ಮನರಂಜನೆ

ಮಾರ್ನಮಿಯಲ್ಲಿ ರಿತ್ವಿಕ್ – ಚೈತ್ರಾ ಆಚಾರ್ ಪ್ರೇಮಕಥೆ

‘ಕಾಂತಾರ’ ಚಿತ್ರದ ನಂತರ ಕನ್ನಡದಲ್ಲಿ ಕರಾವಳಿ ಸೀಮೆಯ ಆಚಾರ-ವಿಚಾರದ ಕುರಿತಾದ ಸಾಕಷ್ಟು ಚಿತ್ರಗಳು ಸೆಟ್ಟೇರುತ್ತಿವೆ. ಕಳೆದ ವಾರವಷ್ಟೇ ‘ಕಲ್ಜಿಗ’ ಎಂಬ ಚಿತ್ರವೊಂದು ಬಿಡುಗಡೆ ಆಗಿತ್ತು. ಈಗ ‘ಮಾರ್ನಮಿ’ ಎಂಬ ಚಿತ್ರ ಸದ್ಯದಲ್ಲೇ ಪ್ರಾರಂಭವಾಗಲಿದೆ.

‘ಪಿಂಗಾರ’ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಪಡೆದಿರುವ ಪ್ರೀತಂ ಆರ್. ಶೆಟ್ಟಿ ಗರಡಿಯಲ್ಲಿ ನಿರ್ದೇಶನದ ಪಟ್ಟುಗಳನ್ನು ಕಲಿತಿರುವ ರಿಶಿತ್ ಶೆಟ್ಟಿ ಚೊಚ್ಚಲ ಪ್ರಯತ್ನವೇ ಈ ‘ಮಾರ್ನಮಿ’. ಈ ಚಿತ್ರದ ಟೈಟಲ್ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ‘ಗಿಣಿರಾಮ’ ಖ್ಯಾತಿಯ ರಿತ್ವಿಕ್ ಮಾತಾಡ್‍ ಮತ್ತು ಚೈತ್ರಾ ಆಚಾರ್‍ ಈ ಚಿತ್ರದಲ್ಲಿ ನಾಯಕ-ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಸುಧಿ ಆರ್ಯನ್‍ ಕಥೆ ರಚಿಸಿದ್ದಾರೆ. ಶಿಲ್ಪಾ ನಿಶಾಂತ್‍ ಚಿತ್ರ ನಿರ್ಮಿಸುತ್ತಿದ್ದಾರೆ.

ನಿರ್ದೇಶಕ ರಿಶಿತ್ ಶೆಟ್ಟಿ ಮಾತನಾಡಿ, ‘ಮಂಗಳೂರಲ್ಲಿ ಸ್ಕ್ರಿಪ್ಟ್ ಕೆಲಸಕ್ಕೆ ಹೋಗಿದ್ದಾಗ ಸುಧಿ ಪರಿಚಯವಾಗಿದ್ದು, ಅವರು ಒಂದು ಕಥೆ ಮಾಡಿಕೊಂಡಿದ್ದರು. ಅವರು ಡೈರೆಕ್ಷನ್ ಮಾಡಲು ಇಷ್ಟ ಇಲ್ಲ ಅಂದಾಗ ನಾನು ಕಥೆ ಕೇಳಿದೆ. ಅವರು ಪ್ರೀತಿಯಿಂದ ಕೊಟ್ಟರು. ರಿತ್ವಿಕ್ ಅವರಿಗೆ ಹೇಳಿದೆ. ಅವರು ಇದಕ್ಕೆ ಇನ್ನೇನೋ ಬೇಕೋ ಅನಿಸುತ್ತಿದೆ ಎಂದರು. ಬಳಿಕ ಆರು ತಿಂಗಳ ಕಾಲ ಒಂದಿಷ್ಟು ಬದಲಾವಣೆ ಮಾಡಿಕೊಂಡು ಅವರ ಬಳಿ ಹೋದೆ. ಅವರು ಕಥೆ ಕೇಳಿ ಖುಷಿಪಟ್ಟರು. ಬಳಿಕ ನಿರ್ಮಾಪಕರ ಹುಡುಕಾಟದಲ್ಲಿ ನಿಶಾಂತ್ ಭೇಟಿಯಾದರು. ಆ ಬಳಿಕ ಟೈಟಲ್ ಟೀಸರ್ ಮಾಡಿಕೊಂಡು ಬಂದೆವು. ಇದೊಂದು ದಸರಾ ಸಂದರ್ಭದಲ್ಲಿ ನಡೆಯುವ ಪ್ರೇಮಕಥೆ. ಅಕ್ಟೋಬರ್ ಒಂದರಿಂದ ಮಂಗಳೂರು ಸುತ್ತಮುತ್ತ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದರು.

ರಿತ್ವಿಕ್‍ಗೆ ಇದು ಮೊದಲ ಚಿತ್ರ. ‘ಕಥೆ ಚೆನ್ನಾಗಿದೆ. ಕರಾವಳಿ ಭಾಗದಲ್ಲಿ ನಡೆಯುವ ಅದ್ಭುತ ಲವ್ ಸ್ಟೋರಿ. ದಸರಾ ದಿನವನ್ನು ಮಾರ್ನಮಿ ಎಂದು ಕರೆಯುತ್ತಾರೆ. ಚಿತ್ರದಲ್ಲಿ ಒಳ್ಳೆಯ ತಾರಾಗಣ ಮತ್ತು ತಾಂತ್ರಿಕ ವರ್ಗವಿದೆ’ ಎಂದರು. ಅದ್ಭುತ ತಾಂತ್ರಿಕ ವರ್ಗ ಇದೆ’ ಎಂದು ಮಾಹಿತಿ ಹಂಚಿಕೊಂಡರು.

ನಾಯಕಿ ಚೈತ್ರಾ ಆಚಾರ್ ಮಾತನಾಡಿ, ‘ಕಥೆ ಬಹಳ ಇಷ್ಟವಾಯ್ತು. ಆದರೆ, ಆ ಸಂದರ್ಭದಲ್ಲಿ ಸ್ವಲ್ಪ ಬ್ಯುಸಿ ಇದ್ದ ಕಾರಣ, ಒಪ್ಪಿರಲಿಲ್ಲ. ಮತ್ತೆ ಕಥೆ ನನ್ನ ಬಳಿಯೇ ಬಂತು. ಡೇಟ್ಸ್ ಅಡ್ಜಸ್ಟ್ ಮಾಡಿಕೊಳ್ಳೋಣಾ ಎಂದರು. ಅದ್ಭುತ ಕಥೆ. ರಿಷಿತ್ ಕಥೆ ಹೇಳಲು ಬಂದಾಗ ಎಲ್ಲಿಯೂ ಬೋರ್ ಆಗಲಿಲ್ಲ. ಇಷ್ಟು ಬೇಗ ಮುಗಿಯಿತಾ ಅನಿಸಿತು. ರಿತ್ವಿಕ್ ಅವರ ಜೊತೆ ಕೆಲಸ ಮಾಡಲು ಖುಷಿ ಇದೆ. ಕಥೆ ನಂಬಿದ್ದೇವೆ, ಚರಣ್ ರಾಜ್ ಅವರ ಸಂಗೀತ ಇದೆ. ನಾನು ಚಿತ್ರೀಕರಣಕ್ಕೆ ಹೊರಡಲು ತುದಿಗಾಲಲ್ಲಿ ಕಾಯುತ್ತಿದ್ದೇನೆ’ ಎಂದರು.

‘ಮಾರ್ನಮಿ’ ಚಿತ್ರದಲ್ಲಿ ರಿತ್ವಿಕ್ ಹಾಗೂ ಚೈತ್ರಾ ಜೆ ಆಚಾರ್ ಜೊತೆಗೆ ಪ್ರಕಾಶ್ ತುಮ್ಮಿನಾಡು, ಸೋನು ಗೌಡ, ಜ್ಯೋತೀಶ್ ಶೆಟ್ಟಿ, ರೋಚಿತ್, ಯಶ್ ಶೆಟ್ಟಿ, ಮೈಮ್ ರಾಮದಾಸ್, ಚೈತ್ರ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಹಾಗೂ ಶಿವಸೇನ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago