ಮನರಂಜನೆ

ರಾಕಿಂಗ್‌ ಯಶ್‌ ತಾಯಿ ವಿರುದ್ಧ ಸಂಭಾವನೆ ನೀಡದ ಆರೋಪ

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ವಿರುದ್ಧ ಸಂಭಾವನೆ ನೀಡದ ಆರೋಪ ಕೇಳಿಬಂದಿದೆ.

ಪುಷ್ಪ ಅವರ ಪಿಎ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಚೊಚ್ಚಲ ಸಿನಿಮಾ ಕೊತ್ತಲವಾಡಿ ಆಗಸ್ಟ್ 1 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಆದರೆ ಸಿನಿಮಾ ರಿಲೀಸ್ ಆಗಿ ತಿಂಗಳುಗಳು ಕಳೆದರೂ ನಮಗೆ ಬರಬೇಕಾಗಿದ್ದ ಸಂಭಾವನೆ ಬಂದಿಲ್ಲ ಎಂದು ನಟ ಪೃಥ್ವಿ ಅಂಬಾರ್ ಜೊತೆಗೆ ಅಭಿನಯಿಸಿದ್ದ ಮಹೇಶ್ ಗುರು ಆರೋಪ ಮಾಡಿದ್ದಾರೆ.

ಈ ಸಂಬಂಧ ಮಹೇಶ್ ಗುರು ಮಾತನಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವೈರಲ್ ಆದ ನಂತರ ಮಾಧ್ಯಮಗಳು ಸುದ್ದಿ ಮಾಡಿದ್ದವು. ನಂತರ ಅವರು ತಮ್ಮ ಫೇಸ್ ಬುಕ್ ಖಾತೆಯಿಂದ ಅದನ್ನು ತೆಗೆದುಹಾಕಿದ್ದಾರೆ.

ಮಹೇಶ್ ಗುರು ಆರೋಪವೇನು?
ಪುಷ್ಪ ಅವರು ನಿರ್ಮಿಸಿರುವ ಕೊತ್ತಲವಾಡಿ ಸಿನಿಮಾದಲ್ಲಿ ನಟ ಪೃಥ್ವಿ ಅಂಬಾರ್ ಅವರ ಸಹ ನಟನಾಗಿ ಮೂರು ತಿಂಗಳಿಗೂ ಹೆಚ್ಚುಕಾಲ ಅವರೊಂದಿಗೆ ಸಿನಿಮಾದಲ್ಲಿ ಕೆಲಸ ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ನಿರ್ದೇಶಕರ ಕಡೆಯಿಂದ ಈ ಸಿನಿಮಾಗೆ ಸೆಲೆಕ್ಟ್ ಆಗಿದ್ದೆ. ತಿಂಗಳಿಗೆ ಇಷ್ಟು, ಡೈಲಿ ಕನ್ವಿನಿಯೆನ್ಸ್ ಇಷ್ಟು ಇರುತ್ತದೆ ಅಂತ ನಮಗೆ ಒಂದು ಪ್ಯಾಕೇಜ್ ನ್ನು ನಿರ್ದೇಶಕರು ಮಾತನಾಡಿದ್ದರು. ನಾವು ಕೂಡಾ ಖುಷಿ ಖುಷಿಯಾಗಿ ಒಪ್ಪಿಕೊಂಡಿದ್ದೆವು.

ಸಿನಿಮಾ ಶುರು ಆಗೋದಕ್ಕೆ ಮುನ್ನ ಒಂದು ಅಡ್ವಾನ್ಸ್ ಮಾಡಿಸುತ್ತೇನೆ ಅಂತ ಹೇಳಿದ್ದರು. ಸಿನಿಮಾ ಮುಹೂರ್ತ ಆಯ್ತು. ಮುಹೂರ್ತದಲ್ಲಿ ಕೇಳಿದ್ದಕ್ಕೆ ,ಪ್ರೊಡಕ್ಷನ್ ನಿಂದ ಇನ್ನೂ ಅಮೌಂಟ್ ಬಂದಿಲ್ಲ. ಬಂದ ತಕ್ಷಣ ಮಾಡಿ ಕೊಡುತ್ತೇನೆ ಅಂತ ಹೇಳಿದ್ದರು. ಸಿನಿಮಾ ಶುರು ಆಯ್ತು. ಪೂರ್ತಿ ಸಿನಿಮಾ ಮುಗಿದಿತ್ತು. ಹಾಡು ಮುಗೀತು ಫೈಟ್ ಕೂಡಾ ಮುಗೀತು. ಎಷ್ಟು ಬಾರಿ ಕೇಳಿದ್ದರು ಪ್ರೊಡಕ್ಷನ್ ನಿಂದ ಇನ್ನೂ ಅಮೌಂಟ್ ಬಂದಿಲ್ಲ ಅಂತ ಹೇಳುತ್ತಲೇ ಬಂದರು. ಕೊನೆಗೆ ಡಬ್ಬಿಂಗ್ ಮುಗಿಸಿದ ನಂತರವೂ ಪೇಮೆಂಟ್ ಕ್ಲಿಯರ್ ಮಾಡಿಲ್ಲ. ನಮ್ಮ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ. ಕಾಲ್ ಮಾಡಿದ್ರೆ ಕಟ್ ಮಾಡುತ್ತಿದ್ದರು.

ಈ ನಡುವೆ ಟೀಸರ್, ಟ್ರೈಲರ್, ಪ್ರೇಸ್ ಮೀಟ್ ಗಳಿಗೆ ನಮ್ಮನ್ನು ಕರೆಯುತ್ತಿರಲಿಲ್ಲ. ಸಿನಿಮಾ ಬಿಡುಗಡೆ ಆಗಿ ಒಟಿಟಿಗೆ ಬಂದಿದೆ. ಈಗಲೂ ಕೂಡಾ ನಮಗೆ ಸಂಭಾವನೆ ನೀಡಿಲ್ಲ. ಅವರ ಹತ್ತಿರದಿಂದ ಭೇಟಿ ಆಗುವ ಅವಕಾಶ ಸಿಗಲಿಲ್ಲ. ಪುಷ್ಪ ಮೇಡಂ ಅವರಿಗೆ ತಲುಪಲಿ ಅನ್ನುವ ಉದ್ದೇಶದಿಂದ ಈ ವಿಡಿಯೋ ಮಾಡಿರುವುದಾಗಿ ಮಹೇಶ್ ಗುರು ಹೇಳಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

6 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

9 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

9 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

9 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

10 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

11 hours ago