ಮನರಂಜನೆ

‘ರಾನಿ’ ನಿರ್ಮಾಪಕರ ಕ್ಷಮೆ ಕೇಳಿದ ನಿರ್ದೇಶಕ ಗುರುತೇಜ್‍ ಶೆಟ್ಟಿ!

ಕಿರಣ್ ರಾಜ್ ಅಭಿನಯದ ಮತ್ತು ಗುರುತೇಜ್ ಶೆಟ್ಟಿ ನಿರ್ದೇಶನದ ‘ರಾನಿ’ ಚಿತ್ರವು ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ ನಿರ್ದೇಶಕ ಗುರುತೇಜ್‍ ಶೆಟ್ಟಿ, ನಿರ್ಮಾಪಕರಾದ ಚಂದ್ರಕಾಂತ ಪೂಜಾರಿ ಮತ್ತು ಉಮೇಶ್ ಹೆಗ್ಡೆ ಅವರಲ್ಲಿ ನಿರ್ದೇಶಕ ಗುರುತೇಜ್‍ ಶೆಟ್ಟಿ ಕ್ಷಮೆ ಕೇಳಿದ್ದಾರೆ.

ಇತ್ತೀಚೆಗೆ ‘ರಾನಿ’ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಸಮಾರಂಭ ನಡೆಯಿತು. ಅದಕ್ಕೂ ಮುನ್ನ ಕಳೆದ ವಾರ ಚಿತ್ರದ ಟ್ರೇಲರ್‍ ಬಿಡುಗಡೆ ಆಗಿದೆ. ಈ ಎರಡೂ ಸಮಾರಂಭಗಳನ್ನು ದೊಡ್ಡದಾಗಿ ಮಾಡಬೇಕು, ದೊಡ್ಡ ನಟ-ತಂತ್ರಜ್ಞರನ್ನು ಕರೆಸಬೇಕು ಎಂದು ಚಿತ್ರತಂಡ ಪ್ಲಾನ್‍ ಯೋಚಿಸಿತ್ತಂತೆ. ಆದರೆ, ದೊಡ್ಡವರ್ಯಾರೂ ಬರದೆ, ಯೂಟ್ಯೂಬ್‍ನಲ್ಲಿ ಟ್ರೇಲರ್‍ ಬಿಡುಗಡೆ ಮಾಡಲಾಗಿದೆ. ಇನ್ನು, ಹಾಡು ಬಿಡುಗಡೆ ಸಮಾರಂಭದಲ್ಲೂ ಅದು ಮುಂದುವರೆದಿದೆ. ಯಾರೂ ಸಿಗದೆ ಕೊನೆಗೆ ಚಿತ್ರಕ್ಕೆ ಕಥೆ ಬರೆದಿರುವ ಜೆ.ಕೆ. ಭಾರವಿ ಅವರಿಂದ ಹಾಡು ಬಿಡುಗಡೆ ಮಾಡಿಸಲಾಗಿದೆ.

ಈ ಕುರಿತು ಮಾತನಾಡಿದ ಗುರುತೇಜ್‍ ಶೆಟ್ಟಿ, ‘ಟ್ರೇಲರ್‍ ಬಿಡುಗಡೆಯನ್ನು ದೊಡ್ಡದಾಗಿ ಮಾಡಬೇಕು, ದೊಡ್ಡವರನ್ನು ಕರೆಸಿ ಬಿಡುಗಡೆ ಮಾಡಬೇಕು ಎಂಬ ಆಸೆ ಇತ್ತು. ಅದು ಸಾಧ್ಯವಾಗಲೇ ಇಲ್ಲ. ಈ ಕುರಿತು ಹಲವು ದೊಡ್ಡ ನಟರನ್ನು ಕೇಳಿದ್ದೇವೆ. ಒಬ್ಬೊಬ್ಬರು ಒಂದೊಂದು ಕಾರಣ ಹೇಳಿದರು. ಬಹುಶಃ ಅವರೆಲ್ಲರೂ ಬ್ಯುಸಿ ಇರಬಹುದು. ಮಾಧ್ಯಮದವರು ಬಿಟ್ಟರೆ ನಮ್ಮ ಜೊತೆಗೆ ಯಾರೂ ಇಲ್ಲ. ಹಾಗಂತ ಯಾರಿಗೂ ಬಕೆಟ್‍ ಹಿಡಿಯುವುದಕ್ಕೆ ನನಗೆ ಸಾಧ್ಯವಿಲ್ಲ. ನಾನು ಸ್ವಾಭಿಮಾನಿ. ನಿರ್ಮಾಪಕರು ಹೊಸಬರು. ಯಾರೂ ಬರದಿದ್ದಾಗ ಅವರಿಗೆ ಸಹಜವಾಗಿಯೇ ಆತಂಕ ಕಾಡುತ್ತದೆ. ಚಿತ್ರದ ಸಮಾರಂಭಕ್ಕೆ ಸಾಧ್ಯವಾದರೆ ದೊಡ್ಡವರನ್ನು ಕರೆಸುತ್ತೇನೆ ಎಂದು ಭರವಸೆ ಕೊಟ್ಟಿದ್ದೆ. ಆ ಭರವಸೆ ಈಡೇರಿಸದೇ ಇದ್ದಿದ್ದಕ್ಕೆ ಕ್ಷಮೆ ಕೇಳುತ್ತೇನೆ’ ಎಂದು ಕ್ಷಮೆ ಕೇಳಿದರು.

ಇನ್ನು, ‘ರಾನಿ’ ಚಿತ್ರದಲ್ಲಿ ನಟಿಸಿರುವ ರವಿಶಂಕರ್, ‘ಮಠ’ ಗುರುಪ್ರಸಾದ್‍ ಮುಂತಾದವರು ಸಹ ಚಿತ್ರದ ಯಾವುದೇ ಸಮಾರಂಭಕ್ಕೂ ಬಂದಿಲ್ಲ. ಈ ಕುರಿತು ಕೇಳಲಾಗಿ, ‘ಅವರಿಗೆ ಫೋನ್‍ ಮಾಡಿದ್ದೆವು. ಆದರೆ, ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲ. ಬಹುಶಃ ಸ್ಟಾರ್ ‍ನಿರ್ಮಾಪಕರು ಅಥವಾ ನಟರಿದ್ದರೆ ಬಂದಿರುತ್ತಿದ್ದರೇನೋ? ಯಾರೂ ಬರದಿದ್ದರೇನು? ಜನ ಬರುತ್ತಾರೆ, ನಮ್ಮ ಕೈ ಹಿಡಿಯುತ್ತಾರೆ ಎಂಬ ನಂಬಿಕೆ ಇದೆ. ನಾವೇನು ಕಾಟಾಚಾರಕ್ಕೆ ಸಿನಿಮಾ ಮಾಡಿಲ್ಲ. ನಿಜಕ್ಕೂ ಚೆನ್ನಾಗಿ ಬಂದಿದೆ’ ಎಂದರು.

‘ರಾನಿ’ ಚಿತ್ರವು ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿದೆ. ಈ ಚಿತ್ರದಲ್ಲಿ ಕಿರಣ್ ರಾಜ್ ಜೊತೆಗೆ ಸಮೀಕ್ಷಾ, ಅಪೂರ್ವ, ರಾಧ್ಯ, ರವಿಶಂಕರ್, ಮೈಕೋ ನಾಗರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಘವೇಂದ್ರ ಬಿ ಕೋಲಾರ ಛಾಯಾಗ್ರಹಣ, ಸಚಿನ್ ಬಸ್ರೂರು ಹಿನ್ನೆಲೆ ಸಂಗೀತ ಮತ್ತು ಮಣಿಕಾಂತ್‍ ಕದ್ರಿ ಸಂಗೀತವಿದೆ.

ಭೂಮಿಕಾ

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

1 hour ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

3 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

4 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

4 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

4 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

8 hours ago