ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ವಿರುದ್ಧ ಸಂಭಾವನೆ ನೀಡದ ಆರೋಪ ಕೇಳಿಬಂದಿದೆ.
ಪುಷ್ಪ ಅವರ ಪಿಎ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಚೊಚ್ಚಲ ಸಿನಿಮಾ ಕೊತ್ತಲವಾಡಿ ಆಗಸ್ಟ್ 1 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಆದರೆ ಸಿನಿಮಾ ರಿಲೀಸ್ ಆಗಿ ತಿಂಗಳುಗಳು ಕಳೆದರೂ ನಮಗೆ ಬರಬೇಕಾಗಿದ್ದ ಸಂಭಾವನೆ ಬಂದಿಲ್ಲ ಎಂದು ನಟ ಪೃಥ್ವಿ ಅಂಬಾರ್ ಜೊತೆಗೆ ಅಭಿನಯಿಸಿದ್ದ ಮಹೇಶ್ ಗುರು ಆರೋಪ ಮಾಡಿದ್ದಾರೆ.
ಈ ಸಂಬಂಧ ಮಹೇಶ್ ಗುರು ಮಾತನಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವೈರಲ್ ಆದ ನಂತರ ಮಾಧ್ಯಮಗಳು ಸುದ್ದಿ ಮಾಡಿದ್ದವು. ನಂತರ ಅವರು ತಮ್ಮ ಫೇಸ್ ಬುಕ್ ಖಾತೆಯಿಂದ ಅದನ್ನು ತೆಗೆದುಹಾಕಿದ್ದಾರೆ.
ಮಹೇಶ್ ಗುರು ಆರೋಪವೇನು?
ಪುಷ್ಪ ಅವರು ನಿರ್ಮಿಸಿರುವ ಕೊತ್ತಲವಾಡಿ ಸಿನಿಮಾದಲ್ಲಿ ನಟ ಪೃಥ್ವಿ ಅಂಬಾರ್ ಅವರ ಸಹ ನಟನಾಗಿ ಮೂರು ತಿಂಗಳಿಗೂ ಹೆಚ್ಚುಕಾಲ ಅವರೊಂದಿಗೆ ಸಿನಿಮಾದಲ್ಲಿ ಕೆಲಸ ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ನಿರ್ದೇಶಕರ ಕಡೆಯಿಂದ ಈ ಸಿನಿಮಾಗೆ ಸೆಲೆಕ್ಟ್ ಆಗಿದ್ದೆ. ತಿಂಗಳಿಗೆ ಇಷ್ಟು, ಡೈಲಿ ಕನ್ವಿನಿಯೆನ್ಸ್ ಇಷ್ಟು ಇರುತ್ತದೆ ಅಂತ ನಮಗೆ ಒಂದು ಪ್ಯಾಕೇಜ್ ನ್ನು ನಿರ್ದೇಶಕರು ಮಾತನಾಡಿದ್ದರು. ನಾವು ಕೂಡಾ ಖುಷಿ ಖುಷಿಯಾಗಿ ಒಪ್ಪಿಕೊಂಡಿದ್ದೆವು.
ಸಿನಿಮಾ ಶುರು ಆಗೋದಕ್ಕೆ ಮುನ್ನ ಒಂದು ಅಡ್ವಾನ್ಸ್ ಮಾಡಿಸುತ್ತೇನೆ ಅಂತ ಹೇಳಿದ್ದರು. ಸಿನಿಮಾ ಮುಹೂರ್ತ ಆಯ್ತು. ಮುಹೂರ್ತದಲ್ಲಿ ಕೇಳಿದ್ದಕ್ಕೆ ,ಪ್ರೊಡಕ್ಷನ್ ನಿಂದ ಇನ್ನೂ ಅಮೌಂಟ್ ಬಂದಿಲ್ಲ. ಬಂದ ತಕ್ಷಣ ಮಾಡಿ ಕೊಡುತ್ತೇನೆ ಅಂತ ಹೇಳಿದ್ದರು. ಸಿನಿಮಾ ಶುರು ಆಯ್ತು. ಪೂರ್ತಿ ಸಿನಿಮಾ ಮುಗಿದಿತ್ತು. ಹಾಡು ಮುಗೀತು ಫೈಟ್ ಕೂಡಾ ಮುಗೀತು. ಎಷ್ಟು ಬಾರಿ ಕೇಳಿದ್ದರು ಪ್ರೊಡಕ್ಷನ್ ನಿಂದ ಇನ್ನೂ ಅಮೌಂಟ್ ಬಂದಿಲ್ಲ ಅಂತ ಹೇಳುತ್ತಲೇ ಬಂದರು. ಕೊನೆಗೆ ಡಬ್ಬಿಂಗ್ ಮುಗಿಸಿದ ನಂತರವೂ ಪೇಮೆಂಟ್ ಕ್ಲಿಯರ್ ಮಾಡಿಲ್ಲ. ನಮ್ಮ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ. ಕಾಲ್ ಮಾಡಿದ್ರೆ ಕಟ್ ಮಾಡುತ್ತಿದ್ದರು.
ಈ ನಡುವೆ ಟೀಸರ್, ಟ್ರೈಲರ್, ಪ್ರೇಸ್ ಮೀಟ್ ಗಳಿಗೆ ನಮ್ಮನ್ನು ಕರೆಯುತ್ತಿರಲಿಲ್ಲ. ಸಿನಿಮಾ ಬಿಡುಗಡೆ ಆಗಿ ಒಟಿಟಿಗೆ ಬಂದಿದೆ. ಈಗಲೂ ಕೂಡಾ ನಮಗೆ ಸಂಭಾವನೆ ನೀಡಿಲ್ಲ. ಅವರ ಹತ್ತಿರದಿಂದ ಭೇಟಿ ಆಗುವ ಅವಕಾಶ ಸಿಗಲಿಲ್ಲ. ಪುಷ್ಪ ಮೇಡಂ ಅವರಿಗೆ ತಲುಪಲಿ ಅನ್ನುವ ಉದ್ದೇಶದಿಂದ ಈ ವಿಡಿಯೋ ಮಾಡಿರುವುದಾಗಿ ಮಹೇಶ್ ಗುರು ಹೇಳಿಕೊಂಡಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…