ಮನರಂಜನೆ

‘ಭೀಮ’ ಮತ್ತು ‘ಕೃಷ್ಣ’ನಿಗಾಗಿ ಎರಡು ವಾರ ಮುಂದಕ್ಕೆ ಹೋದ ‘ರಾನಿ’

ಕಿರಣ್‍ ರಾಜ್‍ ಅಭಿನಯದ ‘ರಾನಿ’ ಚಿತ್ರವು ಎರಡು ವಾರ ಮುಂದಕ್ಕೆ ಹೋಗಿದೆ. ಆಗಸ್ಟ್ 30ರಂದು ಬಿಡುಗಡೆ ಆಗಬೇಕಿದ್ದ ಚಿತ್ರವು ಹೀಗೆ ಮುಂದಕ್ಕೆ ಹೋಗಲು ಕಾರಣವೇನು ಎಂಬ ಪ್ರಶ್ನೆ ಬರಬಹುದು. ಅದಕ್ಕೆ ಕಾರಣ ‘ಭೀಮ’ ಮತ್ತು ‘ಕೃಷ್ಣ’. ಅವರಿಬ್ಬರಿಂದಾಗಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ.

ವಿಷಯವೇನು ಎಂದರೆ, ‘ಭೀಮ’ ಮತ್ತು ‘ಕೃಷ್ಣಂ ಪ್ರಣಯ ಸಖಿ’ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿರುವುದರಿಂದ ಮತ್ತು ಮುಂದೆ ಚಿತ್ರ ಪ್ರದರ್ಶನಕ್ಕೆ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ‘ರಾನಿ’ ಚಿತ್ರವನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ. ಅಲ್ಲಿಗೆ ಆಗಸ್ಟ್ 30ರಂದು ಬಿಡುಗಡೆ ಆಗಬೇಕಿದ್ದ ‘ರಾನಿ’, ಇದೀಗ ಸೆ. 12ಕ್ಕೆ ಬಿಡುಗಡೆಯಾಗಲಿದೆ.

ಈ ಕುರಿತು ಚಿತ್ರತಂಡದವರು ಮಂಗಳವಾರ ಒಂದು ಪತ್ರಿಕಾಗೋಷ್ಠಿ ಮಾಡಿ, ಚಿತ್ರ ವಿಷಯ ತಿಳಿಸಿದರು. ಅಷ್ಟೇ ಅಲ್ಲ, ಚಿತ್ರ ಮುಂದಕ್ಕೆ ಹೋಗುತ್ತಿರುವ ಕಾರಣಗಳನ್ನೂ ನೀಡಿದರು.

ಈ ಕುರಿತು ಮಾತನಾಡುವ ಗುರುತೇಜ್‍ ಶೆಟ್ಟಿ, ‘ಎರಡು ಸಿನಿಮಾಗಳು ಒಳ್ಳೆಯ ಪ್ರದರ್ಶನ ಕಾಣುತ್ತಿರುವುದರಿಂದ, ನಮಗೆ ಚಿತ್ರಮಂದಿರಗಳ ಸಮಸ್ಯೆ ಆಗಬಹುದು ಎಂದು ವಿತರಕರು ಹೇಳಿದರು. ಅಷ್ಟೇ ಅಲ್ಲ, ಮುಂದಿನ ವಾರದ ಹೊತ್ತಿಗೆ ಎಷ್ಟು ಚಿತ್ರಮಂದಿರಗಳು ಸಿಗುತ್ತವೋ ಗೊತ್ತಿಲ್ಲ. ಚೆನ್ನಾಗಿ ಶೇರ್‍ ಸಿಗುವಾಗ, ಚಿತ್ರವನ್ನು ಚಿತ್ರಮಂದಿರದಿಂದ ತೆಗೆಯುವುದು ಸರಿಯಲ್ಲ. ಹಾಗಾಗಿ, ಸೆ. 12ರಂದು ಬಿಡುಗಡೆ ಮಾಡುತ್ತಿದ್ದೇವೆ. ನಮ್ಮದು ದೊಡ್ಡ ಬಜೆಟ್‍ನ ಸಿನಿಮಾ. ಸಣ್ಣದಾಗಿ ಬಿಡುಗಡೆ ಮಾಡುವುದಕ್ಕಿಂತ, ಎಲ್ಲರಿಗೂ ದೊಡ್ಡ ಮಟ್ಟದಲ್ಲಿ ರೀಚ್‍ ಆಗಬೇಕು ಎಂಬ ಕಾರಣಕ್ಕೆ ಚಿತ್ರವನ್ನು ಮುಂದೂಡಿದ್ದೇವೆ. ಮೇಲಾಗಿ ಚಿತ್ರದ ಪ್ರಚಾರ ಮಾಡುವುದಕ್ಕೆ ಇನ್ನಷ್ಟು ಸಮಯ ಸಿಕ್ಕಂತಾಗುತ್ತದೆ’ ಎಂದರು.

ಕಿರಣ್‍ ರಾಜ್‍ ಅಭಿನಯದ ‘ಭರ್ಜರಿ ಗಂಡು’, ‘ಬಡ್ಡೀಸ್‍’ ಸೇರಿದಂತೆ ಯಾವುದೇ ಚಿತ್ರ ದೊಡ್ಡ ಯಶಸ್ವಿಯಾಗಿಲ್ಲ. ಹಾಗಾಗಿ, ಈ ಚಿತ್ರ ತಮ್ಮ ಪಾಲಿಗೆ ಬಹಳ ಮಹತ್ವದ್ದು ಎನ್ನುವ ಕಿರಣ್‍, ‘ಈ ಗೆಲುವು ನನಗೆ ಬಹಳ ಮುಖ್ಯ. ಏನೇ ಕನಸು ಮತ್ತು ಗುರಿ ಇದ್ದರೂ, ಒಂದು ಶಕ್ತಿ ಬಹಳ ಮುಖ್ಯವಾಗುತ್ತದೆ. ಆ ಶಕ್ತಿ ಬರಬೇಕು ಎಂದರೆ ನಮ್ಮ ಮೇಲೆ ನಂಬಿಕೆ ಇರಬೇಕು. ಆ ನಂಬಿಕೆ ಬರಬೇಕು ಎಂದರೆ ಈ ಚಿತ್ರ ಗೆಲ್ಲಲೇಬೇಕು. ಇಲ್ಲವಾದರೆ, ನಾನು ಪುನಃ ಮೊದಲಿನಿಂದಲೂ ಶುರು ಮಾಡಬೇಕು. ಯಾವುದೇ ರಾಜಿ ಮಾಡದೆ ಚಿತ್ರ ಮಾಡಿದ್ದೀವಿ. ಈ ಚಿತ್ರ ಗೆದ್ದರೆ ಇನ್ನಷ್ಟು ಚಿತ್ರಗಳನ್ನು ಮಾಡಬಹುದು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ಚಿತ್ರ ನೋಡಿದವರು ಸಹ ಚಿತ್ರದ ಬಗ್ಗೆ ಖುಷಿಯಾಗಿದ್ದಾರೆ’ ಎಂದರು.

‘ರಾನಿ’ ಚಿತ್ರವನ್ನು ಸ್ಟಾರ್ ಕ್ರಿಯೇಷನ್ಸ್ನಡಿ ಚಂದ್ರಕಾಂತ್ ಪೂಜಾರಿ ಮತ್ತು ಉಮೇಶ್ ಹೆಗಡೆ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಕಿರಣ್ ರಾಜ್ ಜೊತೆಗೆ ಸಮೀಕ್ಷಾ, ಅಪೂರ್ವ, ರಾಧ್ಯ, ರವಿಶಂಕರ್, ಮೈಕೋ ನಾಗರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಘವೇಂದ್ರ ಬಿ ಕೋಲಾರ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

6 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

6 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

6 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

6 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

6 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

6 hours ago