ಮನರಂಜನೆ

ರಾಕಿಂಗ್‌ ಯಶ್‌ ತಾಯಿ ವಿರುದ್ಧ ಸಂಭಾವನೆ ನೀಡದ ಆರೋಪ

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ವಿರುದ್ಧ ಸಂಭಾವನೆ ನೀಡದ ಆರೋಪ ಕೇಳಿಬಂದಿದೆ.

ಪುಷ್ಪ ಅವರ ಪಿಎ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಚೊಚ್ಚಲ ಸಿನಿಮಾ ಕೊತ್ತಲವಾಡಿ ಆಗಸ್ಟ್ 1 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಆದರೆ ಸಿನಿಮಾ ರಿಲೀಸ್ ಆಗಿ ತಿಂಗಳುಗಳು ಕಳೆದರೂ ನಮಗೆ ಬರಬೇಕಾಗಿದ್ದ ಸಂಭಾವನೆ ಬಂದಿಲ್ಲ ಎಂದು ನಟ ಪೃಥ್ವಿ ಅಂಬಾರ್ ಜೊತೆಗೆ ಅಭಿನಯಿಸಿದ್ದ ಮಹೇಶ್ ಗುರು ಆರೋಪ ಮಾಡಿದ್ದಾರೆ.

ಈ ಸಂಬಂಧ ಮಹೇಶ್ ಗುರು ಮಾತನಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವೈರಲ್ ಆದ ನಂತರ ಮಾಧ್ಯಮಗಳು ಸುದ್ದಿ ಮಾಡಿದ್ದವು. ನಂತರ ಅವರು ತಮ್ಮ ಫೇಸ್ ಬುಕ್ ಖಾತೆಯಿಂದ ಅದನ್ನು ತೆಗೆದುಹಾಕಿದ್ದಾರೆ.

ಮಹೇಶ್ ಗುರು ಆರೋಪವೇನು?
ಪುಷ್ಪ ಅವರು ನಿರ್ಮಿಸಿರುವ ಕೊತ್ತಲವಾಡಿ ಸಿನಿಮಾದಲ್ಲಿ ನಟ ಪೃಥ್ವಿ ಅಂಬಾರ್ ಅವರ ಸಹ ನಟನಾಗಿ ಮೂರು ತಿಂಗಳಿಗೂ ಹೆಚ್ಚುಕಾಲ ಅವರೊಂದಿಗೆ ಸಿನಿಮಾದಲ್ಲಿ ಕೆಲಸ ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ನಿರ್ದೇಶಕರ ಕಡೆಯಿಂದ ಈ ಸಿನಿಮಾಗೆ ಸೆಲೆಕ್ಟ್ ಆಗಿದ್ದೆ. ತಿಂಗಳಿಗೆ ಇಷ್ಟು, ಡೈಲಿ ಕನ್ವಿನಿಯೆನ್ಸ್ ಇಷ್ಟು ಇರುತ್ತದೆ ಅಂತ ನಮಗೆ ಒಂದು ಪ್ಯಾಕೇಜ್ ನ್ನು ನಿರ್ದೇಶಕರು ಮಾತನಾಡಿದ್ದರು. ನಾವು ಕೂಡಾ ಖುಷಿ ಖುಷಿಯಾಗಿ ಒಪ್ಪಿಕೊಂಡಿದ್ದೆವು.

ಸಿನಿಮಾ ಶುರು ಆಗೋದಕ್ಕೆ ಮುನ್ನ ಒಂದು ಅಡ್ವಾನ್ಸ್ ಮಾಡಿಸುತ್ತೇನೆ ಅಂತ ಹೇಳಿದ್ದರು. ಸಿನಿಮಾ ಮುಹೂರ್ತ ಆಯ್ತು. ಮುಹೂರ್ತದಲ್ಲಿ ಕೇಳಿದ್ದಕ್ಕೆ ,ಪ್ರೊಡಕ್ಷನ್ ನಿಂದ ಇನ್ನೂ ಅಮೌಂಟ್ ಬಂದಿಲ್ಲ. ಬಂದ ತಕ್ಷಣ ಮಾಡಿ ಕೊಡುತ್ತೇನೆ ಅಂತ ಹೇಳಿದ್ದರು. ಸಿನಿಮಾ ಶುರು ಆಯ್ತು. ಪೂರ್ತಿ ಸಿನಿಮಾ ಮುಗಿದಿತ್ತು. ಹಾಡು ಮುಗೀತು ಫೈಟ್ ಕೂಡಾ ಮುಗೀತು. ಎಷ್ಟು ಬಾರಿ ಕೇಳಿದ್ದರು ಪ್ರೊಡಕ್ಷನ್ ನಿಂದ ಇನ್ನೂ ಅಮೌಂಟ್ ಬಂದಿಲ್ಲ ಅಂತ ಹೇಳುತ್ತಲೇ ಬಂದರು. ಕೊನೆಗೆ ಡಬ್ಬಿಂಗ್ ಮುಗಿಸಿದ ನಂತರವೂ ಪೇಮೆಂಟ್ ಕ್ಲಿಯರ್ ಮಾಡಿಲ್ಲ. ನಮ್ಮ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ. ಕಾಲ್ ಮಾಡಿದ್ರೆ ಕಟ್ ಮಾಡುತ್ತಿದ್ದರು.

ಈ ನಡುವೆ ಟೀಸರ್, ಟ್ರೈಲರ್, ಪ್ರೇಸ್ ಮೀಟ್ ಗಳಿಗೆ ನಮ್ಮನ್ನು ಕರೆಯುತ್ತಿರಲಿಲ್ಲ. ಸಿನಿಮಾ ಬಿಡುಗಡೆ ಆಗಿ ಒಟಿಟಿಗೆ ಬಂದಿದೆ. ಈಗಲೂ ಕೂಡಾ ನಮಗೆ ಸಂಭಾವನೆ ನೀಡಿಲ್ಲ. ಅವರ ಹತ್ತಿರದಿಂದ ಭೇಟಿ ಆಗುವ ಅವಕಾಶ ಸಿಗಲಿಲ್ಲ. ಪುಷ್ಪ ಮೇಡಂ ಅವರಿಗೆ ತಲುಪಲಿ ಅನ್ನುವ ಉದ್ದೇಶದಿಂದ ಈ ವಿಡಿಯೋ ಮಾಡಿರುವುದಾಗಿ ಮಹೇಶ್ ಗುರು ಹೇಳಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

5 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

5 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

7 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

7 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

8 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

8 hours ago