ಮನರಂಜನೆ

‘ರಾನಿ’ ನಿರ್ಮಾಪಕರ ಕ್ಷಮೆ ಕೇಳಿದ ನಿರ್ದೇಶಕ ಗುರುತೇಜ್‍ ಶೆಟ್ಟಿ!

ಕಿರಣ್ ರಾಜ್ ಅಭಿನಯದ ಮತ್ತು ಗುರುತೇಜ್ ಶೆಟ್ಟಿ ನಿರ್ದೇಶನದ ‘ರಾನಿ’ ಚಿತ್ರವು ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ ನಿರ್ದೇಶಕ ಗುರುತೇಜ್‍ ಶೆಟ್ಟಿ, ನಿರ್ಮಾಪಕರಾದ ಚಂದ್ರಕಾಂತ ಪೂಜಾರಿ ಮತ್ತು ಉಮೇಶ್ ಹೆಗ್ಡೆ ಅವರಲ್ಲಿ ನಿರ್ದೇಶಕ ಗುರುತೇಜ್‍ ಶೆಟ್ಟಿ ಕ್ಷಮೆ ಕೇಳಿದ್ದಾರೆ.

ಇತ್ತೀಚೆಗೆ ‘ರಾನಿ’ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಸಮಾರಂಭ ನಡೆಯಿತು. ಅದಕ್ಕೂ ಮುನ್ನ ಕಳೆದ ವಾರ ಚಿತ್ರದ ಟ್ರೇಲರ್‍ ಬಿಡುಗಡೆ ಆಗಿದೆ. ಈ ಎರಡೂ ಸಮಾರಂಭಗಳನ್ನು ದೊಡ್ಡದಾಗಿ ಮಾಡಬೇಕು, ದೊಡ್ಡ ನಟ-ತಂತ್ರಜ್ಞರನ್ನು ಕರೆಸಬೇಕು ಎಂದು ಚಿತ್ರತಂಡ ಪ್ಲಾನ್‍ ಯೋಚಿಸಿತ್ತಂತೆ. ಆದರೆ, ದೊಡ್ಡವರ್ಯಾರೂ ಬರದೆ, ಯೂಟ್ಯೂಬ್‍ನಲ್ಲಿ ಟ್ರೇಲರ್‍ ಬಿಡುಗಡೆ ಮಾಡಲಾಗಿದೆ. ಇನ್ನು, ಹಾಡು ಬಿಡುಗಡೆ ಸಮಾರಂಭದಲ್ಲೂ ಅದು ಮುಂದುವರೆದಿದೆ. ಯಾರೂ ಸಿಗದೆ ಕೊನೆಗೆ ಚಿತ್ರಕ್ಕೆ ಕಥೆ ಬರೆದಿರುವ ಜೆ.ಕೆ. ಭಾರವಿ ಅವರಿಂದ ಹಾಡು ಬಿಡುಗಡೆ ಮಾಡಿಸಲಾಗಿದೆ.

ಈ ಕುರಿತು ಮಾತನಾಡಿದ ಗುರುತೇಜ್‍ ಶೆಟ್ಟಿ, ‘ಟ್ರೇಲರ್‍ ಬಿಡುಗಡೆಯನ್ನು ದೊಡ್ಡದಾಗಿ ಮಾಡಬೇಕು, ದೊಡ್ಡವರನ್ನು ಕರೆಸಿ ಬಿಡುಗಡೆ ಮಾಡಬೇಕು ಎಂಬ ಆಸೆ ಇತ್ತು. ಅದು ಸಾಧ್ಯವಾಗಲೇ ಇಲ್ಲ. ಈ ಕುರಿತು ಹಲವು ದೊಡ್ಡ ನಟರನ್ನು ಕೇಳಿದ್ದೇವೆ. ಒಬ್ಬೊಬ್ಬರು ಒಂದೊಂದು ಕಾರಣ ಹೇಳಿದರು. ಬಹುಶಃ ಅವರೆಲ್ಲರೂ ಬ್ಯುಸಿ ಇರಬಹುದು. ಮಾಧ್ಯಮದವರು ಬಿಟ್ಟರೆ ನಮ್ಮ ಜೊತೆಗೆ ಯಾರೂ ಇಲ್ಲ. ಹಾಗಂತ ಯಾರಿಗೂ ಬಕೆಟ್‍ ಹಿಡಿಯುವುದಕ್ಕೆ ನನಗೆ ಸಾಧ್ಯವಿಲ್ಲ. ನಾನು ಸ್ವಾಭಿಮಾನಿ. ನಿರ್ಮಾಪಕರು ಹೊಸಬರು. ಯಾರೂ ಬರದಿದ್ದಾಗ ಅವರಿಗೆ ಸಹಜವಾಗಿಯೇ ಆತಂಕ ಕಾಡುತ್ತದೆ. ಚಿತ್ರದ ಸಮಾರಂಭಕ್ಕೆ ಸಾಧ್ಯವಾದರೆ ದೊಡ್ಡವರನ್ನು ಕರೆಸುತ್ತೇನೆ ಎಂದು ಭರವಸೆ ಕೊಟ್ಟಿದ್ದೆ. ಆ ಭರವಸೆ ಈಡೇರಿಸದೇ ಇದ್ದಿದ್ದಕ್ಕೆ ಕ್ಷಮೆ ಕೇಳುತ್ತೇನೆ’ ಎಂದು ಕ್ಷಮೆ ಕೇಳಿದರು.

ಇನ್ನು, ‘ರಾನಿ’ ಚಿತ್ರದಲ್ಲಿ ನಟಿಸಿರುವ ರವಿಶಂಕರ್, ‘ಮಠ’ ಗುರುಪ್ರಸಾದ್‍ ಮುಂತಾದವರು ಸಹ ಚಿತ್ರದ ಯಾವುದೇ ಸಮಾರಂಭಕ್ಕೂ ಬಂದಿಲ್ಲ. ಈ ಕುರಿತು ಕೇಳಲಾಗಿ, ‘ಅವರಿಗೆ ಫೋನ್‍ ಮಾಡಿದ್ದೆವು. ಆದರೆ, ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲ. ಬಹುಶಃ ಸ್ಟಾರ್ ‍ನಿರ್ಮಾಪಕರು ಅಥವಾ ನಟರಿದ್ದರೆ ಬಂದಿರುತ್ತಿದ್ದರೇನೋ? ಯಾರೂ ಬರದಿದ್ದರೇನು? ಜನ ಬರುತ್ತಾರೆ, ನಮ್ಮ ಕೈ ಹಿಡಿಯುತ್ತಾರೆ ಎಂಬ ನಂಬಿಕೆ ಇದೆ. ನಾವೇನು ಕಾಟಾಚಾರಕ್ಕೆ ಸಿನಿಮಾ ಮಾಡಿಲ್ಲ. ನಿಜಕ್ಕೂ ಚೆನ್ನಾಗಿ ಬಂದಿದೆ’ ಎಂದರು.

‘ರಾನಿ’ ಚಿತ್ರವು ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿದೆ. ಈ ಚಿತ್ರದಲ್ಲಿ ಕಿರಣ್ ರಾಜ್ ಜೊತೆಗೆ ಸಮೀಕ್ಷಾ, ಅಪೂರ್ವ, ರಾಧ್ಯ, ರವಿಶಂಕರ್, ಮೈಕೋ ನಾಗರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಘವೇಂದ್ರ ಬಿ ಕೋಲಾರ ಛಾಯಾಗ್ರಹಣ, ಸಚಿನ್ ಬಸ್ರೂರು ಹಿನ್ನೆಲೆ ಸಂಗೀತ ಮತ್ತು ಮಣಿಕಾಂತ್‍ ಕದ್ರಿ ಸಂಗೀತವಿದೆ.

ಭೂಮಿಕಾ

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

7 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

9 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

10 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

10 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

11 hours ago