ಮನರಂಜನೆ

ಜನವರಿ ಎರಡನೇ ವಾರದಲ್ಲಿ ಬರಲಿದೆ ‘ರಾಯಲ್’ ಟ್ರೇಲರ್‍

ದಿನಕರ್‍ ತೂಗುದೀಪ ನಿರ್ದೇಶನದಲ್ಲಿ ವಿರಾಟ್‍ ಅಭಿನಯಿಸಿರುವ ‘ರಾಯಲ್‍’ ಚಿತ್ರವು ಜನವರಿ 24ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರದ ಟ್ರೇಲರ್‍ ಬಿಡುಗಡೆ ಆಗಲಿದೆ.

‘ರಾಯಲ್’ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ದಿನಕರ್ ತೂಗುದೀಪ, ‘ಚಿತ್ರದ ಹಾಡುಗಳು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿವೆ. ಚಿತ್ರ ಚೆನ್ನಾಗಿ ಮೂಡಿಬರುವುದಕ್ಕೆ ಕಾರಣ ಕಥೆಗಾರ ರಘು ನಿಡುವಳ್ಳಿ. ಸಂಭಾಷಣೆಯನ್ನೂ ಅವರೇ ಬರೆದಿದ್ದಾರೆ. ತಂತ್ರಜ್ಞರ ಸಹಕಾರದಿಂದ ಬಹಳ ಚೆನ್ನಾಗಿ ಮೂಡಿಬಂದಿದೆ.

ನಿರ್ಮಾಪಕರು ನಾನು ಕೇಳಿದ್ದೆಲ್ಲವನ್ನೂ ಕೊಟ್ಟಿದ್ದಾರೆ. ಈ ಚಿತ್ರದಿಂದ ದುಡ್ಡು ಮಾಡಬೇಕು ಎನ್ನುವುದಕ್ಕಿಂತ, ಚಿತ್ರರಂಗಕ್ಕೊಬ್ಬ ಒಳ್ಳೆಯ ಹೀರೋ ಕೊಡಬೇಕು ಎಂದು ಸಹಕಾರ ಕೊಟ್ಟರು. ವಿರಾಟ್‍ ಎರಡನೆಯ ಸಿನಿಮಾಗೆ ಇಷ್ಟೊಂದು ಖರ್ಚು ಮಾಡಬೇಕಿತ್ತಾ ಎಂದೆನಿಸಬಹುದು. ಆದರೆ, ವಿರಾಟ್‍ನನ್ನು ಕೊಡುಗೆಯಾಗಿ ಕೊಡಬೇಕು ಎಂಬ ಉದ್ದೇಶದಿಂದ ಚಿತ್ರ ಮಾಡಿದ್ದಾರೆ. ಜನವರಿ ಎರಡನೇ ವಾರದಲ್ಲಿ ಟ್ರೇಲರ್‍ ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.

ಈ ಹಿಂದೆ ‘ಕಿಸ್‍’ ಚಿತ್ರದ ಮೂಲಕ ಚಿತ್ರರಂಗಕ್ಕೆ ನಾಯಕನಾಗಿ ಪರಿಚಿತರಾದ ವಿರಾಟ್‍, ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ‘ಈ ಚಿತ್ರ ಆಗುವುದಕ್ಕೆ ಪ್ರಮುಖ ಕಾರಣ ನಿರ್ಮಾಪಕರಾದ ಜಯಣ್ಣ ಮತ್ತು ಭೋಗೇಂದ್ರ. ಅವರ ಬ್ಯಾನರ್‍ನಲ್ಲಿ ನನಗೆ ಇದು ಎರಡನೆಯ ಸಿನಿಮಾ. ದಿನಕರ್‍ ಅವರ ನಿರ್ದೇಶನದಲ್ಲಿ ಅಭಿನಯ ಮಾಡುವುದಕ್ಕೆ ನನಗೆ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಅವರಿಂದ ಸಾಕಷ್ಟು ಕಲಿತಿದ್ದೇನೆ. ಚಿತ್ರ ನಿಜಕ್ಕೂ ರಾಯಲ್‍ ಆಗಿ ಬಂದಿದೆ. ಚಿತ್ರದಲ್ಲಿ ಸಾಕಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ’ ಎಂದರು.

ಚಿತ್ರದ ನಾಯಕಿಯಾಗಿ ಅಭಿನಯಿಸಿರುವ ಸಂಜನಾ ಮಾತನಾಡಿ, ‘ಚಿತ್ರ ಚೆನ್ನಾಗಿ ಬಂದಿದೆ. ಹಾಡುಗಳು ಯಶಸ್ವಿಯಾಗಿವೆ. ದಿನಕರ್‍ ಅವರ ಚಿತ್ರಗಳನ್ನು ಎಲ್ಲರೂ ನೋಡಿದ್ದಾರೆ. ಇಷ್ಟಪಟ್ಟಿದ್ದಾರೆ. ಅವರ ಚಿತ್ರಜೀವನದಲ್ಲೇ ಇದು ವಿಭಿನ್ನವಾದ ಚಿತ್ರ. ಚಿತ್ರದಲ್ಲಿ ಹಲವು ಸರ್‍ಪ್ರೈಸ್‍ಗಳಿವೆ. ಹೊಸ ವರ್ಷಕ್ಕೆ ಒಂದು ವಿಶೇಷ ಚಿತ್ರವಾಗಲಿದೆ’ ಎಂದರು.

‘ರಾಯಲ್‍’ ಚಿತ್ರದಲ್ಲಿ ವಿರಾಟ್‍ ಮತ್ತು ಸಂಜನಾ ಆನಂದ್‍ ಜೊತೆಗೆ ರಘು ಮುಖರ್ಜಿ, ಛಾಯಾ ಸಿಂಗ್‍, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್‍ ಶೆಟ್ಟಿ, ರವಿ ಭಟ್‍, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸಂಕೇತ್ ಛಾಯಾಗ್ರಹಣ, ಚರಣ್‍ ರಾಜ್‍ ಸಂಗೀತವಿದೆ. ಈ ಚಿತ್ರವನ್ನು ಜಯಣ್ಣ ಕಂಬೈನ್ಸ್ ಬ್ಯಾನರ್‍ ಅಡಿ ಜಯಣ್ಣ ಮತ್ತು ಭೋಗೇಂದ್ರ ಜೊತೆಯಾಗಿ ನಿರ್ಮಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

16 mins ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

28 mins ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

38 mins ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

40 mins ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

46 mins ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

48 mins ago