ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ದರ್ಶನ್ಗೆ ವಿಶೇಷ ಆತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಸದ್ಯ ವಿಚಾರಣಾಧೀನ ಖೈದಿಯಾಗಿರುವ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ಬಗ್ಗೆ ವರದಿಯಾಗಿತ್ತು.
ಕೈಯಲ್ಲಿ ಕಾಫಿ ಕಪ್ ಇಟ್ಟುಕೊಂಡಿರುವ ದರ್ಶನ್, ಇತರೆ ಮೂವರೊಂದಿಗೆ ಕುಳಿತುಕೊಂಡಿದ್ದರು. ಅವರ ಮತ್ತೊಂದು ಕೈಯಲ್ಲಿ ಸಿಗರೇಟ್ ಇರುವುದು ಕೂಡ ಫೋಟೋದಲ್ಲಿ ಕಾಣಿಸುತ್ತಿತ್ತು.
ಈ ಹಿನ್ನೆಲೆಯಲ್ಲಿ ಈ ಫೋಟೋ ನೋಡಿದ ಮೇಲೆ ಆಕ್ರೋಶಗೊಂಡ ಜನತೆ, ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದರು.
ಈ ಬೆನ್ನಲ್ಲೇ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರ ಜಿ.ಪರಮೇಶ್ವರ್ ಅವರು, ಪ್ರಕರಣಕ್ಕೆ ಸಂಬಂಧಿಸಿಂತೆ 7 ಮಂದಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲಿ ಫೋಟೋ ತೆಗೆದವರು ಯಾರು ಹಾಗೂ ಅದು ಯಾರ ಮೊಬೈಲ್ ಅಂತಾನೂ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…