್ದೇಶನದ ಪಟ್ಟುಗಳನ್ನು ಕಲಿತಿರುವ ರಿಶಿತ್ ಶೆಟ್ಟಿ ಚೊಚ್ಚಲ ಪ್ರಯತ್ನವೇ ಈ ‘ಮಾರ್ನಮಿ’. ಈ ಚಿತ್ರದ ಟೈಟಲ್ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ‘ಗಿಣಿರಾಮ’ ಖ್ಯಾತಿಯ ರಿತ್ವಿಕ್ ಮಾತಾಡ್‍ ಮತ್ತು ಚೈತ್ರಾ ಆಚಾರ್‍ ಈ ಚಿತ್ರದಲ್ಲಿ ನಾಯಕ-ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಸುಧಿ ಆರ್ಯನ್‍ ಕಥೆ ರಚಿಸಿದ್ದಾರೆ. ಶಿಲ್ಪಾ ನಿಶಾಂತ್‍ ಚಿತ್ರ ನಿರ್ಮಿಸುತ್ತಿದ್ದಾರೆ.

ನಿರ್ದೇಶಕ ರಿಶಿತ್ ಶೆಟ್ಟಿ ಮಾತನಾಡಿ, ‘ಮಂಗಳೂರಲ್ಲಿ ಸ್ಕ್ರಿಪ್ಟ್ ಕೆಲಸಕ್ಕೆ ಹೋಗಿದ್ದಾಗ ಸುಧಿ ಪರಿಚಯವಾಗಿದ್ದು, ಅವರು ಒಂದು ಕಥೆ ಮಾಡಿಕೊಂಡಿದ್ದರು. ಅವರು ಡೈರೆಕ್ಷನ್ ಮಾಡಲು ಇಷ್ಟ ಇಲ್ಲ ಅಂದಾಗ ನಾನು ಕಥೆ ಕೇಳಿದೆ. ಅವರು ಪ್ರೀತಿಯಿಂದ ಕೊಟ್ಟರು. ರಿತ್ವಿಕ್ ಅವರಿಗೆ ಹೇಳಿದೆ. ಅವರು ಇದಕ್ಕೆ ಇನ್ನೇನೋ ಬೇಕೋ ಅನಿಸುತ್ತಿದೆ ಎಂದರು. ಬಳಿಕ ಆರು ತಿಂಗಳ ಕಾಲ ಒಂದಿಷ್ಟು ಬದಲಾವಣೆ ಮಾಡಿಕೊಂಡು ಅವರ ಬಳಿ ಹೋದೆ. ಅವರು ಕಥೆ ಕೇಳಿ ಖುಷಿಪಟ್ಟರು. ಬಳಿಕ ನಿರ್ಮಾಪಕರ ಹುಡುಕಾಟದಲ್ಲಿ ನಿಶಾಂತ್ ಭೇಟಿಯಾದರು. ಆ ಬಳಿಕ ಟೈಟಲ್ ಟೀಸರ್ ಮಾಡಿಕೊಂಡು ಬಂದೆವು. ಇದೊಂದು ದಸರಾ ಸಂದರ್ಭದಲ್ಲಿ ನಡೆಯುವ ಪ್ರೇಮಕಥೆ. ಅಕ್ಟೋಬರ್ ಒಂದರಿಂದ ಮಂಗಳೂರು ಸುತ್ತಮುತ್ತ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದರು.

ರಿತ್ವಿಕ್‍ಗೆ ಇದು ಮೊದಲ ಚಿತ್ರ. ‘ಕಥೆ ಚೆನ್ನಾಗಿದೆ. ಕರಾವಳಿ ಭಾಗದಲ್ಲಿ ನಡೆಯುವ ಅದ್ಭುತ ಲವ್ ಸ್ಟೋರಿ. ದಸರಾ ದಿನವನ್ನು ಮಾರ್ನಮಿ ಎಂದು ಕರೆಯುತ್ತಾರೆ. ಚಿತ್ರದಲ್ಲಿ ಒಳ್ಳೆಯ ತಾರಾಗಣ ಮತ್ತು ತಾಂತ್ರಿಕ ವರ್ಗವಿದೆ’ ಎಂದರು. ಅದ್ಭುತ ತಾಂತ್ರಿಕ ವರ್ಗ ಇದೆ’ ಎಂದು ಮಾಹಿತಿ ಹಂಚಿಕೊಂಡರು.

ನಾಯಕಿ ಚೈತ್ರಾ ಆಚಾರ್ ಮಾತನಾಡಿ, ‘ಕಥೆ ಬಹಳ ಇಷ್ಟವಾಯ್ತು. ಆದರೆ, ಆ ಸಂದರ್ಭದಲ್ಲಿ ಸ್ವಲ್ಪ ಬ್ಯುಸಿ ಇದ್ದ ಕಾರಣ, ಒಪ್ಪಿರಲಿಲ್ಲ. ಮತ್ತೆ ಕಥೆ ನನ್ನ ಬಳಿಯೇ ಬಂತು. ಡೇಟ್ಸ್ ಅಡ್ಜಸ್ಟ್ ಮಾಡಿಕೊಳ್ಳೋಣಾ ಎಂದರು. ಅದ್ಭುತ ಕಥೆ. ರಿಷಿತ್ ಕಥೆ ಹೇಳಲು ಬಂದಾಗ ಎಲ್ಲಿಯೂ ಬೋರ್ ಆಗಲಿಲ್ಲ. ಇಷ್ಟು ಬೇಗ ಮುಗಿಯಿತಾ ಅನಿಸಿತು. ರಿತ್ವಿಕ್ ಅವರ ಜೊತೆ ಕೆಲಸ ಮಾಡಲು ಖುಷಿ ಇದೆ. ಕಥೆ ನಂಬಿದ್ದೇವೆ, ಚರಣ್ ರಾಜ್ ಅವರ ಸಂಗೀತ ಇದೆ. ನಾನು ಚಿತ್ರೀಕರಣಕ್ಕೆ ಹೊರಡಲು ತುದಿಗಾಲಲ್ಲಿ ಕಾಯುತ್ತಿದ್ದೇನೆ’ ಎಂದರು.

‘ಮಾರ್ನಮಿ’ ಚಿತ್ರದಲ್ಲಿ ರಿತ್ವಿಕ್ ಹಾಗೂ ಚೈತ್ರಾ ಜೆ ಆಚಾರ್ ಜೊತೆಗೆ ಪ್ರಕಾಶ್ ತುಮ್ಮಿನಾಡು, ಸೋನು ಗೌಡ, ಜ್ಯೋತೀಶ್ ಶೆಟ್ಟಿ, ರೋಚಿತ್, ಯಶ್ ಶೆಟ್ಟಿ, ಮೈಮ್ ರಾಮದಾಸ್, ಚೈತ್ರ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಹಾಗೂ ಶಿವಸೇನ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

38 mins ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

39 mins ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

55 mins ago

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

1 hour ago

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

3 hours ago